ದರೆಗುಡ್ಡೆಗೆ ಬೇಕಿದೆ ವ್ಯವಸ್ಥಿತ ಪ್ರಥಮ ಚಿಕಿತ್ಸೆ  ಕೇಂದ್ರ 


Team Udayavani, Aug 20, 2021, 4:00 AM IST

ದರೆಗುಡ್ಡೆಗೆ ಬೇಕಿದೆ ವ್ಯವಸ್ಥಿತ ಪ್ರಥಮ ಚಿಕಿತ್ಸೆ  ಕೇಂದ್ರ 

ದರೆಗುಡ್ಡೆ ಗ್ರಾಮಕ್ಕೆ ಮೂಲಸೌಲಭ್ಯಗಳನ್ನು ಒದಗಿಸಬೇಕಿದೆ. ವ್ಯವಸ್ಥಿತ ಪ್ರಥಮ ಚಿಕಿತ್ಸೆ ಕೇಂದ್ರ, ಪಶು ಚಿಕಿತ್ಸಾಲಯ, ರಸ್ತೆ ನಿರ್ಮಾಣ, ಶ್ಮಶಾನ ನಿರ್ವಹಣೆ ಅಗತ್ಯವಾಗಿ ಆಗಬೇಕಿದೆ. ಅಕ್ರಮ ಸಕ್ರಮ ಪ್ರಕರಣಗಳು ಶೀಘ್ರ ಇತ್ಯರ್ಥಗೊಂಡರೆ  ಸ್ಥಳೀಯರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರನ್ನು ಗಮನಸೆಳೆಯಲು ಉದಯವಾಣಿ ಸುದಿನದ “ಒಂದು ಊರು-ಹಲವು ದೂರು’ ಅಭಿಯಾನದ  ಮೂಲಕ ಪ್ರಯತ್ನಿಸಲಾಗಿದೆ.

ಮೂಡುಬಿದಿರೆ: ತಾಲೂಕಿನ ಈಶಾನ್ಯ ಗಡಿ ಯಲ್ಲಿರುವ ದರೆಗುಡ್ಡೆ ಪ್ರಕೃತಿ ರಮಣೀಯ ತಾಣ. ತೀರಾ ಹಳ್ಳಿ ಪ್ರದೇಶ. ದರೆಗುಡ್ಡೆ ಗ್ರಾಮದ ಅಂಗನವಾಡಿ ಪಕ್ಕದಲ್ಲಿ, ಬಹಳ ಕಾಲದ ಹಿಂದೆ ನಿರ್ಮಿಸಲಾಗಿರುವ ಪ್ರಥಮ ಚಿಕಿತ್ಸೆ ಕೇಂದ್ರ ಕಟ್ಟಡವೇನೋ ಇದೆ. ಆಗೊಮ್ಮೆ ಈಗೊಮ್ಮೆ ಈ ಕಟ್ಟಡವನ್ನು ಸುಸ್ಥಿತಿಯಲ್ಲಿಡುವ ಕಾಮಗಾರಿಗಳೂ ನಡೆಯುತ್ತವೆ. ಆದರೆ ಇಲ್ಲಿಯವರೆಗೂ ಸರಕಾರಿ ವೈದ್ಯರು ಕಾಣಿಸುತ್ತಿಲ್ಲ.

ದಿನದ 24 ಗಂಟೆಯೂ ಜನರಿಗೆ ಲಭ್ಯವಾಗುವಂತೆ ವೈದ್ಯ ಕೀಯ ಸೇವೆ ನೀಡುವಂತೆ ವೈದ್ಯರನ್ನು/ವೈದ್ಯಕೀಯ ಸಿಬಂದಿಯನ್ನು ಇಲ್ಲಿಗೆ ನೇಮಿಸಬೇಕು.

ಪಶು ಚಿಕಿತ್ಸಾಲಯ :

ದರೆಗುಡ್ಡೆಯಲ್ಲಿ ಕೃಷಿ ಮತ್ತು ಹೈನುಗಾರಿಕೆ ಶೇ. 90ರಷ್ಟು ಮಂದಿಗೆ ಪ್ರಧಾನ ಜೀವನೋಪಾಯವಾಗಿದೆ. ಹೈನುಗಾರಿಕೆಗೆ ಸೂಕ್ತವಾದ ವಾತಾವರಣ ಇಲ್ಲಿದೆ. 80ರಷ್ಟು ಮಂದಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಮಾರು 600 ಲೀ. ಹಾಲು ಇಲ್ಲಿ ಉತ್ಪಾದನೆಯಾಗುತ್ತಿದೆ. ಆದರೆ ಇಲ್ಲೊಂದು ಪಶು ಚಿಕಿತ್ಸಾಲಯ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ. ಪಶುಗಳಿಗೆ ಆರೋಗ್ಯ ಸಮಸ್ಯೆ ಕಾಡಿದಾಗ ಈ ಭಾಗದ ಜನರು ದೂರದ ಮೂಡುಮಾರ್ನಾಡು ಗ್ರಾಮಕ್ಕೆ ಹೋಗಿ ಅಲ್ಲಿಂದ ವೈದ್ಯರನ್ನು ಕರೆಯಬೇಕಾಗುತ್ತದೆ. ಇಲ್ಲವೇ ಕರೆತರಬೇಕಾಗುತ್ತದೆ. ಇದು ಆರ್ಥಿಕವಾಗಿ ಹೊರೆಯಾಗಿ ಪರಿಣಮಿಸುತ್ತಿರುವುದರಿಂದ ಹೈನುಗಾರರ ಬೇಡಿಕೆಯನ್ನು ಈಡೇರಿಸಬೇಕಿದೆ. ಪಶುವೈದ್ಯಕೀಯ ಕೇಂದ್ರದ ಸ್ಥಾಪನೆ, ಪಶುವೈದ್ಯರ ನೇಮಕ ತೀರಾ ಅಗತ್ಯವಾಗಿದೆ.

ಇತರ ಸಮಸ್ಯೆಗಳೇನು? :

  • ತೀರಾ ಗ್ರಾಮೀಣ ಪ್ರದೇಶವಾದ ದರೆಗುಡ್ಡೆಯಲ್ಲಿ ಶ್ಮಶಾನ ನಿರ್ಮಾಣ ಇನ್ನೂ ಪೂರ್ಣವಾಗಿಲ್ಲ. ಬಹಳಷ್ಟು ಕೆಲಸ ಬಾಕಿ ಇದೆ. ಇದರ ಜತೆಗೆ ದರೆಗುಡ್ಡೆ ಗ್ರಾಮದ ಪಾಡ್ಯಾರು ಬದಿಯಲ್ಲಿ ಒಂದು ಶ್ಮಶಾನದ ಆವಶ್ಯಕತೆ ಇದೆ.
  • ಹಿತ್ತಿಲು -ವಿಟ್ಠಲ ದೇವಸ್ಥಾನ ರಸ್ತೆ ಅಭಿವೃದ್ಧಿ ಆಗಬೇಕು. ನರಂಗೊಟ್ಟು ರಸ್ತೆ ಅಭಿವೃದ್ಧಿಗೊಳಿಸಿದರೆ ಅದನ್ನು ನರಂಗೊಟ್ಟು ಕಡೆಯಿಂದ ವಾಲ್ಪಾಡಿಗೆ ಸಂಪರ್ಕ ಕಲ್ಪಿಸುವ ಕೂಡುರಸ್ತೆಯಾಗಿ ಮಾರ್ಪಾಡು ಮಾಡಬಹುದು.
  • ದರೆಗುಡ್ಡೆಯ “ನರಂಗೊಟ್ಟು ಕೆರೆ’ ಮತ್ತು ಪಣಪಿಲ ಹಿತ್ತಿಲುರಸ್ತೆಯ “ಕೆಂಚರಟ್ಟ’ ಇವು ಗಳ ಅಭಿವೃದ್ಧಿಯಾದರೆ ಜನರ ನಿತ್ಯಬಳಕೆ, ಕೃಷಿ ಉದ್ದೇಶಕ್ಕೆ ಮಾತ್ರವಲ್ಲ ಪ್ರಾಣಿ-ಪಕ್ಷಿಗಳಿಗೆ ಸಾಕಷ್ಟು ನೀರು ಲಭಿಸಲು ಸಾಧ್ಯ.
  • ದರೆಗುಡ್ಡೆ ಪ್ರಾಥಮಿಕ ಶಾಲೆಯ ಹೆಸರಲ್ಲಿ ಆರ್‌ಟಿಸಿ ಆಗಿಲ್ಲ . ಗ್ರಾ.ಪಂ. ಕಟ್ಟಡದ ನಿವೇಶನಕ್ಕೂ ಆರ್‌ಟಿಸಿ ಆಗಿಲ್ಲ!
  • ವಸತಿ ರಹಿತರಿಗೆ ನೀಡಲು ಮನೆ ನಿವೇಶನಕ್ಕೆ ಸೂಕ್ತವಾದ ಜಾಗ ದರೆಗುಡ್ಡೆಯಲ್ಲಿ ಸಾಕಷ್ಟಿದ್ದು, ವಸತಿ ರಹಿತರಿಗೆ ನೀಡಲು ಕ್ರಮ ಜರಗಿಸಬೇಕಿದೆ. 94ಸಿ ಅರ್ಜಿಗೆ ಸಂಬಂಧಿಸಿದ ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಬಗೆಹರಿಸಬೇಕಾಗಿದೆ. ಅಕ್ರಮ ಸಕ್ರಮ ಪ್ರಕರಣಗಳು ಶೀಘ್ರ ಇತ್ಯರ್ಥಕ್ಕಾಗಿ ಕಾಯುತ್ತಿವೆ.
  • ಸರಕಾರಿ ಪ್ರೌಢಶಾಲೆ, ಸರಕಾರಿ ಹಾಸ್ಟೆಲ್‌ ಇರುವ ದರೆಗುಡ್ಡೆಯಲ್ಲಿ ಸರಕಾರಿ ಪ.ಪೂ. ಕಾಲೇಜು ಸ್ಥಾಪನೆಯಾಗಬೇಕೆಂಬ ಬೇಡಿಕೆ ಇದೆ. ಇದರಿಂದ ಆಸುಪಾಸಿನ ಗ್ರಾಮಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗುವುದು.

-ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.