ನಗರದೊಳಗೊಂದು ಕತ್ತಲ ಹಾದಿ: ಇಲ್ಲಿ ಟಾರ್ಚ್‌ ಹಾಕಿಕೊಂಡೇ ಹೋಗಬೇಕು!


Team Udayavani, Jan 25, 2019, 5:41 AM IST

25-january-4.jpg

ಮಹಾನಗರ: ಕತ್ತಲಾದೊಡನೆ ಈ ರಸ್ತೆಯಲ್ಲಿ ಬಂದರೆ ನಿಮಗೆ ಗ್ರಾಮೀಣ ಭಾಗದಲ್ಲಿ ಸಂಚರಿಸಿದ ಅನುಭವವಾಗದೇ ಇರದು. ಹೌದು.. ಸುತ್ತಲೂ ಕಗ್ಗತ್ತಲು, ಪಾದಚಾರಿಗಳ ಕೈಯಲ್ಲಿ ಟಾರ್ಚ್‌…

ಇದು ಬೇರೆ ಊರಿನ ಕಥೆಯಲ್ಲ . ಅಭಿ ವೃದ್ಧಿ ಹೊಂದುತ್ತಿರುವ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮಂಗಳೂರಿನ ಹೃದಯ ಭಾಗದಲ್ಲಿರುವ ಕೋರ್ಟ್‌ ರಸ್ತೆಯ ಅವಸ್ಥೆ. ರಸ್ತೆ ಕಾಮಗಾರಿ ಭಾಗಶಃ ಮುಗಿದು ತಿಂಗಳುಗಳು ಕಳೆದರೂ ಈ ರಸ್ತೆಗೆ ದಾರಿದೀಪದ ವ್ಯವಸ್ಥೆ ಕಲ್ಪಿಸಲಾಗಿಲ್ಲ. ಆ ಕಾರಣಕ್ಕೆ ಈ ಭಾಗದಲ್ಲಿ ನಡೆಯುವ ಪಾದಚಾರಿಗಳು ಕೈಯಲ್ಲಿ ಮೊಬೈಲ್‌ ಟಾರ್ಚ್‌ ಹಿಡಿದು ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕರಂಗಲ್ಪಾಡಿಯಿಂದ ಕೆ.ಎಸ್‌. ರಾವ್‌ ರಸ್ತೆಗೆ ಸಂಪರ್ಕ ಕಲ್ಪಿಸುವ 280 ಮೀ. ಉದ್ದದ ಕೋರ್ಟ್‌ ರಸ್ತೆ ಕಾಂಕ್ರೀಟ್ ಕಾಮಗಾರಿಗೆ 2015ರ ಜೂನ್‌ 6ರಂದು ಶಿಲಾನ್ಯಾಸ ನಡೆದಿತ್ತು. ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಮತ್ತು ಆಗಿನ ಲೋಕೋಪಯೋಗಿ ಸಚಿವ ಮಹಾದೇವಪ್ಪ ಶಿಲಾನ್ಯಾಸ ನೆರವೇರಿಸಿದ್ದರು. ಲೋಕೋಪಯೋಗಿ ಇಲಾಖೆಯಿಂದ 11 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾದ ರಸ್ತೆ ಕಾಮಗಾರಿ 18 ತಿಂಗಳಲ್ಲಿ ಪೂರ್ಣಗೊಳಿಸುವ ಭರವಸೆ ನೀಡಲಾಗಿತ್ತು. ಆದರೆ ವಿವಿಧ ತಾಂತ್ರಿಕ ಸಮಸ್ಯೆಗಳ ಪರಿಣಾಮ ಮೂರು ವರ್ಷಗಳ ವರೆಗೆ ರಸ್ತೆ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇದೀಗ ರಸ್ತೆ ಕಾಮಗಾರಿ ಭಾಗಶಃ ಪೂರ್ಣಗೊಂಡರೂ ಪಾದಚಾರಿಗಳು ಈ ರಸ್ತೆಯಲ್ಲಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ.

ವಾಹನ ಸವಾರರಿಗೆ ಭಯ
ಕರಂಗಲ್ಪಾಡಿಯಿಂದ ಕೆ.ಎಸ್‌. ರಾವ್‌ ರಸ್ತೆಗೆ ತೆರಳಲು ಕೋರ್ಟ್‌ ರಸ್ತೆ ಸಮೀಪದ ಮಾರ್ಗ. ಆ ಹಿನ್ನೆಲೆಯಲ್ಲಿ ಬಹುತೇಕ ವಾಹನಗಳು ಆ ಮಾರ್ಗದಲ್ಲೇ ಸಂಚರಿಸುತ್ತವೆ. ಅಲ್ಲದೆ ಪಿವಿಎಸ್‌ ರಸ್ತೆಯಲ್ಲಿ ವಾಹನ ದಟ್ಟಣೆಯು ಹೆಚ್ಚುವುದರಿಂದ ಈ ರಸ್ತೆ ಮೂಲಕವೇ ವಾಹನ ಸವಾರರು, ಪಾದಚಾರಿಗಳು ಸಂಚರಿಸುತ್ತಾರೆ. ಹಗಲು ಹೊತ್ತಿನಲ್ಲಿ ವಾಹನ ಸಂಚಾರ ಹಾಗೂ ಜನನಿಬೀಡವಾಗಿರುವ ಪ್ರದೇಶ ರಾತ್ರಿಯಾಗುತ್ತಿದ್ದಂತೆ ಖಾಲಿ ಇರುತ್ತದೆ. ರಸ್ತೆಯ ಎರಡು ಭಾಗಗಳಲ್ಲೂ ಮರಗಿಡಗಳು ದಟ್ಟವಾಗಿ ಬೆಳೆದಿರುವುದರಿಂದ ಸಂಜೆಯಾಗುತ್ತಿದ್ದಂತೆ ರಸ್ತೆ ಸುತ್ತಮುತ್ತ ಕಗ್ಗತ್ತಲು ಆವರಿಸಿಕೊಳ್ಳುತ್ತದೆ. ಪಾದಚಾರಿಗಳು ಮಾತ್ರವಲ್ಲದೆ ವಾಹನ ಸವಾರರು ಈ ಮಾರ್ಗವಾಗಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ.

ರಸ್ತೆ ಕಾಮಗಾರಿ ಪೂರ್ಣಗೊಳ್ಳಲು ಮೂರು ವರ್ಷಗಳೇ ಬೇಕಾಯಿತು. ಇನ್ನೂ ಬೀದಿ ದೀಪಗಳನ್ನು ಅಳವಡಿಸುವ ಕಾರ್ಯ ಪೂರ್ಣಗೊಳ್ಳಲು ಇನ್ನೆಷ್ಟು ಸಮಯಬೇಕಾದಿತು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಗುತ್ತಿಗೆದಾರರ ಜವಾಬ್ದಾರಿ
ಕರಂಗಲ್ಪಾಡಿಯಿಂದ ಕೆ.ಎಸ್‌. ರಾವ್‌ ರಸ್ತೆಗೆ ಸಂಪರ್ಕ ಕಲ್ಪಿಸುವ 280 ಮೀ. ಉದ್ದದ ಕೋರ್ಟ್‌ ರಸ್ತೆ ಕಾಂಕ್ರೀಟ್ ಕಾಮಗಾರಿಯನ್ನು 11 ಕೋಟಿ ರೂ. ವೆಚ್ಚದಲ್ಲಿ ಮಾಡಲಾಗುತ್ತಿದೆ. ನೀಡಿದ ಗುತ್ತಿಗೆ ಆಧಾರದ ಮೇಲೆ ಕಾಂಕ್ರೀಟ್ ರಸ್ತೆ, ಚರಂಡಿ, ಫುಟ್ಪಾತ್‌, ಬೀದಿ ದೀಪಗಳ ವ್ಯವಸ್ಥೆ ನೀಡುವುದು ಗುತ್ತಿಗೆದಾರನ ಜವಾಬ್ದಾರಿ. ಸಣ್ಣಪುಟ್ಟ ಕೆಲಸ ಇನ್ನೂ ಬಾಕಿ ಇರುವುದರಿಂದ ಬೀದಿದೀಪ ಅಳವಡಿಸಿಲ್ಲ.
– ಎ.ಸಿ. ವಿನಯರಾಜ್‌,
 ಸ್ಥಳೀಯ ಕಾರ್ಪೊರೇಟರ್‌

ಶೀಘ್ರ ಬೀದಿ ದೀಪ ಅಳವಡಿಕೆ
ರಸ್ತೆಯ ಬಹುತೇಕ ಕಾಮಗಾರಿ ಮುಗಿದಿದೆ. ರಸ್ತೆಯ ಬದಿಗಳಲ್ಲಿ ಸುರಕ್ಷತಾ ಕೆಲಸ ಬಾಕಿ ಇದೆ.ಅದನ್ನು ಪೂರ್ಣ ಗೊಳಿಸಿದ ಬಳಿಕ ಬೀದಿ ದೀಪ ಅಳವಡಿಸುವ ಕೆಲಸ ಅಗಲಿದೆ.
– ಕಾಂತರಾಜು,
ಅಧೀಕ್ಷಕ ಅಭಿಯಂತರ, ಲೋಕೋಪಯೋಗಿ ಇಲಾಖೆ

ವಿಶೇಷ ವರದಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.