ಧರ್ಮಸ್ಥಳ-ಬೆಂಗಳೂರು ಓಡಾಟಕ್ಕೆ 6 ಹೆಚ್ಚುವರಿ ಸ್ಲೀಪರ್‌ ಕೋಚ್‌

ದಸರ ಸಂದರ್ಭ ಓಡಾಟ ನಿರೀಕ್ಷೆ; 1.50 ಕೋ.ರೂ. ವೆಚ್ಚದಲ್ಲಿ ಡಿಪ್ಪೊ ನವೀಕರಣ

Team Udayavani, Sep 7, 2019, 5:23 AM IST

k-2

ಬೆಳ್ತಂಗಡಿ: ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಹೊರರಾಜ್ಯಗಳಿಂದಲೂ ಅಪಾರ ಸಂಖ್ಯೆ ಭಕ್ತರು ಭೇಟಿ ನೀಡುವುದರಿಂದ ಕೆಎಸ್‌ಆರ್‌ಟಿಸಿಗೆ ಅತೀ ಹೆಚ್ಚು ಆದಾಯ ತರುವ ಪ್ರವಾಸಿ ತಾಣವಾಗಿ ಕೈಹಿಡಿದಿದೆ.

ಇದೀಗ ಪ್ರಯಾಣಿಕರ ಅನುಕೂಲಕ್ಕೆಂದು ಧರ್ಮಸ್ಥಳ ಕೆಎಸ್‌ಟರ್‌ಟಿಸಿ ಘಟಕಕ್ಕೆ ಹೆಚ್ಚುವರಿ 6 ಸ್ಲೀಪರ್‌ ಕೋಚ್‌ ಬಸ್‌ಗಳು ಮಂಜೂರಾಗಿದ್ದು, ದಸರಾ ಸಂದರ್ಭ ಓಡಾಟ ನಡೆಸುವ ನಿರೀಕ್ಷೆಯಲ್ಲಿದೆ.

ರಾಜ್ಯ ಕೆಸ್‌ಆರ್‌ಟಿಸಿ ವಿಭಾಗಕ್ಕೆ ಅತ್ಯಾಧುನಿಕ ಸೌಲಭ್ಯವುಳ್ಳ ಒಟ್ಟು 12 ಸ್ಲೀಪರ್‌ ಕೋಚ್‌ ಬಸ್‌ಗಳು ಮಂಜೂರಾಗಿದ್ದು, ಈ ಪೈಕಿ 6 ಸ್ಲೀಪರ್‌ ಕೋಚ್‌ ಬಸ್‌ಗಳು ಧರ್ಮಸ್ಥಳ ಘಟಕಕ್ಕೆ ಸೇರ್ಪಡೆಗೊಳ್ಳುವ ಮೂಲಕ ಕರ್ನಾಟಕ ಸಾರಿಗೆ ಪ್ರಯಾಣಿಕರಿಗೆ ಮತ್ತಷ್ಟು ಸೇವೆ ವಿಸ್ತರಿಸಿದೆ.

ಪ್ರತಿನಿತ್ಯ 72 ಬಸ್‌ ಓಡಾಟ
ಸದ್ಯ ಧರ್ಮಸ್ಥಳ ಹಾಸನ ಮಾರ್ಗವಾಗಿ ಪ್ರತಿನಿತ್ಯ ಪ್ರತಿ 15 ನಿಮಿಷಕ್ಕೊಂದರಂತೆ ಬೆಳಿಗ್ಗೆ 4.30ರಿಂದ ರಾತ್ರಿ 11ರವರೆಗೆ 72 ಬಸ್‌ ಓಡಾಟ ನಡೆಸುತ್ತಿದೆ. 4 ನಾನ್‌ ಎಸಿ ಸ್ಲೀಪರ್‌, 5 ರಾಜಹಂಸ, 1 ಐರಾವತ ಕ್ಲಬ್‌ ಕ್ಲಾಸ್‌ ಸೇರಿದಂತೆ 64 ಕರ್ನಾಟಕ ಸುವರ್ಣ ಸಾರಿಗೆ ಟ್ರಿಪ್‌ಗ್ಳು ದಿನನಿತ್ಯ ಪ್ರಯಾಣಿಕರ ಅನುಕೂಲಕ್ಕೆ ಲಭ್ಯವಿದೆ. ವಾರಾಂತ್ಯ ರಜಾ ದಿನ ಹಾಗೂ ಶಿವರಾತ್ರಿ, ಲಕ್ಷ ದೀಪೋತ್ಸವ ಸೇರಿದಂತೆ ವಿಶೇಷ ಹಬ್ಬಗಳಂದು ಹೆಚ್ಚುವರಿ ಬಸ್‌ ನಿಯೋಜಿಸಲಾಗುತ್ತಿದೆ. ಇದರ ಜತೆಗೆ ಹೆಚ್ಚುವರಿ 6 ಸ್ಲೀಪರ್‌ ಬಸ್‌ ಸೇವೆ ಲಭ್ಯವಾಗಿರುವುದರಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್‌ ಶಿವರಾಂ ನಾಯ್ಕ ತಿಳಿಸಿದ್ದಾರೆ.

1.50 ಕೊ.ರೂ.ವೆಚ್ಚದಲ್ಲಿ ಡಿಪ್ಪೊ ನವೀಕರಣ
ಧರ್ಮಸ್ಥಳ, ಮಂಗಳೂರು, ಕುಂದಾಪುರ ಡಿಪ್ಪೊಗಳು 1984, 85ರಲ್ಲಿ ನಿರ್ಮಿಸಿದ್ದರಿಂದ 35ವರ್ಷಕ್ಕೂ ಹಳೆಯದ್ದಾಗಿವೆ. ಧರ್ಮಸ್ಥಳ ಡಿಪ್ಪೊ ಕಾರ್ಯಕ್ಷಮತೆ ಅಧಿಕವಾಗಿರುವುದರಿಂದ ಮೊದಲ ಹಂತದಲ್ಲಿ 1.50 ಕೋ.ರೂ. ವೆಚ್ಚದಲ್ಲಿ ಡಿಪ್ಪೋ ನವೀಕರಣಕ್ಕೆ ಇ-ಟೆಂಡರ್‌ ಕರೆಯಲಾಗಿದೆ. ಈ ಮೂಲಕ ಪೆಟ್ರೋಲ್‌ ಬಂಕ್‌, ವಿದ್ಯುತ್‌ ಸಂಪರ್ಕ, ಬಸ್‌ ಗರಾಜ್‌ ಸ್ಥಳ ವಿಸ್ತರಣೆ ನಡೆಯಲಿದ್ದು, ಆಧುನಿಕ ಟಚ್‌ ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಾಂತ್ರಿಕ ಅಧಿಕಾರಿ ತಿಳಿಸಿದ್ದಾರೆ.

1.39 ಕೋ.ರೂ.ವೆಚ್ಚದಲ್ಲಿ ನೌಕರರಿಗೆ ವಸತಿಗೃಹ
ಧರ್ಮಸ್ಥಳ ಕರ್ನಾಟಕ ಸಾರಿಗೆ ನೌಕರರಿಗಾಗಿ 12 ಕೊಠಡಿ ಹೊಂದಿರುವ 1.35 ಕೋ.ರೂ.ನ ನೂತನ ವಸತಿ ಗೃಹ ಪ್ರಸಕ್ತ ಡಿಪ್ಪೋ ಮುಂಭಾಗ ನಿರ್ಮಾಣವಾಗುತ್ತಿದೆ. ಜನವರಿಯಲ್ಲಿ ಕಾಮಗಾರಿ ಆರಂಭಗೊಂಡಿದ್ದು, ಶೀಘ್ರದಲ್ಲಿ ನೌಕರರ ಬಳಕೆಗೆ ಲಭ್ಯವಾಗಲಿದೆ. ಸಮೀಪದಲ್ಲೆ ಇರುವ 32 ಕೊಠಡಿಯುಳ್ಳ ಹಳೇ ವಸತಿಗೃಹ ನವೀಕರಣಕ್ಕೂ 81 ಲಕ್ಷ ರೂ. ಮಂಜೂರಾಗಿದ್ದು, ನೀರಿನ ಸಂಪರ್ಕ, ರಸ್ತೆ, ಡ್ರೈನೇಜ್‌, ವಿದ್ಯುತ್‌ ಸಲಕರಣೆ ಜೋಡೆಣೆ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲಿದೆ.

ರಾಜ್ಯ ಹಾಗೂ ಹೊರರಾಜ್ಯದ ಯಾತ್ರಾರ್ಥಿಗಳು ಹಾಗೂ ಪ್ರಯಾಣಿಕರ ಬೇಡಿಕೆಗಣುಗುಣವಾಗಿ ಧರ್ಮಸ್ಥಳ ಘಟಕಕ್ಕೆ 6ಹೊಸ ಸ್ಲಿàಪರ್‌ ಕೋಚ್‌ ಬಸ್‌ಗಳು ಮಂಜೂರಾಗಿವೆ. ದಸರ ಮುನ್ನವೇ ಬಸ್‌ ಓಡಾಟ ನಡೆಸುವ ನಿರೀಕ್ಷೆಯಿದೆ.
ನಾಗೇಂದ್ರ, ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ

ಧರ್ಮಸ್ಥಳ ಘಟಕದಿಂದ ಅತೀ ಹೆಚ್ಚು ಬಸ್‌ ಓಡಾಟ ನಡೆಸುತ್ತಿರುವುದರಿಂದ ಸುಧಾರಿತ ತಂತ್ರಜ್ಞಾನವುಳ್ಳ ಡಿಪ್ಪೊಗಳು ಅವಶ್ಯವಾಗಿವೆ. ನೂತನ ವಸತಿ ಗೃಹ ನಿರ್ಮಾಣ ಹಂತದಲ್ಲಿದ್ದು, ಡಿಪ್ಪೊ ಹಾಗೂ ಹಳೇ ವಸತಿಗೃಹ ನವೀಕರಣ ಟೆಂಡರ್‌ ಕರೆಯಲಾಗಿದ್ದು, ಒಪ್ಪಂದ ಪತ್ರ ಲಭಿಸಿದಲ್ಲಿ ಕಾಮಗಾರಿ ಆರಂಭಿಸಲಾಗುವುದು.
ಶರತ್‌ ಕುಮಾರ್‌ ಎನ್‌., ವಿಭಾಗ ಇಂಜಿನಿಯರ್‌

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.