ಪುಟಾಣಿರೈಲು ಓಡಾಟಕ್ಕೆ ಬಾಟಲ್‌ ಪಾಮ್‌ ಮರ ಅಡ್ಡಿ ಕಡಿಯಲು ಡಿಸಿ ಅನುಮತಿ


Team Udayavani, Jul 24, 2018, 1:30 PM IST

kadri-park-balamangala-rail.jpg

ಮಹಾನಗರ: ಕದ್ರಿ ಪಾರ್ಕ್‌ ನಲ್ಲಿ ಮಕ್ಕಳ ಮನೋರಂಜನೆಯ ಭಾಗವಾದ ಪುಟಾಣಿ ರೈಲು ಆಗಮಿಸಿ ಆರು ತಿಂಗಳಾದರೂ ಮಕ್ಕಳಿಗೆ ರೈಲಿನಲ್ಲಿ ಓಡಾಡುವ ಭಾಗ್ಯ ಸಿಕ್ಕಿಲ್ಲ. ಕಾರಣ ರೈಲು ಓಡಾಟಕ್ಕೆ ಅಡ್ಡಿಯಾಗಿದ್ದ ಬಾಟಲ್‌ ಪಾಮ್‌ ಮರಗಳು. ಇದೀಗ ಅವುಗಳನ್ನು ಕಡಿಯಲು ಜಿಲ್ಲಾಧಿಕಾರಿಯವರಿಂದ ಅನುಮತಿ ಸಿಕ್ಕಿದ್ದು, ಆ ಮೂಲಕ ರೈಲು ಓಡಾಟಕ್ಕಿದ್ದ ಆತಂಕ ನಿವಾರಣೆಯಾಗಲಿದೆ.

ಸುಮಾರು 8 ವರ್ಷಗಳಿಂದ ‘ಬಾಲಮಂಗಳ ಎಕ್ಸ್‌ಪ್ರೆಸ್‌’ ಪುಟಾಣಿ ರೈಲು ಓಡಾಟ ನಿಲ್ಲಿಸಿ ಮಕ್ಕಳಿಗೆ ನಿರಾಶೆಯಾಗಿತ್ತು. ಈ ನಡುವೆ ಹಲವು ಬಾರಿ ರೈಲು ಪಾರ್ಕ್‌ಗೆ ಆಗಮಿಸಲಿದೆ ಎಂದು ಹೇಳಲಾಗಿತ್ತಾದರೂ ಬಂದಿರಲಿಲ್ಲ.ಕೊನೆಗೂ ಕಳೆದ ವರ್ಷ ಡಿ. 22ರಂದು ನೂತನ ಪುಟಾಣಿ ರೈಲು ಕದ್ರಿ ಪಾರ್ಕ್‌ಗೆ ಆಗಮಿಸಿದ್ದು, ಜ. 7ರಂದು ಓಡಾಟಕ್ಕೆ ಚಾಲನೆ ಪಡೆದಿತ್ತು. ಆದರೆ ಬಳಿಕ ಸ್ವಲ್ಪ ಸಮಯ ಪ್ರಾಯೋಗಿಕ ಓಡಾಟ ನಡೆಸಿದ ರೈಲು ಮತ್ತೆ ನಿಂತಿತ್ತು. ಇದಕ್ಕೆ ಕಾರಣ ಪಾರ್ಕ್‌ನ ಉತ್ತರ ಭಾಗದಲ್ಲಿ ಹಳಿಯ ಬಳಿಯಲ್ಲಿರುವ ಬಾಟಲ್‌ ಪಾಮ್‌ ಮರಗಳು.

ಕೈ ತಾಕುತ್ತಿದ್ದ ಮರಗಳು
ರೈಲಿನಲ್ಲಿ ಪ್ರಯಾಣಿಸುವಾಗ ಟ್ರ್ಯಾಕ್‌ ನ ಸನಿಹದಲ್ಲಿ ನಿಂತು ನೋಡುವ ಸಂಬಂಧಿಕರು, ಪೋಷಕರತ್ತ ಕೈ ಬೀಸುತ್ತಾ ಮಕ್ಕಳು ಸಾಗುತ್ತಾರೆ. ಹೀಗೆ ಮಾಡುವಾಗ ಟ್ರ್ಯಾಕ್‌ ಸನಿಹದಲ್ಲಿರುವ 4 ಬಾಟಲ್‌ ಪಾಮ್‌ ಮರಗಳು ಮಕ್ಕಳ ಕೈಗಳಿಗೆ ತಾಗುತ್ತಿದ್ದವು. ಹಾಗಾಗಿ ಸಂಭವನೀಯ ಅವಘಡಗಳನ್ನು ತಪ್ಪಿಸಲು ರೈಲನ್ನು ನಿಲುಗಡೆಗೊಳಿಸಲಾಗಿತ್ತು. ಅಲ್ಲದೆ ರೈಲ್ವೇ ಇಲಾಖೆಯೂ ರೈಲಿನ ಅಧಿಕೃತ ಓಡಾಟಕ್ಕೆ ಅನುಮತಿ ನೀಡಿರಲಿಲ್ಲ.

ಮರಗಳಿಂದಾಗುತ್ತಿರುವ ಸಮಸ್ಯೆ ಮತ್ತು ಅದನ್ನು ಕಡಿದು ಬೇರೆ ಸಸಿಗಳನ್ನು ನೆಡಲಾಗುವ ಬಗ್ಗೆ ಈಗಾಗಲೇ ಸಾರ್ವಜನಿಕರ ಸಭೆ ಕರೆದು ಮಾಹಿತಿ ನೀಡಲಾಗಿದೆ. ಹಾಗಾಗಿ ಈ ಸಂಬಂಧ ಅಪಸ್ವರಗಳು ಬಾರದು ಎಂದು ತೋಟಗಾರಿಕಾ ಇಲಾಖೆ ಸ್ಪಷ್ಟಪಡಿಸಿದೆ. ಮರ ಕಡಿದ ಬಳಿಕವಷ್ಟೇ ರೈಲ್ವೇ ಇಲಾಖೆಯು ಪುಟಾಣಿ ರೈಲು ಓಡಾಟಕ್ಕೆ ಅನುಮತಿ ನೀಡಲಿದೆ.

1.35 ಕೋಟಿ ರೂ. ವೆಚ್ಚ
ರೈಲ್ವೇ ಇಲಾಖೆ ಅಡಿಯಲ್ಲಿ ಈ ರೈಲು ನಿರ್ಮಾಣಗೊಂಡಿದ್ದು, ಒಟ್ಟು 1.35 ಕೋಟಿ ರೂ. ವೆಚ್ಚವಾಗಿದೆ. 3 ಬೋಗಿಗಳಿದ್ದು, ನೋಡಲು ಆಕರ್ಷಣೀಯವಾಗಿ ಕಾಣುತ್ತಿದೆ. ಈ ರೈಲು ನಿರ್ಮಾಣಕ್ಕೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನದ ಮುಖಾಂತರ ಅನುದಾನ ಒದಗಿಸಲಾಗಿತ್ತು. 

ಸಸಿ ನೆಟ್ಟು ಪೋಷಣೆ
ಮರಗಳಿಂದಾಗುತ್ತಿರುವ ಸಮಸ್ಯೆಯ ಕುರಿತು ಸೋಮವಾರ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ನಾಲ್ಕು ಮರಗಳನ್ನು ಕಡಿಯಲು ತೋಟಗಾರಿಕಾ ಇಲಾಖೆಗೆ ಅನುಮತಿ ನೀಡಲಾಗಿದೆ. ಈ ಮರಗಳು ಅಲಂಕಾರಿಕ ಗಿಡಗಳಾಗಿದ್ದು, ಈ ಮರಗಳಿದ್ದ ಜಾಗದಿಂದ ಸ್ವಲ್ಪ ದೂರದಲ್ಲಿ ಅಷ್ಟೇ ಗಿಡಗಳನ್ನು ನೆಡಲಾಗುವುದು ಎಂದು ತೋಟಗಾರಿಕಾ ಇಲಾಖೆಯ ಪ್ರಮುಖರು ತಿಳಿಸಿದ್ದಾರೆ.

ಕಡಿಯಲು ಅನುಮತಿ ಸಿಕ್ಕಿದೆ
ಟ್ರ್ಯಾಕ್‌ ಸನಿಹದಲ್ಲಿದ್ದ ನಾಲ್ಕು ಮರಗಳು ಪುಟಾಣಿ ರೈಲು ಓಡಾಟಕ್ಕೆ ಅಡ್ಡಿಯಾಗಿತ್ತು. ಮರಗಳನ್ನು ಕಡಿಯಲು ಇದೀಗ ಅನುಮತಿ ಸಿಕ್ಕಿದ್ದು, ಮುಂದೆ ರೈಲ್ವೇ ಇಲಾಖೆಯ ಅನುಮತಿ ಬಳಿಕ ರೈಲು ಓಡಾಟ ನಡೆಸಲಿದೆ.
– ಸುಂದರ ಪೂಜಾರಿ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

— ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.