ಮಳೆ ಅನಾಹುತ ಘಟಿಸಿದಾಗ ತ್ವರಿತ ಸ್ಪಂದನೆ


Team Udayavani, May 22, 2018, 10:41 AM IST

dc-soochane.jpg

ಮಂಗಳೂರು: ಮಳೆಯಿಂದಾಗಿ ಎಲ್ಲೇ ಅನಾಹುತವಾದರೂ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಸ್ಪಂದಿಸದ ದೂರು ಬಂದಲ್ಲಿ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಎಚ್ಚರಿಸಿದ್ದಾರೆ. 

ಸೋಮವಾರ ಮಳೆಗಾಲದ ಸಮಸ್ಯೆ ಎದುರಿಸಲು ಕರೆದ ಪೂರ್ವ ಸಿದ್ಧತೆ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. 20 ವರ್ಷಗಳ ಇತಿಹಾಸ ಹಾಗೂ ಮಾಹಿತಿಯನ್ನು ಆಧರಿಸಿ ನೆರೆ ಉಂಟಾಗಬಹುದಾದ ಹಾಗೂ ಮುಳುಗಡೆ  ಪ್ರದೇಶಗಳ ಸಂಭವನೀಯ ಪಟ್ಟಿ ರಚಿಸಬೇಕು. ನೆರೆ ಸಂಭವಿಸಿದಲ್ಲಿ ಜನರ ಸುರಕ್ಷಿತ ಸ್ಥಳಾಂತರ ಹಾಗೂ ಗಂಜಿ ಕೇಂದ್ರ ತೆರೆಯಲು ಶಾಲಾ ಕಟ್ಟಡ ಅಥವಾ ಸಮುದಾಯ ಭವನವನ್ನು ಗುರುತಿಸಿ ಸಿದ್ಧತೆ ಮಾಡಬೇಕು. ಗಂಜಿ ಕೇಂದ್ರ ಗಳಲ್ಲಿ ಕುಡಿಯುವ ನೀರು, ಶೌಚಾಲಯ ಹಾಗೂ ರಸ್ತೆ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ನೀರು ನಿಲುಗಡೆ, ನೆರೆ ಪ್ರದೇಶಗಳಿಗೆ ಮಕ್ಕಳು ತೆರಳದಂತೆ ಮುಂಜಾಗ್ರತೆ ಕೈಗೊಳ್ಳಿ ಎಂದರು. 

ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಕಟ್ಟಡ ಕಾಮಗಾರಿ ಗುತ್ತಿಗೆದಾರರಿಗೆ ಸೂಚನೆ ನೀಡಿ, ಸಾಂಕ್ರಾಮಿಕಗಳು ಹರಡದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರೋಗ ಬರದಂತೆ ತಡೆಯುವ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆಗಳ ಪಟ್ಟಿ ಮಾಡಿ, ಕರಪತ್ರ ಹಂಚಬೇಕು. ಕಾಮಗಾರಿ ಗುತ್ತಿಗೆ ವಹಿಸಿಕೊಂಡವರು ಕಾಮಗಾರಿ ನಡೆಯುವಲ್ಲಿ ನೀರು ನಿಲ್ಲದಂತೆ ನೋಡಬೇಕು ಎಂದರು. 

ಅಪಾಯಕಾರಿ ಮರ ತೆರವು, ಭೂಕುಸಿತ ಸ್ಥಳ ಗುರುತಿಸಿ 
ಅಪಾಯಕಾರಿ ಮರಗಳಿದ್ದರೆ ಕಡಿಯಲು ಕ್ರಮ ಕೈಗೊಳ್ಳಬೇಕು. ಒಂದು ಮರ ಕಡಿದರೆ 10 ಸಸಿ ನೆಡುವ ಬಗ್ಗೆಯೂ ಗಮನ ಹರಿಸಬೇಕು. ಜೆಸಿಬಿ ನಿರ್ವಾಹಕರ ಸಂಪರ್ಕ ಸಂಖ್ಯೆ ಸಂಗ್ರಹಿಸಿ, ಭೂ ಕುಸಿತದಂಥ ಸಂದರ್ಭಗಳಲ್ಲಿ ಸಹಾಯ ಪಡೆಯಬೇಕು ಎಂದರು. 

ತುರ್ತು ಪರಿಹಾರ ಪಾವತಿಸಿ 
ಮಳೆ, ಗಾಳಿಯಿಂದ ಸೊತ್ತು ಹಾನಿ ಉಂಟಾದರೆ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಪರಿಹಾರ ನೀಡಬೇಕು. ಜೀವ ಹಾನಿ ಸಂಭವಿಸಿದ್ದಲ್ಲಿ 24 ತಾಸುಗಳೊಳಗೆ ಪರಿಹಾರ ಪಾವತಿಸಬೇಕು ಎಂದರು. 

ಸಮುದ್ರ ಕೊರೆತ
ಸಮುದ್ರ ಕೊರೆತ ಪ್ರದೇಶಗಳ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಬೇಕು. ಸಂತ್ರಸ್ತರಿಗೆ ಪರ್ಯಾಯ ಮನೆ, ನಿವೇಶನ ಸ್ಥಳ ಒದಗಿಸಬೇಕು. ಸುರಕ್ಷಿತ ಸ್ಥಳಗಳು, ಹಾನಿಯಾಗ ಬಹುದಾದ ಮನೆಗಳ ಸಮೀಕ್ಷೆ ಮಾಡಬೇಕು ಎಂದರು. 

ಮನಪಾ “ವಾರ್ಡ್‌ ಗ್ಯಾಂಗ್‌’ 
ಪಾಲಿಕೆ ಆಯುಕ್ತ ಮಹಮ್ಮದ್‌ ನಜೀರ್‌ ವಿವರಿಸಿ, ಪ್ರತೀ ವಾರ್ಡ್‌ನಲ್ಲೂ “ವಾರ್ಡ್‌ ಗ್ಯಾಂಗ್‌’ ಸಮಿತಿ ರಚನೆ ಮಾಡಲಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ವೈಶಾಲಿ, ಡಿಸಿಪಿ ಹನುಮಂತರಾಯ, ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಪತ್ತು ನಿರ್ವಹಣಾ ಘಟಕ ಕಂಟ್ರೋಲ್‌ ರೂಂ 1077
ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್‌ ರೂಂ ನಂಬರ್‌ 1077 ಆಗಿದ್ದು, ಜಿಲ್ಲೆಯ ಯಾವುದೇ ಭಾಗಗಳಿಂದ ಮಳೆ ಹಾನಿಯ ಕುರಿತಾಗಿನ ವಿಷಯಗಳನ್ನು ಈ ನಂಬರ್‌ಗೆ ಕರೆ ಮಾಡಿ ತಿಳಿಸಿದರೆ, ತುರ್ತು ಕ್ರಮಗಳನ್ನು ಕೈಗೊಳ್ಳಲಾಗುವುದು. ಕಂಟ್ರೋಲ್‌ ರೂಂನಲ್ಲಿದ್ದ ಸಿಬಂದಿ ಕೂಡಲೇ ಸಂಬಂಧಪಟ್ಟವರಿಗೆ ವಿಷಯ ತಿಳಿಸಿ, ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಪ್ರತೀ ತಾಲೂಕು ಕೇಂದ್ರಗಳಲ್ಲೂ ತಾಲೂಕು ಸಮಿತಿಗಳನ್ನು ಮಾಡಿ, ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸಲಾಗುವುದು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.