ಇನ್ನೋವಾ ಕಾರಿನಲ್ಲಿ ಕುಖ್ಯಾತ ಕ್ರಿಮಿನಲ್‌ನ ಮೃತದೇಹ ಪತ್ತೆ

ಬಂಟ್ವಾಳದ ಸಜೀಪಮೂಡ ಗ್ರಾಮದ ನಗ್ರಿ

Team Udayavani, Feb 2, 2020, 8:50 PM IST

innova2

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಬೊಳ್ಳಾಯಿ ಸಮೀಪದ ನಗ್ರಿ ಶಾಂತಿನಗರದಲ್ಲಿ ರವಿವಾರ ಇನ್ನೋವಾ ಕಾರಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆಯಾದ ವ್ಯಕ್ತಿ ಕೇರಳ ಮೂಲದ ಕುಖ್ಯಾತ ಕ್ರಿಮಿನಲ್‌, ಮೂಲತಃ ಕಾಸರಗೋಡು ಜಿಲ್ಲೆ ಚೆಮ್ನಾಡ್‌ ಚೆಂಬರಿಕದ ಕಲಾ°ಡ್‌ ಗ್ರಾಮ ನಿವಾಸಿ ತಸ್ಲೀಮ್‌ ಯಾನೆ ಮುತಾಸಿಮ್‌(39) ಎಂದು ಗುರುತಿಸಲಾಗಿದೆ.

ನಗ್ರಿ ಶಾಂತಿನಗರದಲ್ಲಿ ಮೃತದೇಹವಿರುವ ಕಾರೊಂದು ನಿಂತಿದೆ ಎಂಬ ಸುದ್ದಿ ರವಿವಾರ ಮಧ್ಯಾಹ್ನ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಪ್ರಾರಂಭದಲ್ಲಿ ಅದು ಅಪರಿಚಿತ ಶವವೆಂದು ಭಾವಿಸಿದ್ದರೂ, ಬಳಿಕ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿತ್ತು. ತಸ್ಲೀಮ್‌ ಎರಡು ದಿನಗಳ ಹಿಂದೆ ಗುಲ್ಬರ್ಗಾ ಜೈಲಿನಿಂದ ಬಿಡುಗಡೆಗೊಂಡಿದ್ದು, ಅಲ್ಲಿಂದಲೇ ಆತನನ್ನು ಅಪಹರಣ ಮಾಡಿದ್ದ ಗ್ಯಾಂಗ್‌ ಕೊಲೆ ನಡೆಸಿದೆ.

ಆರೋಪಿಗಳು ಕೊಲೆ ನಡೆಸಿ ಮೃತದೇಹವನ್ನು ಕಾರಿನಲ್ಲಿಟ್ಟು, ಕಾರನ್ನು ಬಿಟ್ಟು ಪರಾರಿಯಾಗಿದ್ದರು. ಬೆಳಗ್ಗಿನಿಂದ ಕಾರು ಅಲ್ಲೇ ನಿಂತಿರುವುದನ್ನು ಕಂಡ ಸ್ಥಳೀಯರು ಮಧ್ಯಾಹ್ನದ ವೇಳೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಎ 53 ನೋಂದಣಿ ಹೊಂದಿರುವ ಇನ್ನೋವಾ ಕಾರಿನ ಹಿಂಬದಿಯ ಸೀಟಿನಲ್ಲಿ ಮೃತದೇಹ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿ ತುಂಬಿತ್ತು. ವ್ಯಕ್ತಿಯ ಕುತ್ತಿಗೆಗೆ ಹಗ್ಗ ಬಿಗಿದು ಬಳಿಕ ಚೂರಿ ಹಾಕಿ ಕೊಲೆ ನಡೆಸಿರುವ ಕುರಿತು ಶಂಕಿಸಲಾಗಿದೆ. ಬೇರೆ ಯಾವುದೇ ಸ್ಥಳದಲ್ಲಿ ಕೊಲೆ ನಡೆಸಿ, ಕಾರನ್ನು ನಗ್ರಿ ಶಾಂತಿನಗರದಲ್ಲಿ ಬಿಟ್ಟು ಪರಾರಿಯಾಗಿರುವ ಸಾಧ್ಯತೆಯ ಕುರಿತು ಹೇಳಲಾಗುತ್ತಿದೆ.

ಮಾರ್ನಬೈಲು-ಸಾಲೆತ್ತೂರು ರಸ್ತೆಯ ಶಾಂತಿನಗರದ ಗುಡ್ಡದಲ್ಲಿ ಕಾರನ್ನು ನಿಲ್ಲಿಸಲಾಗಿದ್ದು, ಬೆಳಗ್ಗೆ 8ರ ಸುಮಾರಿಗೆ ಅಲ್ಲಿ ಯಾವುದೇ ಕಾರು ಇರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಆ ಬಳಿಕವೇ ಆರೋಪಿಗಳು ಕಾರನ್ನು ನಿಲ್ಲಿಸಿ ಪರಾರಿಯಾಗಿರುವ ಕುರಿತು ಸಂಶಯಿಸಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ವೆನಾÉಕ್‌ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್‌ ಡಿಸೋಜಾ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ದ.ಕ.ಜಿಲ್ಲಾ ಚಾರ್ಜ್‌ನಲ್ಲಿರುವ ಉಡುಪಿ ಎಸ್‌ಪಿ ವಿಷ್ಣುವರ್ಧನ್‌, ದ.ಕ.ಅಡಿಶನಲ್‌ ಎಸ್‌ಪಿ ಡಾ| ವಿಕ್ರಂ ಅಮ್ಟೆ, ಮಂಗಳೂರು ಡಿಸಿಐಬಿ ಇನ್ಸ್‌ಪೆಕ್ಟರ್‌ ಚೆಲುವರಾಜು, ಬಂಟ್ವಾಳ ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ಟಿ.ಡಿ.ನಾಗರಾಜ್‌, ಬಂಟ್ವಾಳ ನಗರ ಪಿಎಸ್‌ಐ ಅವಿನಾಶ್‌, ಗ್ರಾಮಾಂತರ ಪಿಎಸ್‌ಐ ಪ್ರಸನ್ನ ಹಾಗೂ ಸಿಬಂದಿ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಜ್ಯುವೆಲ್ಲರಿ ಕಳವಿನ ಪ್ರಮುಖ ಆರೋಪಿ
ಕೊಲೆಯಾದ ತಸ್ಲೀಮ್‌ 2019ರಲ್ಲಿ ಸೆಪ್ಟೆಂಬರ್‌ನಲ್ಲಿ ಮಂಗಳೂರು ಭವಂತಿ ಸ್ಟ್ರೀಟ್ ನ ಜ್ಯುವೆಲ್ಲರಿವೊಂದರಲ್ಲಿ ನಡೆದ ಕಳವು ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಇಬ್ಬರು ಅಪಾ^ನ್‌ ಮೂಲದ ಕುಖ್ಯಾತ ರೌಡಿಗಳ ಜತೆ ಸೇರಿ ಈ ಕಳವು ಪ್ರಕರಣ ನಡೆಸಿ, ಮಂಗಳೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ. ಜತೆಗೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾಲಿಯಾ ರಫೀಕ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ.

ಈತ ಕಾಸರಗೋಡಿನಿಂದ ಮುಂಬಯಿಗೆ ತೆರಳಿದ ಬಳಿಕ ಅಲ್ಲಿ ಕುತ್ಯಾತ ರೌಡಿಗಳು ಹಾಗೂ ಭೂಗತ ಪಾತಕಿಗಳ ಸಂಪರ್ಕ ಬೆಳೆಸಿಕೊಂಡಿದ್ದ. ಈತನ ವಿರುದ್ಧ ಕಾಸರಗೋಡಿನ ಬೇಕಲ ಪೊಲೀಸ್‌ ಠಾಣೆ, ಉಳ್ಳಾಲ ಪೊಲೀಸ್‌ ಠಾಣೆ ಸೇರಿದಂತೆ ಹೊಸದಿಲ್ಲಿಯ ವಿಶೇಷ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಒಳಸಂಚು ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಕುರಿತು ಕಳೆದ ಸೆಪ್ಟೆಂಬರ್‌ನ ಜ್ಯುವೆಲ್ಲರಿ ಕಳವು ಪ್ರಕರಣದ ಸಂದರ್ಭ ಮಂಗಳೂರು ಪೊಲೀಸರು ತಿಳಿಸಿದ್ದರು.

ತಸ್ಲೀಮ್‌ ಕೆಲ ದಿನಗಳ ಹಿಂದೆಯಷ್ಟೇ ಗುಲಾºರ್ಗಾ ಜೈಲಿನಿಂದ ಬಿಡುಗಡೆಗೊಂಡು ಹೊರ ಬರುತ್ತಿದ್ದಂತೆ ಆತನನ್ನು ಯಾವುದೇ ತಂಡವೊಂದು ಅಪಹರಣ ನಡೆಸಿತ್ತು. ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಿಡ್ನಾಪ್‌ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದರು. ಯಾವುದೋ ಹಳೆ ಪ್ರಕರಣದ ದ್ವೇಷದ ಹಿನ್ನೆಲೆಯಲ್ಲೇ ಕೊಲೆ ನಡೆದಿರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.