ಹೆದ್ದಾರಿ ಬದಿ ಅಪಾಯ ಆಹ್ವಾನಿಸುವ ಮರಣ ಬಾವಿ !


Team Udayavani, Jun 27, 2018, 3:35 AM IST

honda-26-6.jpg

ಮಹಾನಗರ : ಕುಂಟಿಕಾನ ಫ್ಲೈಓವರ್‌ ನಿಂದ ಲೋಹಿತ್‌ ನಗರಕ್ಕೆ ಸಂಪರ್ಕ ಕಲ್ಪಿಸುವ ಕಾರು ಶೋರೂಂ ಎದುರಿನ ಸರ್ವಿಸ್‌ ರಸ್ತೆ ಮಧ್ಯೆ ದೊಡ್ಡ ಗುಂಡಿಯಾಗಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ರಸ್ತೆ ಮಧ್ಯ ಇರುವಂತಹ ಮ್ಯಾನ್‌ ಹೋಲ್‌ ಸುತ್ತಲೂ ನಿರ್ಮಾಣವಾದ ಗುಂಡಿಯಿಂದಾಗಿ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಒಂದು ವರ್ಷಗಳ ಹಿಂದೆ ಮ್ಯಾನ್‌ ಹೋಲ್‌ ನಿರ್ಮಾಣಕ್ಕೆ ಇದೇ ರಸ್ತೆಯನ್ನು ಅಗೆಯಲಾಗಿತ್ತು. ಕೆಲವು ತಿಂಗಳ ಹಿಂದೆ ಹೊಸತಾಗಿ ಡಾಮರು ಹಾಕಲಾಗಿತ್ತು. ಕಳೆದ ತಿಂಗಳು ಬಂದಂತಹ ಜೋರಾದ ಮಳೆಗೆ ರಸ್ತೆ ಮಧ್ಯೆ ಇರುವ ಮ್ಯಾನ್‌ ಹೋಲ್‌ ಸುತ್ತ ಬಿರುಕು ಬಿದ್ದಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಳೆಪೆ ಡಾಮರು ಕಾಮಗಾರಿಯೇ ಮೂಲ ಕಾರಣ. ಆದರೆ ಸ್ಥಳೀಯಾಡಳಿತ ಮಾತ್ರ ಕೈಕಟ್ಟಿ ಕೂತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಬ್ಯಾರಿಕೇಡ್‌ ಅಳವಡಿಸಿಲ್ಲ
ರಸ್ತೆ ಮಧ್ಯೆ ಇರುವ ದೊಡ್ಡ ಹೊಂಡದಿಂದ ಅಪಾಯ ಸ್ಥಿತಿಯಲ್ಲಿದ್ದು, ಮುನ್ನೆಚ್ಚರಿಕೆ ದೃಷ್ಟಿಯಿಂದ ಈ ಹೊಂಡದ ನಾಲ್ಕು ಬದಿಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿಲ್ಲ. ಇದೇ ರಸ್ತೆಯಲ್ಲಿ ದಿನಂಪ್ರತಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ಎಚ್ಚರ ತಪ್ಪಿದರೆ ವಾಹನ ಸವಾರರು ಈ ಗುಂಡಿಗೆ ಬೀಳುವ ಅಪಾಯ ಸ್ಥಳದಲ್ಲಿದೆ. ಇದೇ ರಸ್ತೆಯ ಪಕ್ಕದಲ್ಲಿ ಮತ್ತೂಂದು ಕಡೆಯಲ್ಲಿ ಯೂ ರಸ್ತೆ ಇದೇ ರೀತಿ ಬಿರುಕು ಬಿಟ್ಟಿದೆ.

ಅಸಮರ್ಪಕ ಚರಂಡಿ ವ್ಯವಸ್ಥೆ

ಈ ರಸ್ತೆಯ ಬದಿಯಲ್ಲಿರುವ ಚರಂಡಿ ವ್ಯವಸ್ಥೆ ಕೂಡ ಸಮರ್ಪಕವಾಗಿಲ್ಲ. ಚರಂಡಿ ತುಂಬೆಲ್ಲಾ ಕಸ, ಹುಲ್ಲು, ಕಲ್ಲುಗಳು ತುಂಬಿಕೊಂಡಿದೆ. ಇದರಿಂದಾಗಿ ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯ ವಾಗುತ್ತಿಲ್ಲ. ರಸ್ತೆಗೆ ನೀರು ಬಂದು ಕೃತಕ ನೆರೆ ಉಂಟಾಗುತ್ತಿದೆ. ಒಂದು ವೇಳೆ ರಸ್ತೆ ತುಂಬಾ ನೀರು ತುಂಬಿದರೆ ಈ ಗುಂಡಿಯಿಂದ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ.

ಮಳೆಯಿಂದ ಕಾಮಗಾರಿ ನಡೆಸಲು ಕಷ್ಟ
ಸ್ಥಳೀಯ ಕಾರ್ಪೊರೇಟರ್‌ ರಾಜೇಶ್‌ ಅವರು ‘ಉದಯವಾಣಿ ಸುದಿನ’ಕ್ಕೆ ಪ್ರತಿ ಕ್ರಿಯಿಸಿ, ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸಂಬಂಧಿಸಿದ್ದಾಗಿದೆ. ರಸ್ತೆಯಲ್ಲಿ ಮ್ಯಾನ್‌ ಹೋಲ್‌ ಇರುವುದರಿಂದ ನಾವು ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ರಸ್ತೆ ಮಧ್ಯೆ ಗುಂಡಿಯಾದ ಕೂಡಲೇ ಸಂಬಂಧಪಟ್ಟ ಎಂಜಿನಿಯರ್‌ ಆದ ರಘುಪಾಲ್‌ ಮತ್ತು  ಅಶೋಕ್‌ ಅವರ ಗಮನಕ್ಕೆ ತಂದಿದ್ದೇನೆ. ನಗರದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಕಾಮಗಾರಿ ನಡೆಸಲು ಕಷ್ಟವಾಗುತ್ತಿದೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳಿಸುತ್ತೇವೆ. ಗುಂಡಿ ಬಿದ್ದ ಪ್ರದೇಶದ ನಾಲ್ಕೂ ಬದಿಗಳಲ್ಲಿ ಈ ಹಿಂದೆ ಬ್ಯಾರಿಕೇಡ್‌ ಅಳವಡಿಸಲಾಗಿತ್ತು. ಆದರೆ ಅದನ್ನು ಯಾರು ತೆರವುಗೊಳಿಸಿದ್ದು ಎಂಬುವುದರ ಬಗ್ಗೆ ಮಾಹಿತಿ ಇಲ್ಲ ಎಂದರು.

ಕಳೆಪೆ ಕಾಮಗಾರಿ ಕಾರಣ
ಈ ರಸ್ತೆ ಡಾಮರು ಕಾಮಗಾರಿ ನಡೆಸಿ ಎರಡು ತಿಂಗಳು ಕೂಡ ಕಳೆದಿಲ್ಲ. ಮ್ಯಾನ್‌ ಹೋಲ್‌ ಸುತ್ತ ಹೊಂಡ ನಿರ್ಮಾಣವಾಗಿದೆ. ಇದಕ್ಕೆ ಕಳೆಪೆ ಕಾಮಗಾರಿಯೇ ಮುಖ್ಯ ಕಾರಣ. ಸಂಬಂಧಪಟ್ಟ ಅಧಿಕಾರಿಗಳಿಂದ ಈ ಬಗ್ಗೆ ತನಿಖೆ ಮಾಡಿಸಬೇಕು. ಕೂಡಲೇ ಸಮಸ್ಯೆ ಬಗೆಹರಿಯಬೇಕು.
– ವಿಜಯ ಕುಮಾರ್‌, ಲೋಹಿತ್‌ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.