ಪಂಪ್‌ವೆಲ್‌ನಲ್ಲೇ ಕೇಂದ್ರ ಬಸ್‌ ನಿಲ್ದಾಣ

ಸ್ಮಾರ್ಟ್‌ ಸಿಟಿ ಯೋಜನೆ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ

Team Udayavani, Oct 20, 2019, 4:11 AM IST

c-23

ಮಂಗಳೂರು: ನಗರದ ಕೇಂದ್ರ ಬಸ್‌ ನಿಲ್ದಾಣವನ್ನು ಮೂಲ ಪ್ರಸ್ತಾವನೆಯಲ್ಲಿರುವಂತೆ ಪಂಪ್‌ವೆಲ್‌ನಲ್ಲೇ ನಿರ್ಮಿಸಲು ಸ್ಮಾರ್ಟ್‌ ಸಿಟಿ ಲಿ. ನಿರ್ಧರಿಸಿದೆ. ಈ ಮೂಲಕ ಈ ಹಿಂದೆ ನಗರದ ಕೂಳೂರು, ಪಡೀಲ್‌ನಲ್ಲಿ ಪ್ರಸ್ತಾವನೆಯಲ್ಲಿದ್ದ ಕೇಂದ್ರ ಬಸ್‌ ನಿಲ್ದಾಣ ನಿರ್ಮಾಣ ಯೋಜನೆ ಮತ್ತೆ ಪಂಪ್‌ವೆಲ್‌ ತಾಣಕ್ಕೆ ವರ್ಗಾವಣೆಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅಧ್ಯಕ್ಷತೆಯಲ್ಲಿ ಶನಿವಾರ ಜರಗಿದ್ದ ಸ್ಮಾರ್ಟ್‌ ಸಿಟಿ ಯೋಜನೆಗಳ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ಸ್ಮಾರ್ಟ್‌ ಸಿಟಿ ಲಿ.ನ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್‌ ನಜೀರ್‌, ಪಡೀಲ್‌ನಲ್ಲಿ ಕೇಂದ್ರ ಬಸ್‌ ನಿಲ್ದಾಣ ತೀರ್ಮಾನಿಸಲಾಗಿತ್ತು. ಇದಕ್ಕೆ ಭೂಮಿಯನ್ನು ಹೊಂದಿಸಿಕೊಳ್ಳುವ ನಿಟ್ಟಿನಲ್ಲಿ ಪತ್ರಿಕೆಗಳಲ್ಲಿ ಪ್ರಕಟನೆ ನೀಡಲಾಗಿದ್ದರೂ ಸ್ಪಂದನೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಮನಪಾ ಪಂಪ್‌ವೆಲ್‌ನಲ್ಲಿ ಈಗಾಗಲೇ ಸ್ವಾಧೀನ ಪಡಿಸಿಕೊಂಡಿರುವ 7.5 ಎಕರೆ ಜಾಗದಲ್ಲಿಯೇ ಬಸ್‌ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದೆ. ಕೋರ್‌ ಕಮಿಟಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು ಟೆಂಡರ್‌ ಪ್ರಕ್ರಿಯೆ ನಡೆಸಲಾಗುವುದು. 445 ಕೋ.ರೂ. ವೆಚ್ಚದಲ್ಲಿ ಕೇಂದ್ರ ಬಸ್‌ನಿಲ್ದಾಣ ನಿರ್ಮಿಸುವ ಪ್ರಸ್ತಾವನೆ ಸಿದ್ಧಗೊಂಡಿದೆ ಎಂದರು.

ವೆನಲಾಕ್, ಲೇಡಿಗೋಶನ್‌ ಆಸ್ಪತ್ರೆ ಅಭಿವೃದ್ಧಿ
ನಗರದ ಜಿಲ್ಲಾ ವೆನಲಾಕ್ ಆಸ್ಪತ್ರೆಯಲ್ಲಿ 30 ಬೆಡ್‌ಗಳ ತುರ್ತು ನಿಗಾ ಘಟಕ, 100 ಹಾಸಿಗೆಗಳ ವಿಭಾಗ ಸೇರಿದಂತೆ ನಾಲ್ಕು ವ್ಯವಸ್ಥೆಗಳಿಗೆ 45 ಕೋ.ರೂ. ವೆಚ್ಚದ ಪ್ರಸ್ತಾವನೆ ಇದೆ. ಮಿಲಾಗ್ರಿಸ್‌ ಐಎಂಎ ಮೂಲಕ ಅತ್ತಾವರಕ್ಕೆ ಸಾಗುವ ರಸ್ತೆಯನ್ನು ಅಗಲಗೊಳಿಸಿ ಪ್ರಸ್ತುತ ರೈಲ್ವೇ ನಿಲ್ದಾಣದಿಂದ ಮಿಲಾಗ್ರಿಸ್‌ಗೆ ಬರುವ ರಸ್ತೆಯನ್ನು ಮುಚ್ಚಿ ವೆನಲಾಕ್ನ ಎರಡು ಬ್ಲಾಕ್‌ಗಳನ್ನು ಜೋಡಿಸುವ ಪ್ರಸ್ತಾವನೆಯನ್ನು ಆಸ್ಪತ್ರೆ ಮುಂದಿಟ್ಟಿದೆ. ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಹೊಸದಾಗಿ ಎಂಆರ್‌ಪಿಎಲ್‌ ನೆರವಿನೊಂದಿಗೆ ನಿರ್ಮಿಸಿರುವ ಹೊಸ ಕಟ್ಟಡದಲ್ಲಿ ಇನ್ನೊಂದು ಅಂತಸ್ತು ವಿಸ್ತರಣೆಗೆ 5 ಕೋ.ರೂ. ವೆಚ್ಚದ ಪ್ರಸ್ತಾವನೆ ಇದೆ ಎಂದು ಮಹಮ್ಮದ್‌ ನಜೀರ್‌ ತಿಳಿಸಿದರು.

10 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳಾ ಕ್ರೀಡಾಂಗಣ ಮತ್ತು 5 ಕೋಟಿ ರೂಪಾಯಿ ವೆಚ್ಚದಲ್ಲಿ ಉರ್ವಾ ಮೈದಾನಗಳನ್ನು ಅಭಿವೃದ್ಧಿಪಡಿಸುವ ಯೋಜನೆಯ ಡಿಪಿಆರ್‌ ಪ್ರಗತಿಯಲ್ಲಿದ್ದು, ಅ. 31ರೊಳಗೆ ಸಲ್ಲಿಸಲು ಸೂಚಿಸಲಾಗಿದೆ ಎಂದು ನಜೀರ್‌ ತಿಳಿಸಿದರು. ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಕ್ರೆಡೈ ಚೇರ್ಮನ್‌ ಡಿ.ಬಿ. ಮೆಹ್ತಾ ಮತ್ತು ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಬಹು ಅಂತಸ್ತು ಕಾರು ಪಾರ್ಕಿಂಗ್‌
ಹಳೆ ಬಸ್‌ನಿಲ್ದಾಣದಲ್ಲಿ ಬಹು ಅಂತಸ್ತು ಕಾರು ಪಾರ್ಕಿಂಗ್‌ ನಿರ್ಮಾಣಕ್ಕೆ ಟೆಂಡರ್‌ ಆಗಿದ್ದು, ಕೆಲಸದ ಆದೇಶ ನೀಡಲಾಗಿದೆ. ಬೆಂಗಳೂರಿನ ಕಂಪೆನಿಯೊಂದು ಟೆಂಡರ್‌ ವಹಿಸಿಕೊಂಡಿದೆ. ಈ ಪ್ರದೇಶದಲ್ಲಿ ಒಟ್ಟು 5 ಕಟ್ಟಡಗಳಿದ್ದು, 22 ಮಂದಿ ಅಂಗಡಿದಾರರಿದ್ದಾರೆ. ಅವರನ್ನು ಒಳಗೊಂಡು ಕಾರು ಪಾರ್ಕಿಂಗ್‌ ಕಾಂಪ್ಲೆಕ್ಸ್‌ ನಿರ್ಮಾಣಗೊಳ್ಳುತ್ತಿದೆ. ಅವರ ಹಾಗೂ ಮಹಾನಗರ ಪಾಲಿಕೆ ನಡುವೆ ಒಡಂಬಡಿಕೆಯಲ್ಲಿ ವಿಳಂಬ ಆಗಿರುವುದರಿಂದ ಕಾಮಗಾರಿ ಆರಂಭವಾಗಿಲ್ಲ. ಶೀಘ್ರ ಒಡಂಬಡಿಕೆ ನಡೆದು ನಿರ್ಮಾಣ ಕೆಲಸ ನಡೆಯಲಿದೆ. ಒಟ್ಟು 400 ಕಾರು ಹಾಗೂ 200 ದ್ವಿಚಕ್ರ  ವಾ ಹ ನ ಗಳ ನಿಲುಗಡೆಗೆ ಸ್ಥಳಾವಕಾವಕಾಶ ಲಭ್ಯವಾಗಲಿದೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.