ಇಳಿಕೆಯಾಗುತ್ತಿದೆ ಟ್ರಾಫಿಕ್‌ ದಂಡ ಸಂಗ್ರಹ ಪ್ರಮಾಣ


Team Udayavani, Aug 19, 2018, 9:58 AM IST

19-agust-2.jpg

ಪುತ್ತೂರು: ನಗರ ವ್ಯಾಪ್ತಿಯ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಜಾರಿಗೊಳಿಸಿದ ಪರಿಣಾಮವೋ ಎಂಬಂತೆ, ಟ್ರಾಫಿಕ್‌ ಪ್ರಕರಣ ಹಾಗೂ ದಂಡದ ಪ್ರಮಾಣ ಇಳಿಕೆಯಾಗಿದೆ. ಎಪ್ರಿಲ್‌ನಲ್ಲಿ 2,851, ಮೇನಲ್ಲಿ 3,300, ಜೂನ್‌ನಲ್ಲಿ 3,440 ಹಾಗೂ ಜುಲೈನಲ್ಲಿ 2,795 ಪ್ರಕರಣಗಳು ದಾಖಲಾಗಿವೆ. ಹೆಲ್ಮೆಟ್‌, ಏಕಮುಖ ರಸ್ತೆ, ನೋ ಪಾರ್ಕಿಂಗ್‌ನಲ್ಲಿ ಪಾರ್ಕಿಂಗ್‌ ಮೊದಲಾದ ವಿಷಯಗಳಿಗೆ ವಿಧಿಸಿದ ಪ್ರಕರಣಗಳಿವು. ಈ ಹಿಂದಿನ ಒಟ್ಟು ಪ್ರಕರಣಗಳನ್ನು ಲೆಕ್ಕ ಹಾಕುತ್ತಾ ಸಾಗಿದರೆ, ಜುಲೈನಲ್ಲಿ ಕಡಿಮೆ ಪ್ರಕರಣ ದಾಖಲಾಗಿರುವುದನ್ನು ಗಮನಿಸಬಹುದು.

ಅಭಿಪ್ರಾಯ ಸಂಗ್ರಹ
ಜುಲೈ ತಿಂಗಳಲ್ಲಿ ಪೊಲೀಸರು ರಸ್ತೆ ಸುರಕ್ಷ ಕಾರ್ಯಕ್ರಮ ನಡೆಸಿದ್ದರು. ಜುಲೈ 23ರಿಂದ 29ರ ವರೆಗೆ ವಿವಿಧ ವರ್ಗದ ಜನರ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿದ್ದರು. ಇದರಲ್ಲಿ ಕೇಳಿಬಂದ ಸಲಹೆಗಳನ್ನು ಪರಿಗಣಿಸಿ, ಜಾರಿಗೊಳಿಸುವಲ್ಲಿ ಪೊಲೀಸ್‌ ನಿರೀಕ್ಷಕ ಮಹೇಶ್‌ ಪ್ರಸಾದ್‌ ನೇತೃತ್ವದ ತಂಡ ಯಶಸ್ವಿಯಾಗಿದೆ. ಇದರ ಪರಿಣಾಮವೆಂಬಂತೆ ಜುಲೈ ತಿಂಗಳಿನಲ್ಲಿ ಸಂಗ್ರಹವಾದ ದಂಡ ಪ್ರಮಾಣ 4,23,300 ರೂ.ಗೆ ಇಳಿಕೆಯಾಗಿದೆ. ಇದರ ಮೊದಲಿನ ತಿಂಗಳಿನಲ್ಲಿ 6.29 ಲಕ್ಷ ರೂ.ನವರೆಗೆ ದಂಡ ಸಂಗ್ರಹವಾಗಿ ದಾಖಲೆ ಬರೆದಿತ್ತು.

ಪುತ್ತೂರು ಪೇಟೆಯ ಸಂಚಾರ ದಟ್ಟಣೆ ಮಿತಿಮೀರಿ ಹೋಗಿದೆ. ಇದನ್ನು ಹಿಡಿತಕ್ಕೆ ತರುವ ಹಿನ್ನೆಲೆಯಲ್ಲಿ ಪೊಲೀಸರು ದಂಡ ವಿಧಿಸುವ ಕೆಲಸಕ್ಕೆ ಮುಂದಾದರು. ತಿಂಗಳಿಗೆ 6.5 ಲಕ್ಷ ರೂ. ದಂಡ ಸಂಗ್ರಹಿಸಿದ್ದೂ ಇದೆ. ಒಂದು ಹಂತದಲ್ಲಿ ಇದು ಕೆಲ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು. ಪಾರ್ಕಿಂಗ್‌ ವ್ಯವಸ್ಥೆ ಇಲ್ಲದ ಕಾರಣಕ್ಕೆ, ಸಿಕ್ಕಲ್ಲಿ ವಾಹನ ಪಾರ್ಕಿಂಗ್‌ ಮಾಡಿದ್ದೇವೆ. ಇದಕ್ಕೆ ದಂಡ ವಿಧಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮವನ್ನು ಪೊಲೀಸರು ಕೈಗೊಂಡರು. ಮಾತ್ರವಲ್ಲ, ಇದರಲ್ಲಿ ಕೇಳಿಬಂದ ಅಭಿಪ್ರಾಯಗಳನ್ನು ಸಮರ್ಪಕವಾಗಿ ಜಾರಿಗೆ ತಂದರು ಕೂಡ.

ಜುಲೈ ಅಂತ್ಯಭಾಗದಲ್ಲಿ ರಸ್ತೆ ಸುರಕ್ಷಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದಕ್ಕೆ ಮೊದಲು ದಂಡ ವಿಧಿಸುತ್ತಿದ್ದು, ಆ ತಿಂಗಳಿನಲ್ಲಿ 2795 ಪ್ರಕರಣ ದಾಖಲಾಯಿತು. ತಿಂಗಳ ಕೊನೆ ವಾರದಲ್ಲಿ ಹಾಗೂ ಬಳಿಕ ದಂಡ ವಿಧಿಸುವುದರಿಂದ ಪೊಲೀಸರು ಹಿಂದೆ ಸರಿದರು. ಬದಲಿಗೆ ಸಂಚಾರ ಕಾನೂನನ್ನು ಜಾರಿಗೆ ತಂದರು. ಆದ್ದರಿಂದ ಸಂಗ್ರಹ ಕಡಿಮೆಗೊಂಡಿದೆ. ಸಾರ್ವಜನಿಕರಿಂದ ಲಿಖಿತ ರೂಪದಲ್ಲಿ ಪಡೆದುಕೊಂಡ ಸಲಹೆಗಳನ್ನು ಆಧರಿಸಿ, ಪೊಲೀಸರು ಒಂದು ವರದಿ ತಯಾರಿಸಿದ್ದಾರೆ ಎನ್ನಲಾಗಿದೆ.

ಉಲ್ಲಂಘನೆ ಕಡಿಮೆ
ಈಗಲೂ ಕಾನೂನು ಕ್ರಮ ಜಾರಿಗೊಳಿಸುವುದನ್ನು ಮುಂದುವರಿಸಿದ್ದೇವೆ. ಆದರೆ ಬೊಳುವಾರಿನಿಂದ ಕಲ್ಲಾರೆ ವರೆಗೆ ಸಂಚಾರ ಸುಗಮವಾಗಿ ಸಾಗುತ್ತಿದೆ. ಪ್ರಕರಣ ಹಾಗೂ ದಂಡದ ಪ್ರಮಾಣ ಕಡಿಮೆ ಆಗಿದೆ ಎಂದರೆ, ಕಾನೂನು ಉಲ್ಲಂಘಿಸುವ ಪ್ರಮಾಣ ಕಡಿಮೆ ಆಗಿದೆ ಎಂದೇ ಅರ್ಥ. ಕೆಲವು ಕಡೆಗಳಲ್ಲಿ ರಸ್ತೆಗೆ ಇಂಟರ್‌ಲಾಕ್‌ ಹಾಕಿದ್ದು, ಗೊಂದಲಕ್ಕೆ ಕಾರಣ ಆಗುತ್ತಿದೆ.
– ಮಹೇಶ್‌ ಪ್ರಸಾದ್‌,
ಪುತ್ತೂರು ಪೊಲೀಸ್‌ ನಿರೀಕ್ಷಕ

 ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.