![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Smart Card ವಿತರಣೆಯಲ್ಲಿ ವಿಳಂಬ; ಚಾಲನಾ ಪರವಾನಿಗೆ, ಆರ್ಸಿ ಸಿಗದೆ ಸವಾರರು ಕಂಗಾಲು
Team Udayavani, Apr 3, 2024, 7:20 AM IST
![Smart Card ವಿತರಣೆಯಲ್ಲಿ ವಿಳಂಬ; ಚಾಲನಾ ಪರವಾನಿಗೆ, ಆರ್ಸಿ ಸಿಗದೆ ಸವಾರರು ಕಂಗಾಲು](https://www.udayavani.com/wp-content/uploads/2024/04/RC-620x459.jpg)
ಮಂಗಳೂರು: ಹೊಸ ವಾಹನ ಖರೀದಿಸಿದವರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಪ್ರಯಾಣದ ವೇಳೆ ತಡೆದು ನಿಲ್ಲಿಸುವ ಅಧಿಕಾರಿಗಳು ದಾಖಲೆ ನೀಡುವಂತೆ ಕೇಳಿದಾಗ ತೋರಿಸಲು ಸ್ಮಾರ್ಟ್ ಕಾರ್ಡ್ ಇಲ್ಲದ ವಾಹನ ಮಾಲಕರು ಸಮಸ್ಯೆಗೀಡಾಗುತ್ತಿದ್ದಾರೆ.
ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿ ಸರಿಸುಮಾರು 1 ತಿಂಗಳೊಳಗೆ ನೋಂದಣಿ ಪತ್ರ (ಆರ್ಸಿ) ಕೈಸೇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮೂರು- ನಾಲ್ಕು ತಿಂಗಳಾದರೂ ವಾಹನದ ನೋಂದಣಿ ಪತ್ರ ಸಿಗುತ್ತಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಅಲ್ಲಲ್ಲಿ ಚೆಕ್ಪೋಸ್ಟ್ ಗಳನ್ನು ತೆರೆಯಲಾಗಿದ್ದು, ತೀವ್ರ ತಪಾಸಣೆ ನಡೆಯುತ್ತಿದೆ. ಹೊರ ಜಿಲ್ಲೆಯ ಅಧಿಕಾರಿಗಳು ತಪಾಸಣ ತಂಡದಲ್ಲಿರುವ ಹಿನ್ನೆಲೆಯಲ್ಲಿ ದಾಖಲೆ ಪರಿಶೀಲನೆ ವೇಳೆ ಮನವರಿಕೆ ಮಾಡುವುದೇ ಸವಾಲಿನ ಕೆಲಸ. ರಾತ್ರಿ ಸಂಚಾರದ ವೇಳೆ ತಪಾಸಣೆ ತೀವ್ರವಾಗಿರುವ ಕಾರಣ ಅನಗತ್ಯ ಸಂಕಷ್ಟ ಎದುರಾಗು ತ್ತಿದೆ ಎಂದು ವಾಹನ ಚಾಲಕರು ಅಸಮಾಧಾನ ಹೊರಹಾಕಿದ್ದಾರೆ.
ಸಂದೇಶ ಬಂದರೂ
ಕಾರ್ಡ್ ಸಿಗುತ್ತಿಲ್ಲ!
ಹೊಸ ವಾಹನ ಖರೀದಿಸಿದ ಕೆಲವರಿಗೆ ಸ್ಮಾರ್ಟ್ಕಾರ್ಡ್ ಅಂಚೆ ಮೂಲಕ ರವಾನಿಸಲಾಗಿದೆ ಎಂಬ ಸಂದೇಶ ಬರುತ್ತದೆ. ಆದರೆ ತಿಂಗಳು ಕಳೆದರೂ ಸ್ಮಾರ್ಟ್ಕಾರ್ಡ್ ಕೈ ಸೇರುತ್ತಿಲ್ಲ. ಸಂದೇಶದಲ್ಲಿರುವ ಟ್ರ್ಯಾಕಿಂಗ್ ಸಂಖ್ಯೆಯ ಮೂಲಕ ಪರಿಶೀಲನೆ ಅಸಾಧ್ಯ ವಾದ ಮಾತು ಎನ್ನುವುದು ಕೆಲವರ ಆರೋಪ.ಸ್ಮಾರ್ಟ್ ಕಾರ್ಡ್ ಸಿಗದೆ ಕಚೇರಿ ಅಲೆದಾಡುವ ಪ್ರಮೇಯ ಎದುರಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಚಾರದ ವೇಳೆಯಲ್ಲೂ ಸಮಸ್ಯೆಯಾಗುತ್ತಿದೆ. ಯಾರೂ ಕೂಡ ಸರಿಯಾದ ಮಾಹಿತಿ ಒದಗಿಸುತ್ತಿಲ್ಲ. ಸ್ಮಾರ್ಟ್ ಕಾರ್ಡ್ಗಳು ಕಚೇರಿಯಲ್ಲಿದ್ದರೂ ವಿತರಿಸುತ್ತಿಲ್ಲ.
ಹೊಸ ಸಂಸ್ಥೆಯೊಂದಿಗೆ ವಿಲೀನದಿಂದ ವಿಳಂಬ!
ರೋಸ್ಮಾಟ ಕಂಪೆನಿಗೆ ಸ್ಮಾರ್ಟ್ ಕಾರ್ಡ್ಗಳನ್ನು ತಯಾರಿಸುವ ಜವಾಬ್ದಾರಿ ನೀಡಲಾಗಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ ದಲ್ಲಿದ್ದ ವಾಹನಗಳ ಮಾಹಿತಿಯನ್ನು ರೋಸ್ಮಾಟ ಕಂಪೆನಿಗೆ ಹಸ್ತಾಂತರ ಮಾಡುವ ವೇಳೆ ವಿಳಂಬವಾಗಿದೆ. ಕಾರ್ಡ್ಗಳನ್ನು ಮುದ್ರಿಸಿ ಬಳಿಕ ಅವುಗಳಿಗೆ ಆಯಾ ವಾಹನದ ಮಾಹಿತಿಯನ್ನು ಶೇಖರಿಸುವ ಪ್ರಕ್ರಿಯೆ
(ನಾಲೆಡ್ಜ್ ಮ್ಯಾನೇಜ್ಮೆಂಟ್ ಸಿಸ್ಟಂ)ಗೆ ಕಾಲಾವಕಾಶ ಅಗತ್ಯವಾಗಿದ್ದು, ಕಳೆದ ಕೆಲವು ತಿಂಗಳಲ್ಲಿ ಈ ಪ್ರಕ್ರಿಯೆ ತಡವಾಗಲು ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಜಿಲಾಕರ್ನಲ್ಲಿದೆ ಮಾಹಿತಿ
ವಾಹನದ ಮಾಹಿತಿ ಡಿಜಿಲಾಕರ್ನಲ್ಲಿ ದಾಖಲಾಗಿರುತ್ತದೆ. ಯುವ ಜನತೆ ಬಹುತೇಕ ಡಿಜಿ ಲಾಕರ್ ಬಳಸುತ್ತಿರುವ ಕಾರಣ ದಾಖಲೆಗಳನ್ನು ಗಮನಿಸುತ್ತಾರೆ. ಆದರೆ ಹಿರಿಯ ನಾಗರಿಕರಿಗೆ ಹಾಗೂ ಅನೇಕ ವಾಹನ ಸವಾರರಿಗೆ ಡಿಜಿ ಲಾಕರ್ ಬಗ್ಗೆ ಮಾಹಿತಿಯ ಕೊರತೆ ಇದ್ದು, ಕಾರ್ಡ್ ಬೇಕೆಂದು ದುಂಬಾಲು ಬೀಳುತ್ತಿದ್ದಾರೆ.
ಮಂಗಳೂರು ಆರ್ಟಿಒ ವ್ಯಾಪ್ತಿಯಲ್ಲಿ ನೊಂದಣಿಗೊಂಡಿರುವ ಎಲ್ಲ ವಾಹನಗಳ ಸ್ಮಾರ್ಟ್ ಕಾರ್ಡ್ಗಳನ್ನು ಅಂಚೆ ಮೂಲಕ ಮಾಲಕರಿಗೆ ರವಾನಿಸಲಾಗಿದೆ. ಎಚ್ಎಸ್ಆರ್ಪಿ ಸಂಖ್ಯೆ ಆಗದೇ ಇರುವ ಕೆಲವು ವಾಹನಗಳ ಆರ್ಸಿ ಮಾತ್ರವೇ ಬಾಕಿ ಇವೆ.
-ಶ್ರೀಧರ್ ಮಲ್ಲಾಡ್,
ಉಪ ಸಾರಿಗೆ ಆಯುಕ್ತರು, ಮಂಗಳೂರು
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.