ನಾಡಕಚೇರಿಯಲ್ಲಿ ವಿಳಂಬ ಧೋರಣೆ: ಗ್ರಾಮಸ್ಥರ ಆಕ್ರೋಶ

 ಹಿರೇಬಂಡಾಡಿ ಗ್ರಾಮಸಭೆ; 45 ವರ್ಷಗಳಿಂದ ಮನವಿ ಸಲ್ಲಿಸಿದರೂ ಕಲ್ಲಡ್ಕದಲ್ಲಿ ಸೇತುವೆ ನಿರ್ಮಿಸಿಲ್ಲವೆಂದು ದೂರು

Team Udayavani, Sep 20, 2019, 5:57 AM IST

1909UPG04

ಉಪ್ಪಿನಂಗಡಿ : ನಾಡಕಚೇರಿಯಲ್ಲಿ ಯಾವುದೇ ಕೆಲಸಗಳು ಸಕಾಲದಲ್ಲಿ ಆಗುತ್ತಿಲ್ಲ. ನೆಟ್‌ವರ್ಕ್‌ ಸಮಸ್ಯೆ ಇದೆ ಎಂದು ವಿಳಂಬ ಮಾಡುತ್ತಾರೆ ಎಂದು ಗ್ರಾಮಸ್ಥರು ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧ್ಯಕ್ಷ ಹಮ್ಮಬ್ಬ ಶೌಕತ್‌ ಆಲಿ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಮುದಾಯ ಭವನದಲ್ಲಿ ಸಭೆ ನಡೆಯಿತು. ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾರಾಣಿ ನೋಡಲ್‌ ಅಧಿಕಾರಿಯಾಗಿದ್ದರು.

ಗ್ರಾಮಕರಣಿಕ ರಮಾನಂದ ಚಕ್ಕಡಿ ಮಾಹಿತಿ ನೀಡುತ್ತಿದ್ದ ವೇಳೆ ವಿಷಯ ಪ್ರಸ್ತಾವಿಸಿದ ಗ್ರಾಮಸ್ಥರಾದ ಕಿಶೋರ್‌, ರವಿ ಪಟಾರ್ತಿ, ಶೇಷಪ್ಪ ನೆಕ್ಕಿಲು ಮತ್ತು ಚೆನ್ನಕೇಶವ, ನಾಡಕಚೇರಿಯಲ್ಲಿ ಯಾವುದೇ ಕೆಲಸಗಳು ಸಕಾಲದಲ್ಲಿ ನಡೆಯುತ್ತಿಲ್ಲ. ನೆಟ್‌ವರ್ಕ್‌ ಇಲ್ಲ, ಸರ್ವರ್‌ ಬ್ಯುಸಿ, ತಂಬ್‌ ಆಗುತ್ತಿಲ್ಲ ಎಂಬ ನೆಪವೊಡ್ಡಿ ಅರ್ಜಿ ವಿಲೇವಾರಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಕ್ರಿಯಿಸಿದ ಗ್ರಾಮಕರಣಿಕ ರಮಾನಂದ, ಇಂತಹ ಸಮಸ್ಯೆಗಳಾಗುತ್ತಿದ್ದಲ್ಲಿ ಉಪತಹಶೀಲ್ದಾರ್‌ ಗಮನಕ್ಕೆ ತರಬೇಕೆಂದರು. ನಾಡಕಚೇರಿಯ ಸಿಬಂದಿ ರವಿ ಎಂಬವರ ವಿರುದ್ಧ ದೂರುಗಳಿದ್ದರೂ ಇಲ್ಲಿ ತನಕ ಬದಲಾವಣೆ ಮಾಡಿಲ್ಲ ಎಂದು ಗ್ರಾಮ ಸ್ಥರು ಆರೋಪಿಸಿದರು. ನಾಡಕಚೇರಿಯ ಸಮಸ್ಯೆ ತಹಶೀ ಲ್ದಾರ್‌ ಗಮನಕ್ಕೆ ತರಲು ನಿರ್ಣಯಿ ಸಲಾಯಿತು.

ಸೇತುವೆ ನಿರ್ಮಿಸಿ
ಪೆರಿಯಡ್ಕದಿಂದ ಕೊಯಿಲ ಗ್ರಾಮದ ಗಂಡಿಬಾಗಿಲು ಸಂಪರ್ಕಿಸುವ ರಸ್ತೆಯ ಕಲ್ಲಡ್ಕ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ 45 ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ. ಇಲ್ಲಿಯ ತನಕ ನಾಲ್ಕು ಶಾಸಕರಿಗೂ ಮನವಿ ಮಾಡಲಾಗಿದೆ. ಆದರೆ ನಮ್ಮ ಬೇಡಿಕೆ ಈಡೇರಿಲ್ಲ ಎಂದು ಗ್ರಾಮಸ್ಥ ಜಯರಾಮ ಹಾಗೂ ಇತರರು ಜಿ.ಪಂ. ಸದಸ್ಯೆ ಶಯನಾ ಜಯಾನಂದ ಅವರಲ್ಲಿ ಆಕ್ರೋಶದಿಂದಲೇ ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಗ್ರಾ.ಪಂ. ಅಧ್ಯಕ್ಷರು, ಅಗರಿ ಎಂಬಲ್ಲಿ ರಸ್ತೆ ಇಕ್ಕಟ್ಟಾಗಿತ್ತು. ಅದನ್ನು ವಿಸ್ತರಿಸಲಾಗಿದೆ. ಸಡಕ್‌ ಯೋಜನೆಯಡಿ ಅನುದಾನ ಮಂಜೂರಾದಲ್ಲಿ ಸೇತುವೆ ನಿರ್ಮಾಣವೂ ಆಗಲಿದೆ ಎಂದರು.

ಗ್ರಾಮಸ್ಥ ಚೆನ್ನಕೇಶವ ಮಾತನಾಡಿ, ಇಲ್ಲಿ ಸೇತುವೆ ನಿರ್ಮಾಣಕ್ಕೆ 1984ರಲ್ಲೇ ಅನುದಾನ ಮಂಜೂರಾಗಿತ್ತು. ಆದರೆ ಬೇರೆ ಕಡೆಗೆ ಶಿಫ್ಟ್ ಮಾಡಲಾಗಿದೆ. ಈ ಹಿಂದಿನ ಶಾಸಕರು 50 ಲಕ್ಷ ರೂ.ಅನುದಾನ ಕಾಯ್ದಿರಿಸಿದ್ದರೂ ಅದನ್ನು ರಸ್ತೆ ಕಾಂಕ್ರಿಟ್‌ ಕಾಮಗಾರಿಗೆ ಬಳಸಲಾಗಿದೆ ಎಂದರು. ಅಧ್ಯಕ್ಷರು ಮಾತನಾಡಿ, ಪ್ರಾಶಸ್ತ್ಯದಲ್ಲಿ ಅನುದಾನ ಮಂಜೂರು ಮಾಡಿ, ಸೇತುವೆ ನಿರ್ಮಾಣಕ್ಕೆ ಶಾಸಕರಿಗೆ ಮನವಿ ಮಾಡೋಣ ಎಂದರು. ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ದಂಡದ ಮೊತ್ತ ಕಡಿಮೆ ಮಾಡಲಿ
ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ರಸ್ತೆ ನಿಯಮ ಉಲ್ಲಂಘನೆ ಮಾಡುವವರಿಗೆ ವಿಪರೀತ ದಂಡ ವಿಧಿಸುತ್ತಿರುವುದಕ್ಕೆ ಗ್ರಾಮಸಭೆಯಲ್ಲಿ ಆಕ್ಷೇಪ ವ್ಯಕ್ತವಾಯಿತು. ಗ್ರಾಮಸ್ಥ ಯಶವಂತ ಸರೋಳಿ ಮಾತನಾಡಿ, ಕಳ್ಳತನ ಮಾಡಿದವನಿಗೆ ಜಾಮೀನು ಸಿಗುತ್ತದೆ. ಆದರೆ ರಸ್ತೆ ನಿಯಮ ಉಲ್ಲಂ ಸಿದವರಿಗೆ ವಿಪರೀತ ದಂಡ ಹಾಗೂ 3 ತಿಂಗಳು ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಲಾಗಿದೆ ಎಂದರು. ಈ ಬಗ್ಗೆ ಚರ್ಚೆ ನಡೆದು, ರಸ್ತೆ ನಿಯಮ ಉಲ್ಲಂಘನೆಗೆ ವಿಧಿಸುತ್ತಿರುವ ದಂಡದ ಮೊತ್ತ ಕಡಿಮೆ ಮಾಡಬೇಕು ಹಾಗೂ ರಸ್ತೆಗಳ ದುರಸ್ತಿಗೆ ಆದ್ಯತೆ ಕೊಡಬೇಕೆಂದು ಸರಕಾರಕ್ಕೆ ಮನವಿ ಮಾಡಲು ನಿರ್ಣಯಿಸಲಾಯಿತು.

ಪೌಷ್ಟಿಕಾಂಶ ನೀಡಲಿ
ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ. ಇಲ್ಲಿಗೆ ಬರುವ ಮಕ್ಕಳಿಗೂ ಅಂಗನವಾಡಿಯಂತೆ ಪೌಷ್ಟಿಕಾಂಶದ ಆಹಾರ ನೀಡಬೇಕೆಂದು ಯಶವಂತ ಸರೋಳಿ ಹಾಗೂ ಇತರರು ಆಗ್ರಹಿಸಿದರು.ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಪುರುಷರ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ಕೂಲಂಕಷ ತನಿಖೆ ನಡೆಸಿ ನಿರಪರಾಧಿಗಳಿಗೆ ಅನ್ಯಾಯವಾಗದಂತೆ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ನಿತ್ಯಾನಂದ ಶೆಟ್ಟಿ ಆಗ್ರಹಿಸಿದರು. ರಾಮಕೃಷ್ಣ ಧ್ವನಿಗೂಡಿಸಿದರು.

ಆರೋಗ್ಯ ಕೇಂದ್ರವಾಗಲಿ
ಹಿರೇಬಂಡಾಡಿ ಗ್ರಾಮವು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿದೆ. ಆದರೆ ಇಲ್ಲಿಯವರಿಗೆ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ಹೋಗುವುದು ಸುಲಭ. ಈಗ ಹಿರೇಬಂಡಾಡಿಯಲ್ಲಿ ಸಾಕಷ್ಟು ಜನಸಂಖ್ಯೆ ಇರುವುದರಿಂದ ಇಲ್ಲೇ ಆರೋಗ್ಯ ಕೇಂದ್ರ ಆರಂಭಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ನರೇಗಾ ಯೋಜನೆಯಡಿ ಕಟ್ಟಡ ನಿರ್ಮಾಣಕ್ಕೆ ಅವಕಾಶವಿದ್ದಲ್ಲಿ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಅಧ್ಯಕ್ಷ ಶೌಕತ್‌ ಆಲಿ ಹೇಳಿದರು. ಹಿರೇಬಂಡಾಡಿಗೆ 108 ಆ್ಯಂಬುಲೆನ್ಸ್‌ ಸೇವೆ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಅಸಮರ್ಪಕ ಡ್ರಮ್‌ ವಿತರಣೆ
ಕೃಷಿ ಇಲಾಖೆಯ ಸಹಯೋಗದಲ್ಲಿ ಬ್ರಹ್ಮಾವರದ ಸಂಸ್ಥೆಯೊಂದು ಸಾವಯವ ಕೃಷಿಕರಿಗೆ ಡ್ರಮ್‌ ವಿತರಿಸಿದೆ. ಆದರೆ ಈ ಬಗ್ಗೆ ಯಾರಿಗೂ ಸರಿಯಾದ ಮಾಹಿತಿ ಕೊಟ್ಟಿಲ್ಲ ಎಂದು ನಿತ್ಯಾನಂದ ಶೆಟ್ಟಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಅಧಿಕಾರಿ ಭರಮಣ್ಣನವರ, ಶೂನ್ಯ ಬಂಡವಾಳ ಯೋಜನೆಯಡಿ ಹಿರೇಬಂಡಾಡಿ ಹಾಗೂ ಬಜತ್ತೂರು ಗ್ರಾಮದ 44 ರೈತರಿಗೆ ಸಂಸ್ಥೆಯೇ ಡ್ರಮ್‌ ವಿತರಣೆ ಮಾಡಲಾಗಿದೆ. ಈ ಬಗ್ಗೆ ಗ್ರಾಮದಲ್ಲಿ 2 ಸಲ ಸಭೆ ಕರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಧಿಕಾರಿಗಳ ವರ್ಗಾಯಿಸಿ
ಹಿರೇಬಂಡಾಡಿ ಗ್ರಾಮಕ್ಕೆ ಸಂಬಂಧಿಸಿದಂತೆ ಕೃಷಿ ಹಾಗೂ ಶಿಕ್ಷಣ ಇಲಾಖೆಯಲ್ಲಿ ಕೆಲವು ಅಧಿಕಾರಿಗಳು 10ಕ್ಕಿಂತ ಹೆಚ್ಚು ವರ್ಷ ಕೆಲಸ ಮಾಡುತ್ತಿದ್ದಾರೆ. ಅವರ ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕೆಂದು ಕಿಶೋರ್‌ ಆಗ್ರಹಿಸಿದರು. ಈ ಬಗ್ಗೆ ಸರಕಾರಕ್ಕೆ ಬರೆಯಲು ನಿರ್ಣಯಿಸಲಾಯಿತು. ಹಿರೇಬಂಡಾಡಿ ಸ.ಹಿ.ಪ್ರಾ. ಶಾಲೆಯಲ್ಲಿನ ಬೂತ್‌ ನಂ. 48ರಲ್ಲಿ ಮತದಾರರ ಸಂಖ್ಯೆ ಅಧಿಕವಾಗಿದ್ದು, ಪ್ರತಿ ಸಲವೂ ರಾತ್ರಿ 8 ಗಂಟೆ ತನಕ ಮತದಾನ ನಡೆಯುತ್ತಿದೆ. ಇಲ್ಲಿ ಎರಡು ಮತದಾನದ ಬೂತ್‌ ತೆರೆಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಈ ಬಗ್ಗೆ ತಹಶೀಲ್ದಾರ್‌ಗೆ ಮನವಿ ಮಾಡಲು ನಿರ್ಣಯಿಸಲಾಯಿತು.

ಮೈದಾನಕ್ಕೆ ದಿ| ಮಾಧವ ಗೌಡರ ಹೆಸರು
ಹಿರೇಬಂಡಾಡಿಲ್ಲಿ ಸರಕಾರಿ ಪ್ರೌಢಶಾಲೆ ಆರಂಭಿಸುವ ನಿಟ್ಟಿನಲ್ಲಿ ತಾ.ಪಂ. ಸದಸ್ಯರೂ ಆಗಿದ್ದ ಶಾಂತಿತಡ್ಡ ದಿ| ಮಾಧವ ಗೌಡರು ಬಹಳಷ್ಟು ಪ್ರಯತ್ನ ಪಟ್ಟಿದ್ದಾರೆ. ಅಲ್ಲಿನ ಆಟದ ಮೈದಾನಕ್ಕೆ ಅವರ ಹೆಸರು ಇಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಸುಜಾತಾ, ಕೃಷಿ ಅಧಿಕಾರಿ ಭರಮಣ್ಣನವರ, ಗ್ರಾಮಕರಣಿಕ ರಮಾನಂದ ಚಕ್ಕಡಿ, ಜಿ.ಪಂ. ಎಂಜಿನಿಯರ್‌ ಸಂದೀಪ್‌, ಮೆಸ್ಕಾಂ ಸಹಾಯಕ ಎಂಜಿನಿಯರ್‌ ರಾಜೇಶ್‌ ಮಾಹಿತಿ ನೀಡಿದರು. ಜಿ.ಪಂ. ಸದಸ್ಯೆ ಶಯನಾ ಜಯಾನಂದ, ತಾ.ಪಂ. ಸದಸ್ಯ ಮುಕುಂದ ಬಜತ್ತೂರು ಮಾತನಾಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಉಷಾ ಲಕ್ಷ್ಮೀಶ, ಸದಸ್ಯರಾದ ಪ್ರಕಾಶ್‌ ರೈ ಬೆಳ್ಳಿಪ್ಪಾಡಿ, ವಿಶ್ವನಾಥ ಕೆಮ್ಮಾಟೆ, ಮುದ್ದ ತಾಳಿಪಡು³, ಸದಾನಂದ ಗೌಡ ಅಡೆಕ್ಕಲ್‌, ಸೋಮೇಶ ಕೇಪುಳು, ಮಂಜುಳಾ ಸರೋಳಿ, ವೆಂಕಮ್ಮ ಮುರ, ಮಾಲತಿ ಕೆಮ್ಮಾರ, ಚಂದ್ರಾವತಿ ನೆಹರುತೋಟ, ನಿತಿನ್‌ ತಾರಿತ್ತಡಿ, ನಳಿನಾಕ್ಷಿ ನಾಗನಕೋಡಿ, ಪುಷ್ಪಾವತಿ ಶಾಂತಿತಡ್ಡ ಉಪಸ್ಥಿತರಿದ್ದರು. ಗ್ರಾಮಸ್ಥರಾದ ದಯಾನಂದ ಸರೋಳಿ, ನೀಲಯ್ಯ, ಪೊಡಿಯಾ ಪೂಜಾರಿ ಚರ್ಚೆಯಲ್ಲಿ ಪಾಲ್ಗೊಂಡರು. ಪಿಡಿಒ ದಿನೇಶ್‌ ಸ್ವಾಗತಿಸಿದರು. ಸಿಬಂದಿ ಸಹಕರಿಸಿದರು.

ಜಿ.ಪಂ., ತಾ.ಪಂ. ಸದಸ್ಯರು ಗ್ರಾಮ ಭೇಟಿ ಮಾಡಲಿ
ಜಿ.ಪಂ. ಮತ್ತು ತಾ.ಪಂ. ಸದಸ್ಯರು ತಿಂಗಳಲ್ಲಿ 1 ದಿನ ಗ್ರಾ.ಪಂ. ಕಚೇರಿಯಲ್ಲಿದ್ದು ಗ್ರಾಮಸ್ಥರ ಅಹವಾಲು ಸ್ವೀಕರಿಸಬೇಕು ಎಂದು ಗ್ರಾಮಸ್ಥ ಕಿಶೋರ್‌ ಆಗ್ರಹಿಸಿದರು. ಜಿ.ಪಂ. ಸದಸ್ಯೆ ಶಯನಾ ಜಯಾನಂದ ಪ್ರತಿಕ್ರಿಯಿಸಿ, ದಿನ ನಿಗದಿಗೊಳಿಸಿ ಭೇಟಿ ಕೊಡುವುದು ಕಷ್ಟ ಸಾಧ್ಯ. ಜಿ.ಪಂ.ನಿಂದ ಗ್ರಾಮಸ್ಥರಿಗೆ ಸವಲತ್ತುಗಳನ್ನು ತೆಗೆಸಿಕೊಡುತ್ತೇವೆ. ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ ಎಂದರು. ಹಿರೇಬಂಡಾಡಿ ಪ್ರೌಢಶಾಲೆ ಹಾಗೂ ಹಿ.ಪ್ರಾ. ಶಾಲೆಯಲ್ಲಿ ನಡೆದ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯಲ್ಲಿ ಹೆಸರಿದ್ದರೂ ಜಿ.ಪಂ. ಸದಸ್ಯೆ ಗೈರು ಹಾಜರಾಗಿದ್ದಾರೆ ಎಂದು ಗ್ರಾಮಸ್ಥ ಚೆನ್ನಕೇಶವ ಹೇಳಿದರು. ನಿಯಮಾನುಸಾರ ಆಮಂತ್ರಣ ಪತ್ರದಲ್ಲಿ ಜಿ.ಪಂ. ಸದಸ್ಯರ ಹೆಸರು ಹಾಕಿದ್ದಾರೆ. ಅದೇ ದಿನ ಬೇರೆ ಕಡೆಯೂ ಕಾರ್ಯಕ್ರಮವಿದ್ದ ಕಾರಣ ಭಾಗವಹಿಸಲಿಲ್ಲ ಎಂದು ಶಯನಾ ಸ್ಪಷ್ಟ ಪಡಿಸಿದರು. ತಾ.ಪಂ. ಸದಸ್ಯ ಮುಕುಂದ ಬಜತ್ತೂರು ಮಾತನಾಡಿ, ಊರಿನ ಅಭಿವೃದ್ಧಿಗೆ ಬದ್ಧ. ಗ್ರಾಮಕ್ಕೆ ಸಾಕಷ್ಟು ಸಲ ಭೇಟಿ ಕೊಟ್ಟಿದ್ದೇನೆ. ಗ್ರಾಮದ ಸಮಸ್ಯೆ ಬಗ್ಗೆ ಯಾವುದೇ ಸಮಯದಲ್ಲಿ ತಿಳಿಸಿದರೂ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು. ಚನ್ನಕೇಶವ ಪ್ರತಿಕ್ರಿಯಿಸಿ, ತಾ.ಪಂ. ಸದಸ್ಯ ಮುಕುಂದ ಹಾಗೂ ಗ್ರಾ.ಪಂ. ಅಧ್ಯಕ್ಷ ಹಮ್ಮಬ್ಬ ಶೌಕತ್‌ ಆಲಿ ಎಲ್ಲರ ನೋವಿಗೂ ತತ್‌ಕ್ಷಣ ಸ್ಪಂದಿಸುತ್ತಾರೆ. ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.