ನಿಧಾನಗತಿಯ ರಸ್ತೆ ಕಾಮಗಾರಿ: 2 ಕಿ.ಮೀ. ನಡೆಯಬೇಕಾದ ಸ್ಥಿತಿ!


Team Udayavani, May 25, 2018, 5:15 AM IST

sasihithlu-beach-25-5.jpg

ಸಸಿಹಿತ್ಲು: ಅಂತಾರಾಷ್ಟ್ರೀಯವಾಗಿ ಗುರುತಿಸಿಕೊಂಡಿರುವ ಹಳೆಯಂಗಡಿ ಗ್ರಾಮ ಪಂಚಾಯತ್‌ನ ಸಸಿಹಿತ್ಲು ಮುಂಡ ಬೀಚ್‌ ಪ್ರದೇಶಕ್ಕೆ ಎರಡು ತಿಂಗಳಿನಿಂದ ಪ್ರವಾಸಿಗರ ಕೊರತೆ ತೀವ್ರವಾಗಿ ಕಾಡಿದೆ. ಇಲ್ಲಿನ ರಸ್ತೆ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿರುವುದೇ ಇದಕ್ಕೆಲ್ಲ ಕಾರಣ. ಸಸಿಹಿತ್ಲು ಭಗವತೀ ದೇವಸ್ಥಾನದ ದ್ವಾರದಿಂದ ಮುಂಡ ಬೀಚ್‌ನ ಬಸ್‌ ನಿಲ್ದಾಣದವರೆಗೆ ರಾಷ್ಟ್ರೀಯ ಬಿರುಗಾಳಿ ವಿಪತ್ತು ಕುಗ್ಗಿಸುವ ಯೋಜನೆಯನ್ನು (ಎನ್‌.ಸಿ.ಆರ್‌.ಎಂ.ಪಿ.) ಪ್ರವಾಸೋದ್ಯಮ ಇಲಾಖೆಯಿಂದ 4.5 ಕೋ. ರೂ. ವೆಚ್ಚದಲ್ಲಿ ಪಿಡಬ್ಲ್ಯೂಡಿ ನೇತೃತ್ವದಲ್ಲಿ ರಸ್ತೆಯು ಕಾಂಕ್ರೀಟ್‌ ಆಗುತ್ತಿದ್ದು, ಶಿಲಾನ್ಯಾಸ ನಡೆದು ಎರಡು ತಿಂಗಳು ಆಗಿ ಕಾಮಗಾರಿಗೆ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

2 ಕಿ.ಮೀ. ನಡೆಯಬೇಕಾದ ಸ್ಥಿತಿ!
ಕಾಮಗಾರಿಗಾಗಿ ರಸ್ತೆಯನ್ನು ಬಂದ್‌ ಮಾಡಲಾಗಿದ್ದು, ಬೀಚ್‌ ಅಥವಾ ಮುಂಡ ಪ್ರದೇಶದ ಜನವಸತಿ ಪ್ರದೇಶಕ್ಕೆ ಹೋಗುವ ಜನರು ಹಾಗೂ ನಿವಾಸಿಗಳು ಸುಮಾರು 2 ಕಿ.ಮೀ. ನಡೆದೇ ಕ್ರಮಿಸಬೇಕು. ವಾಹನ ಸಂಚಾರ ಕೂಡ ಇಲ್ಲಿ ನಿಷೇಧಿಸಲಾಗಿದೆ. ಕೆಲವರು ಪ್ರಯಾಸಪಟ್ಟು ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಾರೆ. ಸರ್ವಿಸ್‌ ಬಸ್‌ಗಳು ಹಾಗೂ ರಿಕ್ಷಾಗಳು ಸಹ ದೇವಸ್ಥಾನದ ದ್ವಾರದವರೆಗೆ ಬಂದು ಸಂಚಾರ ಮೊಟಕುಗೊಳಿಸುತ್ತಿದೆ. 

ಬಿಕೋ ಎನ್ನುತ್ತಿದೆ ಬೀಚ್‌

ರಸ್ತೆ ಎರಡು ಸ್ಲಾಬ್‌ ನಲ್ಲಿ ಕಾಂಕ್ರೀಟ್‌ ಕಾಮಗಾರಿ ನಡೆಯುತ್ತಿದೆ. ಒಂದು ಭಾಗದ ಕಾಮಗಾರಿ ಮುಗಿದಿದ್ದರೂ ಅಗಲ ಕಿರಿದಾದ ಕಾರಣ ವಾಹನಗಳು ಸಂಚರಿಸಲು ಕಷ್ಟಕರವಾಗಿದೆ. ಲಘುವಾಹನಗಳು ಪ್ರವೇಶಿಸಬಹುದಾದರೂ ಅದಕ್ಕೆ ಅನುಮತಿ ಕೊಡುತ್ತಿಲ್ಲ. ರಸ್ತೆಯ ಉದ್ದಕ್ಕೂ ಇರುವ ಆಸುಪಾಸಿನ ನಿವಾಸಿಗಳು ಧೂಳಿನಿಂದ ಕಂಗೆಟ್ಟಿದ್ದಾರೆ. ಮುಂಡ ಬೀಚ್‌ಗೆ ಪ್ರವಾಸಿಗರ ಕೊರತೆಯಿಂದ ಮೂರು ಅಂಗಡಿಗಳಲ್ಲಿ ಎರಡು ಅಂಗಡಿಗಳು ಬಂದ್‌ ಆಗಿದೆ. ಒಂದು ಮಾತ್ರ ತೆರೆದಿದೆ. ಜನರ ಸಂಚಾರದಿಂದ ಬೀಚ್‌ ಪ್ರದೇಶ ಬಿಕೋ ಎನ್ನುತ್ತಿದೆ.

ಉದ್ಘಾಟನೆಯ ಆಸಕ್ತಿ ಕಾಮಗಾರಿಗಿಲ್ಲ
ಈ ರಸ್ತೆಯ ಶಿಲಾನ್ಯಾಸದ ಉದ್ಘಾಟನೆಗೆ ಎರಡು ಪ್ರಮುಖ ಪಕ್ಷಗಳ ಧುರೀಣರು ಬಹಳಷ್ಟು ಆಸಕ್ತಿ ವಹಿಸಿದ್ದರಲ್ಲದೇ ಎರಡೆರಡು ಬಾರಿ ಶಿಲಾನ್ಯಾಸ ನಡೆಸಲಾಗಿತ್ತು. ಅಂದಿನ ಶಾಸಕರು ಹಾಗೂ ಸಂಸದರು ಶಿಲಾನ್ಯಾಸ ನೆರವೇರಿಸಿ ಅನುದಾನ ನಾವೇ ತಂದಿದ್ದು ಎಂದು ಹೇಳಿಕೊಂಡಿದ್ದರು. ಆದರೆ ಆ ಆಸಕ್ತಿ ಮಾತ್ರ ಕಾಮಗಾರಿಯ ವೇಗಕ್ಕೆ ಬಳಕೆಯಾಗಿಲ್ಲ ಎನ್ನುವುದು ಇಲ್ಲಿನ ಗ್ರಾಮಸ್ಥರ ಆಕ್ರೋಶವಾಗಿದೆ. ಕೇವಲ ಚುನಾವಣೆಯ ಮುಂದಾಲೋಚನೆಯಿಂದ ಶಿಲಾನ್ಯಾಸಕ್ಕೆ ಆಸಕ್ತಿ ವಹಿಸಿದ್ದರು ಎಂದು ಸ್ಥಳೀಯರು ಪ್ರತಿಕ್ರಿಯಿಸಿದ್ದಾರೆ. ಶಿಲಾನ್ಯಾಸದ ನಾಮಫಲಕ ಸಹ ಕಿಡಿಗೇಡಿಗಳಿಂದ ಧರಶಾಹಿಯಾಗಿದೆ.

ವಾರದಲ್ಲಿ ಸಂಚಾರಕ್ಕೆ ಒಂದು ಭಾಗ ಮುಕ್ತ
ಸಸಿಹಿತ್ಲು ಬೀಚ್‌ನಿಂದ ದರ್ಗಾದವರೆಗೆ ಸುಮಾರು 6.1 ಕಿ.ಮೀ. ಉದ್ದದ ರಸ್ತೆಯನ್ನು ಒಂಭತ್ತು ತಿಂಗಳ ಕಾಲಾವಕಾಶದಲ್ಲಿ ನಿರ್ಮಿಸಲಾಗುತ್ತಿದೆ. 4 ಮೀ. ಅಗಲದ ಈ ರಸ್ತೆಯನ್ನು ಮೂರು ಹಂತಗಳಾಗಿ ನಿರ್ಮಾಣ ಮಾಡಲಾಗುತ್ತಿದೆ. ಭಗವತೀ ದ್ವಾರದ ಬಳಿಯ ರಸ್ತೆಯ 1.5 ಕಿ.ಮೀ.ಯ ಒಂದು ಭಾಗವನ್ನು ಮುಂದಿನ ವಾರದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಸೂಕ್ತವಾದ ಕ್ಯೂರಿಂಗ್‌ ನಡೆಯದೇ ಬಿಟ್ಟರೇ ಬಿರುಕು ಬಿಡುವ ಸಾಧ್ಯತೆ ಇದೆ. ನಾಗರಿಕರು ಸಹಕರಿಸಬೇಕು.
– ರವಿಕುಮಾರ್‌, ಸ.ಕಾ.ನಿ.ಅಭಿಯಂತರ,ಲೋಕೋಪಯೋಗಿ ಇಲಾಖೆ

ಸಸಿಹಿತ್ಲು ಫೇವರಿಟ್‌…
ಕಾಲೇಜಿನ ರಜೆಯನ್ನು ಸುಂದರ ಪರಿಸರದಲ್ಲಿ ಕಳೆಯಲು ಹಲವು ಬಾರಿ ಬಂದಿದ್ದೆವು. ಆದರೆ ಈಗ ಕಾಮಗಾರಿ ನಡೆಯುತ್ತಿರುವುದರಿಂದ 2 ಕಿ.ಮೀ. ನಡೆದುಕೊಂಡು ಬರಲು ಬೇಸರವಾಗುತ್ತಿದೆ. 
– ರಂಜಿತಾ, ಕಾಲೇಜು ವಿದ್ಯಾರ್ಥಿನಿ, ಮಂಗಳೂರು

— ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.