ಮಂಗಳೂರು-ಬೆಂಗಳೂರು ಹೆಚ್ಚುವರಿ ರೈಲಿಗೆ ಬೇಡಿಕೆ: ಘಾಟಿ ರಸ್ತೆಗಳಲ್ಲಿ ಭೂಕುಸಿತ

ಸ್ಥಗಿತದತ್ತ ಬೆಂಗಳೂರಿಗೆ ರಸ್ತೆ ಸಂಪರ್ಕ

Team Udayavani, Jul 19, 2022, 7:30 AM IST

ಮಂಗಳೂರು-ಬೆಂಗಳೂರು ಹೆಚ್ಚುವರಿ ರೈಲಿಗೆ ಬೇಡಿಕೆ: ಘಾಟಿ ರಸ್ತೆಗಳಲ್ಲಿ ಭೂಕುಸಿತ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟಿ ಹಾಗೂ ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ, ಅಗುಂಬೆ ರಸ್ತೆಗಳಲ್ಲಿ ಭಾರಿ ಮಳೆಗೆ ಸಂಭವಿಸಿರುವ ಭೂಕುಸಿತದಿಂದಾಗಿ ಮಂಗಳೂರಿನಿಂದ ಬೆಂಗಳೂರಿಗೆ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ ಹಂತಕ್ಕೆ ತಲುಪಿದ್ದು ಪರ್ಯಾಯ ಸಂಚಾರ ವ್ಯವಸ್ಥೆಯಾಗಿ ರೈಲುಗಳನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಹಾಗಾಗಿ ಮಂಗಳೂರಿನಿಂದ ಪ್ರಸ್ತುತ ಇರುವ ರೈಲುಗಳ ಜತೆ ಕೂಡಲೇ ಹೆಚ್ಚುವರಿ ರೈಲುಗಳನ್ನು ಓಡಿಸುವಂತೆ ಕರಾವಳಿ ಭಾಗದಿಂದ ಪ್ರಯಾಣಿಕರು, ವಿವಿಧ ಸಂಘಟನೆಗಳಿಂದ ಈಗಾಗಲೇ ಒತ್ತಾಯಿಸಲಾಗಿದೆ.

ಭೂಕುಸಿತ ಹಿನ್ನೆಲೆಯಲ್ಲಿ ಶಿರಾಡಿ ಘಾಟಿಯಲ್ಲಿ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಚಾರ್ಮಾಡಿ ಹಾಗೂ ಸಂಪಾಜೆ ಘಾಟಿ ರಸ್ತೆಗಳಲ್ಲಿ ಹೆಚ್ಚಿನ ವಾಹನಗಳು ಸಾಗುತ್ತಿರುವ ಕಾರಣ ಒತ್ತಡ ಸೃಷ್ಟಿಯಾಗಿದೆ. ಇಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದ್ದು ಯಾವುದೇ ಸಂದರ್ಭ ಸಂಚಾರ ಸ್ಥಗಿತದ ಆತಂಕ ಸೃಷ್ಟಿಯಾಗಿದೆ.

ಹೆಚ್ಚುವರಿ ರೈಲುಗಳ ಸಂಚಾರ
ಪ್ರಸ್ತುತ ಮಂಗಳೂರು -ಬೆಂಗಳೂರು -ಮಂಗಳೂರು ಮಧ್ಯೆ ಮಂಗಳೂರು-ಕಣ್ಣೂರು ರೈಲು ವಾರಕ್ಕೆ 4 ದಿನ, ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ ವಾರಕ್ಕೆ 3 ದಿನ, ವಯಾ ಮೈಸೂರು ವಾರಕ್ಕೆ ಮೂರು ದಿನ ಸಂಚರಿಸುತ್ತಿವೆ. ಪಂಚಗಂಗಾ ಎಕ್ಸ್‌ಪ್ರೆಸ್‌ ಪಡೀಲು ಮೂಲಕ ಸಂಚರಿಸುತ್ತಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಹೆಚ್ಚುವರಿಯಾಗಿ 1 ರಾತ್ರಿ ಹಾಗೂ 1 ಹಗಲು ರೈಲು ಆರಂಭಿÓಬೇಕಿದೆ. ಜತೆಗೆ ಮೈಸೂರು ಮಾರ್ಗವಾಗಿ ಸಾಗುತ್ತಿರುವ ರೈಲುಗಾಡಿಯನ್ನು ದಿನಂಪ್ರತಿ ಓಡಿಸಬೇಕು. ಇದಲ್ಲದೆ ಕಣ್ಣೂರು -ಬೆಂಗಳೂರು ಗಾಡಿ ಪ್ರಸ್ತುತ 16 ಬೋಗಿಗಳನ್ನು ಒಳಗೊಂಡಿದ್ದು ಇದಕ್ಕೆ ಹೆಚ್ಚುವರಿಯಾಗಿ ಇನ್ನೂ ಕೆಲವು ಬೋಗಿಗಳನ್ನು ಜೋಡಿಸಬೇಕು ಎಂಬ ಸಲಹೆಗಳು ರೈಲ್ವೇ ಬಳಕೆದಾರ ಸಂಘಟನೆಗಳಿಂದ ವ್ಯಕ್ತವಾಗಿವೆ.

ಪ್ರಸ್ತುತ ಸ್ಥಿತಿಯಲ್ಲಿ ಬೆಂಗಳೂರು -ಮಂಗಳೂರು ಮಧ್ಯೆ ಹೆಚ್ಚುವರಿ ರೈಲು ಸಂಚಾರ ವ್ಯವಸ್ಥೆ ಕಲ್ಪಿಸುವುದು ಅತ್ಯಗತ್ಯವಾಗಿದೆ.

ಈ ನಿಟ್ಟಿನಲ್ಲಿ ರೈಲ್ವೇ ಇಲಾಖೆ ತ್ವರಿತವಾಗಿ ಸ್ಪಂದಿಸಬೇಕು. ಜನಪ್ರತಿನಿಧಿಗಳು ಒತ್ತಡ ಹೇರಬೇಕು ಎಂದು ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತ ಕಾಮತ್‌ ತಿಳಿಸಿದ್ದಾರೆ.

ಸಂಸದರಿಂದ ರೈಲ್ವೇ ಸಚಿವರಿಗೆ ಮನವಿ
ಶಿರಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತ ಹಿನ್ನಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ ರೈಲುಗಳನ್ನು ಓಡಿಸುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿಯಾಗಿ ಮನವಿ ಮಾಡಿದ್ದಾರೆ.

ಮಂಗಳೂರು-ಬೆಂಗಳೂರು ಮಧ್ಯೆ ಪ್ರತಿದಿನ ಸುಮಾರು 10,000 ಮಂದಿ ಪ್ರಯಾಣಿಸುತ್ತಿದ್ದಾರೆ. ಇದೀಗ ಸಂಪರ್ಕ ಮಾರ್ಗಗಳಾಗಿರುವ ಶಿರಾಡಿ, ಚಾರ್ಮಾಡಿ ಹಾಗೂ ಸಂಪಾಜೆ ಘಾಟಿಗಳಲ್ಲಿ ಬಸ್‌ಸಂಚಾರಕ್ಕೆ ತಡೆಯಾಗಿರುವ ಹಿನ್ನೆಲೆಯಲ್ಲಿ ರೈಲು ಸಂಚಾರ ಪ್ರಮುಖ ಸಂಪರ್ಕವಾಗಿದೆ. ಆದುದರಿಂದ ಹೆಚ್ಚುವರಿಯಾಗಿ ಒಂದು ಹಗಲು ಮತ್ತು ಒಂದು ರಾತ್ರಿ ರೈಲು ಸಂಚಾರ ಆರಂಭಿಸುವಂತೆ ಸೋಮವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆಂದು ಸಂಸದರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.