ಎಂ95 ಮಾಸ್ಕ್ ಗೆ ಬೇಡಿಕೆ; ಹೆಚ್ಚಿನೆಡೆ ಅಲಭ್ಯ


Team Udayavani, Mar 5, 2020, 12:49 AM IST

mask

ಸಾಂದರ್ಭಿಕ ಚಿತ್ರ

ಮಂಗಳೂರು: ಕೊರೊನಾ ಬಾಧೆ ರಾಜ್ಯಕ್ಕೂ ತಟ್ಟಿರುವ ಹಿನ್ನೆಲೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ಮುಂದುವರಿದಿದೆ. ಈ ನಡುವೆ ಮಂಗಳವಾರದಿಂದ ಏಕಾಏಕಿ ವಿವಿಧ ಮೆಡಿಕಲ್‌ ಶಾಪ್‌ಗ್ಳಲ್ಲಿ ಎಂ95 ಮಾಸ್ಕ್ ಗೆ ಬೇಡಿಕೆ ಕುದುರಿದ್ದು, ಕೆಲವೆಡೆ ಮಾಸ್ಕ್ ಅಲಭ್ಯತೆಯೂ ಉಂಟಾಗಿದೆ.

ಪ್ರತಿ ಮಾಸ್ಕ್ಗೆ 200 ರೂ. ಮೇಲ್ಪಟ್ಟು ಬೆಲೆ ಇದೆ ಎಂದು ಮಂಗಳೂರಿನ ಕೆಲವು ಮೆಡಿಕಲ್‌ ಶಾಪ್‌ಗ್ಳ ಪ್ರಮುಖರು ತಿಳಿಸಿದ್ದಾರೆ. ಬೇಡಿಕೆ ಕುದುರಿದ್ದ ರಿಂದ ಮಾಸ್ಕ್ ಬೆಲೆಯನ್ನು ಕೆಲವು ಕಡೆ ಏಕಾಏಕಿ ಏರಿಸಿರುವ ಬಗ್ಗೆಯೂ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿವೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಕೆಲವು ಔದ್ಯೋಗಿಕ ಸಂಸ್ಥೆಗಳಲ್ಲಿ ಬುಧವಾರ ಉದ್ಯೋಗಿ ಗಳು ಮಾಸ್ಕ್ ಧರಿಸಿಯೇ ಕೆಲಸ ಮಾಡಿದರು.

ಭಾರತದಲ್ಲಿ ಕೇರಳ ಮೂಲದ ಇಬ್ಬರು ವ್ಯಕ್ತಿಗಳಲ್ಲಿ ಕೊರೊನಾ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಜಿಲ್ಲಾ ಸರಕಾರಿ ವೆನಲಾಕ್ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ವಿಶೇಷ ಐಸೋಲೇಟೆಡ್‌ ವಾರ್ಡ್‌ ತೆರೆಯಲಾಗಿದೆ. ವಿಮಾನ ನಿಲ್ದಾಣ, ನವಮಂಗಳೂರು ಬಂದರಿನಲ್ಲಿ ವಿಶೇಷ ತಪಾಸಣಾ ಕಾರ್ಯ ಮುಂದುವರಿಯುತ್ತಿದೆ.

ಕುವೈಟ್‌ ತೆರಳಲು ಮೆಡಿಕಲ್‌ ಸರ್ಟಿಫಿಕೆಟ್‌
ಕೊರೊನಾ ಜಗತ್ತಿನಾದ್ಯಂತ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಿಗೆ ತೆರಳುವ ಇತರ ದೇಶಗಳ ನಾಗರಿಕರಿಗೂ ಕಟ್ಟುನಿಟ್ಟಿನ ನಿಯಮ ಹೇರಲಾಗಿದೆ. ಮಾ. 8ರ ಬಳಿಕ ವೈದ್ಯಕೀಯ ಪ್ರಮಾಣಪತ್ರ ತೋರಿಸಿದ ಬಳಿಕವಷ್ಟೇ ಕುವೈಟ್‌ ರಾಷ್ಟ್ರ ಪ್ರವೇಶಿಸಲು ಅನುಮತಿ ನೀಡುವ ಬಗ್ಗೆ ಕುವೈಟ್‌ನ ನಾಗರಿಕ ವಿಮಾನಯಾನ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಭಾರತ, ಫಿಲಿಫೈನ್ಸ್‌, ಬಾಂಗ್ಲಾದೇಶ, ಈಜಿಪ್ಟ್, ಸಿರಿಯಾ, ಜಾರ್ಜಿಯಾ ಮತ್ತು ಲೆಬನಾನ್‌ನಿಂದ ಕುವೈಟ್‌ಗೆ ಪ್ರಯಾಣ ಬೆಳೆಸುವವರಿಗೆ ಈ ನಿಯಮ ಅನ್ವಯವಾಗಲಿದೆ. ಇದರಿಂದ ಕುವೈಟ್‌ನಲ್ಲಿ ಕೆಲಸ ಮಾಡುತ್ತಿರುವ ಸದ್ಯ ಊರಿಗೆ ಬಂದಿರುವ ಕರಾವಳಿಗರು ಕಂಗಾಲಾಗಿದ್ದಾರೆ. ಕುವೈಟ್‌ ರಾಯಭಾರ ಕಚೇರಿಯಿಂದ ಅನುಮೋದಿಸಲ್ಪಟ್ಟ ಆರೋಗ್ಯ ಕೇಂದ್ರಗಳಿಂದಲೇ ಪ್ರಮಾಣಪತ್ರ ಪಡೆಯಬೇಕಿದೆ. ಇದಕ್ಕೆ ಒಂದು ವಾರ ಕಾಲಾವಕಾಶ ಅಗತ್ಯ. ಕುವೈಟ್‌ಗೆ ತತ್‌ಕ್ಷಣವೇ ತೆರಳಬೇಕಾದವರಿಗೆ ಈ ನಿಯಮದಿಂದಾಗಿ ಸಮಸ್ಯೆ ಉಂಟಾಗಿದೆ.

ಟಾಪ್ ನ್ಯೂಸ್

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

tennis

ಇಟಾಲಿಯನ್‌ ಓಪನ್‌ ಟೆನಿಸ್‌ : ಜರ್ರಿ-ಜ್ವೆರೇವ್‌ ನಡುವೆ ಫೈನಲ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.