ಲೋವೋಲ್ಟೇಜ್ ಸಮಸ್ಯೆ ಸರಿಪಡಿಸಲು ಆಗ್ರಹ

ಪುಣಚ ಗ್ರಾಮದ ದಂಬೆ, ಗುಂಡ್ಯಡ್ಕ, ಗೌರಿಮೂಲೆ ಪರಿಸರ

Team Udayavani, Sep 13, 2022, 9:15 AM IST

2

ವಿಟ್ಲ: ಪುಣಚ ಗ್ರಾಮದ ದಂಬೆ, ಗುಂಡ್ಯಡ್ಕ, ಗೌರಿಮೂಲೆ ಪರಿಸರದಲ್ಲಿ ಲೋವೋಲ್ಟೆಜ್ ಸಮಸ್ಯೆ ಬಳಕೆದಾರರನು ಕಾಡುತ್ತಿದೆ. ಸುಮಾರು 60 ವರ್ಷಗಳ ಹಿಂದೆ ಅಳವಡಿಸಿದ ತಂತಿಯನ್ನು ಬದಲಾಯಿಸಿಲ್ಲ. ವಿದ್ಯುತ್‌ ಪರಿವರ್ತಕದ ಸಾಮರ್ಥ್ಯ ಹೆಚ್ಚಿಸಲಿಲ್ಲ. ವಿದ್ಯುತ್‌ ತಂತಿ ಬದಲಾಯಿಸಿ, ನಿರಂತರ ಸರಿಯಾದ ವಿದ್ಯುತ್‌ ಪೂರೈಸಬೇಕೆಂದು ದಂಬೆ, ಗುಂಡ್ಯಡ್ಕ, ಗೌರಿಮೂಲೆ ಪರಿಸರದ ಗ್ರಾಹಕರು ಆಗ್ರಹಿಸಿದ್ದಾರೆ.

ಮೆಸ್ಕಾಂ ಬಂಟ್ವಾಳ ಶಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್‌ಗೆ ಗೌರಿಮೂಲೆ ಸುರೇಶ್‌ ನಾಯಕ್‌ ಜಿ. ಮನವಿ ಸಲ್ಲಿಸಿ, ಈ ಭಾಗದ ಹಳ್ಳಿಯ ನಿವಾಸಿಗಳಿಗೆ 1960ರ ಆಸುಪಾಸಲ್ಲಿ ಗೃಹೋಪಯೋಗ ಮತ್ತು ನೀರಾವರಿಗಾಗಿ ವಿದ್ಯುತ್‌ ಸಂಪರ್ಕ ನೀಡಲಾಗಿತ್ತು. ನೀರಾವರಿಗಾಗಿ ಪಂಪ್‌ ಸೆಟ್‌ ಅಳವಡಿಸಲಾಗಿದ್ದು ವಿದ್ಯುತ್‌ ಪರಿವರ್ತಕವನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಇದು ಸಾಮರ್ಥ್ಯ ಕಳೆದುಕೊಂಡಿದೆ. ಹಲವು ವಿದ್ಯುತ್‌ಶಕ್ತಿ ಪಂಪ್‌ಸೆಟ್‌ಗಳನ್ನು ಹೊಂದಿರುವ ಇಲ್ಲಿ ವಿದ್ಯುತ್‌ ಪರಿವರ್ತಕದ ಸಾಮರ್ಥ್ಯ ಸಾಕಾಗದೆ ಲೋವೋಲ್ಟೇಜ್ ಸಮಸ್ಯೆ ಕೆಲವು ವರ್ಷಗಳ ಹಿಂದೆಯೇ ಆರಂಭವಾಗಿತ್ತು. ತಂತಿ ಹಳೆಯದಾಗಿ ಆಗಾಗಿ ಕಡಿದು ಬೀಳಲಾರಂಭಿಸಿದೆ. ನಿತ್ಯ ಸಂಚಾರಿಗಳು, ಜಾನುವಾರುಗಳು ಯಾವುದೇ ಸನ್ನಿವೇಶದಲ್ಲಿ ಅಪಾಯವನ್ನು ಎದುರಿಸುವ ಭಯವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇಲ್ಲಿನ ಬಳಕೆದಾರರು ವಿದ್ಯುತ್‌ ಬಿಲ್‌ ಪಾವತಿಸುತ್ತಿದ್ದಾರೆ. ಆದರೆ ಸಮರ್ಪಕ, ನಿರಂತರ ಹಾಗೂ ಗುಣಮಟ್ಟದ ವಿದ್ಯುತ್‌ ಪೂರೈಕೆಯಾಗದೇ ಶೋಷಣೆಗೊಳಗಾಗಿದ್ದಾರೆ. ಸತತ ಮನವಿ ಸಲ್ಲಿಸಿಯೂ ಗ್ರಾಹಕರಿಗೆ ಅನುಕೂಲವಾದ ಕಾರ್ಯವನ್ನು ಇಲಾಖೆ ಮಾಡಿಕೊಟ್ಟಿಲ್ಲ ಎನ್ನುವುದು ವಾಸ್ತವ.

ಶಾಸಕರ ಸೂಚನೆಗೂ ಬೆಲೆ ಇಲ್ಲ

2019ರ ಜನಸಂಪರ್ಕ ಸಭೆಯಲ್ಲಿ ಇಲ್ಲಿನ ಸಮಸ್ಯೆ ನಿವಾರಣೆಗೆ ಇಆಲಖೆಗೆ ಮನವಿ ಸಲ್ಲಿಸಿದ್ದಾರೆ. ಇಲ್ಲಿನ ಕೃಷಿಕರು ಜಂಟಿ ಪತ್ರ ಬರೆದು ಇಲಾಖೆಗೆ ಎಚ್ಚರಿಸಿ, ವಿದ್ಯುತ್‌ ಪರಿವರ್ತಕ ಮತ್ತು ತಂತಿಯನ್ನು ಬದಲಾಯಿಸಬೇಕೆಂದು ಕೇಳಿಕೊಂಡಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೂ ಇಲ್ಲಿನ ಕೃಷಿಕರು ಮನವಿ ಸಲ್ಲಿಸಿದ್ದಾರೆ. ಶಾಸಕರು ಈ ಪತ್ರವನ್ನು ಉಲ್ಲೇಖೀಸಿ, 2021ರಲ್ಲೇ ಮೆಸ್ಕಾಂಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಆದರೆ ಮೆಸ್ಕಾಂ ಈ ಮನವಿಗಳಿಗೆ ಸ್ಪಂದಿಸಿ ಈ ವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ.

ನಿರ್ವಹಣೆ ಅಗತ್ಯ: ಹೆಚ್ಚುವರಿ ಸಾಮರ್ಥ್ಯವಿರುವ ವಿದ್ಯುತ್‌ ಪರಿವರ್ತಕವನ್ನು ಸ್ಥಾಪಿಸಬೇಕು. ಹಳೆಯ ತಂತಿಯನ್ನು ಬದಲಾಯಿಸಬೇಕು. ನಿರಂತರ ವಿದ್ಯುತ್‌ ಪೂರೈಕೆಯಾಗಬೇಕು. ವಿದ್ಯುತ್‌ ನಿರ್ವಹಣೆ ಕಾಮಗಾರಿಗಳನ್ನು ಕಾಲಕಾಲಕ್ಕೆ ಮೆಸ್ಕಾಂ ಮಾಡಬೇಕು. –ದಯಾನಂದ ನಾಯಕ್‌ ಗೌರಿಮೂಲೆ, ಕೃಷಿಕರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.