ಬದಿಯಡ್ಕಕ್ಕೂ ಹರಡಿದ ಡೆಂಗ್ಯೂ ಜ್ವರ
Team Udayavani, May 22, 2018, 10:45 AM IST
ಬದಿಯಡ್ಕ: ಬದಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ವ್ಯಾಪಕ ಗೊಂಡಿದ್ದು, ಪೆರಡಾಲ ಬಳಿಯ ಪಟ್ಟಾಜೆಯಲ್ಲಿ ಇಬ್ಬರಿಗೆ ಡೆಂಗ್ಯೂ ಜ್ವರ ಖಚಿತಪಡಿಸಲಾಗಿದೆ. ನಾಲ್ಕು ಮಂದಿ ಜ್ವರದಿಂದ ಬಳಲುತ್ತಿದ್ದು, ಅವರಿಗೂ ಡೆಂಗ್ಯೂ ಬಾಧಿಸಿದೆ ಎಂದು ಶಂಕಿಸಲಾಗಿದೆ.
ಪಟ್ಟಾಜೆಯ ಮಧು (48) ಮತ್ತು ಬಾಲಕೃಷ್ಣ (51) ಅವರಿಗೆ ಡೆಂಗ್ಯೂ ಜ್ವರ ಖಚಿತ ಪಡಿಸ ಲಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖ ಲಾಗಿದ್ದಾರೆ. ಈ ಪೈಕಿ ಮಧು ಮರಳಿದ್ದಾರೆ, ಬಾಲಕೃಷ್ಣ ಆಸ್ಪತ್ರೆಯಲ್ಲಿದ್ದಾರೆ. ಇದೇ ಪರಿಸರದ ಮಹಾಲಿಂಗ (48), ನಾರಾಯಣ ಮಣಿಯಾಣಿ (48), ಪ್ರದೀಪ (18), ಚಂದ್ರಾವತಿ (33) ಅವರಿಗೆ ಜ್ವರ ಬಾಧಿಸಿದೆ. ಇವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ವಿಷಯ ತಿಳಿದು ಆರೋಗ್ಯ ಅಧಿಕಾರಿಗಳು ಮೇ 20ರಂದು ರಾತ್ರಿ ಪಟ್ಟಾಜೆಗೆ ತಲುಪಿದ್ದು, ಸೊಳ್ಳೆಗಳ ನಾಶಕ್ಕೆ ಫಾಗಿಂಗ್ ನಡೆಸಿದ್ದಾರೆ.
ಕಡಬದಲ್ಲಿ ಶಂಕಿತ ಡೆಂಗ್ಯೂ ಆತಂಕ
ಕಡಬ: ಕಡಬ ವ್ಯಾಪ್ತಿಯ ಕೋಡಿಂಬಾಳದ ಮಜ್ಜಾರು, ಮಡ್ಯಡ್ಕ ಪ್ರದೇಶಗಳಲ್ಲಿ ಒಂದು ತಿಂಗಳಿನಿಂದ 45ರಿಂದ 50 ಜನರು ಜ್ವರ ಪೀಡಿತರಾಗಿ ಆಸ್ಪತ್ರೆ ಸೇರಿದ್ದು, ಡೆಂಗ್ಯೂ ಜ್ವರದ ಶಂಕೆ ವ್ಯಕ್ತವಾಗಿದೆ.
ಎಲ್ಲರೂ ಚಿಕಿತ್ಸೆಗೆ ಸ್ಪಂದಿಸಿ ಗುಣಮುಖರಾಗಿದ್ದು, ಎಂಟು ರೋಗಿಗಳ ರಕ್ತದ ಮಾದರಿಯನ್ನು ಜಿಲ್ಲಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆದರೆ ಅದರಲ್ಲಿ ಡೆಂಗ್ಯೂ ದೃಢಪಟ್ಟಿಲ್ಲ. ಜನರು ಆತಂಕಪಡಬೇಕಿಲ್ಲ ಎಂದು ಕಡಬ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ತಿಳಿಸಿದ್ದಾರೆ. ಜ್ವರಪೀಡಿತ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಂಘ-ಸಂಸ್ಥೆಗಳ ನೆರವು ಪಡೆಯಲಾಗುತ್ತಿದೆ. ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಂಪೂರ್ಣ ಸನ್ನದ್ಧವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಹೇಳಿದ್ದಾರೆ.
ದ.ಕ. ಜಿಲ್ಲೆಯಲ್ಲಿ 40 ಪ್ರಕರಣಗಳು ದೃಢ
ದ.ಕ. ಜಿಲ್ಲೆಯಲ್ಲಿ ಜನವರಿ ತಿಂಗಳಿ ನಿಂದ ಇದುವರೆಗೆ ಮಂಗಳೂರು ತಾಲೂಕು- 18, ಬಂಟ್ವಾಳ ತಾಲೂಕು-5, ಪುತ್ತೂರು ತಾಲೂಕು- 5, ಬೆಳ್ತಂಗಡಿ ತಾಲೂಕು-6 ಮತ್ತು ಸುಳ್ಯ ತಾಲೂಕು-6 ಹೀಗೆ ಒಟ್ಟು 40 ಡೆಂಗ್ಯೂ ಪ್ರಕರಣಗಳು ಜಿಲ್ಲಾ ಪ್ರಯೋ ಗಾ ಲಯದಲ್ಲಿ ದೃಢಪಟ್ಟಿವೆ ಎಂದು ಆರೋಗ್ಯ ಇಲಾಖಾ ಮೂಲಗಳು ಮಾಹಿತಿ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ