ನಗರದಲ್ಲಿ ಡೆಂಗ್ಯೂ ಇಳಿಮುಖ; ಇನ್ನೂ ಇರಲಿ ಎಚ್ಚರ

'ಸುದಿನ' ಅಭಿಯಾನಕ್ಕೆ ನಿರೀಕ್ಷೆಗೂ ಮೀರಿ ಸ್ಪಂದಿಸಿದ ಜನತೆ

Team Udayavani, Aug 1, 2019, 5:00 AM IST

Q-15

ಮಹಾನಗರ: ನಗರದಲ್ಲಿ ವ್ಯಾಪಕವಾಗಿ ಹರಡಿ ಜನರನ್ನು ಆತಂಕಕ್ಕೀಡು ಮಾಡಿರುವ ಡೆಂಗ್ಯೂ ಇಳಿಮುಖವಾಗುತ್ತಿದ್ದು, ಹಂತ ಹಂತವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆಯು ವಿವಿಧ ಸಂಘ – ಸಂಸ್ಥೆಗಳ ನೇತೃತ್ವದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿ ಸುವ ಕಾರ್ಯವನ್ನು ನಡೆಸಿದೆ.

ಇನ್ನೊಂದೆಡೆ ‘ಉದಯವಾಣಿ-ಸುದಿನ’ ಕೂಡ ನಗರದಲ್ಲಿ ಡೆಂಗ್ಯೂ ವ್ಯಾಪಕವಾಗುತ್ತಿದ್ದಂತೆ ಜನರಲ್ಲಿ ಜಾಗೃತಿ ಮೂಡಿಸಲು 8 ದಿನಗಳಿಂದ ಅಭಿಯಾನವನ್ನು ಕೈಗೊಂಡಿದೆ. ಇದಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ, ಜಿಲ್ಲಾ ಪಂಚಾಯತ್‌ ತ್ವರಿತವಾಗಿ ಅನೇಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದೆ. ಡೆಂಗ್ಯೂ ಕಂಡುಬಂದಿರುವ ಪ್ರದೇಶಗಳು ಹಾಗೂ ಸಂಭಾವ್ಯ ಪ್ರದೇಶಗಳನ್ನು ಗ್ರಿಡ್‌ಗಳಾಗಿ ವಿಂಗಡಿಸಿ ಪ್ರತಿಯೊಂದು ಗ್ರಿಡ್‌ಗೂ ತಂಡಗಳನ್ನು ರೂಪಿಸಿ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಮಾಡಿದೆ ಹಾಗೂ ಮಾಡುತ್ತಲಿದೆ. ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ನಾಶಪಡಿಸುವ ಜತೆಗೆ ಲೋಪವೆಸಗಿರುವವರಿಗೆ ದಂಡ ವಿಧಿಸುವ ಕಾರ್ಯವೂ ಮುಂದುವರಿದಿದೆ.ದಂಡ ವಿಧಿಸುವುದು ಸಮಸ್ಯೆಗೆ ಪರಿಹಾರವಲ್ಲ. ವ್ಯಾಪಕ ಜನಜಾಗೃತಿ ಆದಾಗ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಸಾಧ್ಯ. ಜಿಲ್ಲಾಡಳಿತ ಕೈಗೊಂಡಿರುವ ಡೆಂಗ್ಯೂ ಡ್ರೈವ್‌ ಈ ನಿಟ್ಟಿನಲ್ಲಿ ಪೂರಕ. ಇದನ್ನು ಪ್ರತಿ ರವಿವಾರ ಜಿಲ್ಲೆಯಾದ್ಯಂತ ನಡೆಸುವುದಾಗಿ ಜಿಲ್ಲಾಡಳಿತ ಈಗಾಗಲೇ ಘೋಷಿಸಿದೆ. ಶಾಲೆ, ಕಾಲೇಜುಗಳ ಆವರಣದಲ್ಲಿ ಸ್ವಚ್ಛತೆಯ ಲೋಪದಿಂದಾಗಿ ಸಾಂಕ್ರಾಮಿಕ ರೋಗಗಳ ತಾಣವಾಗುತ್ತಿರುವ ಬಗ್ಗೆಯೂ ಉದಯವಾಣಿ ಅಭಿಯಾನ ದಲ್ಲಿ ಗಮನ ಸೆಳೆಯಲಾಗಿತ್ತು. ಇದೀಗ ಜಿಲ್ಲಾಡಳಿತ ಎಲ್ಲ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಭೆ ನಡೆಸಿ ಆವರಣಗಳನ್ನು ಸ್ವಚ್ಛವಾಗಿಡುವಂತೆ ಸೂಚಿಸಿದೆ ಮತ್ತು ಲೋಪಗಳು ಕಂಡು ಬಂದರೆ ಕಠಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸುದಿನ ಜಾಗೃತಿ
ಡೆಂಗ್ಯೂ ಎಚ್ಚರದ ಬಗ್ಗೆ ಮಾಹಿತಿ, ಎಚ್ಚರಿಕೆ, ಸಾರ್ವಜನಿಕ ಸಹಭಾಗಿತ್ವದ ಆವಶ್ಯಕತೆಯ ಬಗ್ಗೆ ಜುಲೈ 23ರಿಂದ ಸುದಿನ ವರದಿಗಳನ್ನು ಪ್ರಕಟಿಸಿ ಜನಜಾಗೃತಿ ಮೂಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದೆ. ಸಾರ್ವಜನಿಕರ ಅಭಿಪ್ರಾಯಗಳು, ದೂರುಗಳಿಗೆ ವೇದಿಕೆಯನ್ನು ಒದಗಿಸಿದೆ. ನಗರದಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳು, ಖಾಲಿ ನಿವೇಶನಗಳು, ಜನವಾಸವಿಲ್ಲದ ಮನೆಗಳು ಸಾಂಕ್ರಾಮಿಕ ರೋಗಗಳು ಹರಡುವ ಬಗ್ಗೆ ತಂದಿರುವ ಆತಂಕಗಳ ಬಗ್ಗೆ ಸಾರ್ವಜನಿಕರ ದೂರುಗಳನ್ನು ಚಿತ್ರ ಸಮೇತ ಪ್ರಕಟಿಸಿ ಅಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದೆ. ಇವುಗಳ ಪೈಕಿ ಹಲವು ಪ್ರದೇಶಗಳಿಗೆ ಅಧಿಕಾರಿಗಳ ತಂಡ ಸ್ಥಳಭೇಟಿ ಮಾಡಿ ಸೊಳ್ಳೆ ಲಾರ್ವಾ ನಾಶಕ್ಕೆ ಕ್ರಮ ಕೈಗೊಂಡಿದೆೆ. ಇದಕ್ಕೆ ಓದುಗರಿಂದ, ಅಧಿಕಾರಿ ವರ್ಗದಿಂದ ಶ್ಲಾಘನೆ ವ್ಯಕ್ತವಾಗಿದೆ. ಆ ಮೂಲಕ, ಡೆಂಗ್ಯೂ ಕುರಿತ ಈ ಅಭಿಯಾನವು ಮುಕ್ತಾಯಗೊಳ್ಳಲಿದೆ.

ಡೆಂಗ್ಯೂ, ಮಲೇರಿಯಾ ರೋಗ ಹರಡುವುದರಲ್ಲಿ ಹವಾಮಾನ ವೈಪರೀತ್ಯದ ಪಾಲೂ ಇದೆ. ಬಿಟ್ಟು ಬಿಟ್ಟು ಮಳೆ ಹಾಗೂ ಬಿಸಿಲು ವಾತಾವರಣ ಸೊಳ್ಳೆಗಳ ಉತ್ಪತ್ತಿಗೆ ಪೂರಕವಾಗುತ್ತದೆ. ಕೆಲವು ದಿನಗಳಿಂದ ನಿರಂತರ ಮಳೆಯ ಅನಂತರ ಇದೀಗ ಬಿಸಿಲು ಕಾಣಿಸಿಕೊಂಡಿದು. ನಡುವೆ ಬಿಟ್ಟು ಮಳೆಯಾಗುತ್ತಿದೆ. ಈ ವಾತಾವರಣ ಸೊಳ್ಳೆಗಳ ಉತ್ಪತ್ತಿಗೆ ಪೂರಕವಾಗಿದ್ದು ನಿಯಂತ್ರಣಕ್ಕೆ ಪ್ರತಿಕೂಲವಾಗಿದೆ. ಇದೇ ಸ್ಥಿತಿ ಮುಂದುವರಿದರೆ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಮತ್ತೆ ಹೆಚ್ಚುವ ಸಾಧ್ಯತೆಗಳಿವೆ. ಆದುದರಿಂದ ಸಾರ್ವಜನಿಕರು ಮತ್ತು ಇಲಾಖೆಗಳು ಎಚ್ಚರ ವಹಿಸುವುದು ಅಗತ್ಯ. ನೀರು ನಿಂತಿದ್ದರೆ ಅವುಗಳನ್ನು ತೆರವುಗೊಳಿಸಬೇಕು. ನೀರಿನ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿಡಬೇಕು.

ಮಳೆ-ಬಿಸಿಲು; ಎಚ್ಚರಿಕೆ ಇನ್ನೂ ಅಗತ್ಯ

ಡೆಂಗ್ಯೂ, ಮಲೇರಿಯಾ ರೋಗ ಹರಡುವುದರಲ್ಲಿ ಹವಾಮಾನ ವೈಪರೀತ್ಯದ ಪಾಲೂ ಇದೆ. ಬಿಟ್ಟು ಬಿಟ್ಟು ಮಳೆ ಹಾಗೂ ಬಿಸಿಲು ವಾತಾವರಣ ಸೊಳ್ಳೆಗಳ ಉತ್ಪತ್ತಿಗೆ ಪೂರಕವಾಗುತ್ತದೆ. ಕೆಲವು ದಿನಗಳಿಂದ ನಿರಂತರ ಮಳೆಯ ಅನಂತರ ಇದೀಗ ಬಿಸಿಲು ಕಾಣಿಸಿಕೊಂಡಿದು. ನಡುವೆ ಬಿಟ್ಟು ಮಳೆಯಾಗುತ್ತಿದೆ. ಈ ವಾತಾವರಣ ಸೊಳ್ಳೆಗಳ ಉತ್ಪತ್ತಿಗೆ ಪೂರಕವಾಗಿದ್ದು ನಿಯಂತ್ರಣಕ್ಕೆ ಪ್ರತಿಕೂಲವಾಗಿದೆ. ಇದೇ ಸ್ಥಿತಿ ಮುಂದುವರಿದರೆ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಮತ್ತೆ ಹೆಚ್ಚುವ ಸಾಧ್ಯತೆಗಳಿವೆ. ಆದುದರಿಂದ ಸಾರ್ವಜನಿಕರು ಮತ್ತು ಇಲಾಖೆಗಳು ಎಚ್ಚರ ವಹಿಸುವುದು ಅಗತ್ಯ. ನೀರು ನಿಂತಿದ್ದರೆ ಅವುಗಳನ್ನು ತೆರವುಗೊಳಿಸಬೇಕು. ನೀರಿನ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿಡಬೇಕು.

ಜಾಗೃತಿ ಕಾರ್ಯ ಮುಂದುವರಿಕೆ

ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಸ್ತುತ ನಿಯಂತ್ರಣದಲ್ಲಿದೆ. ಆದರೂ ಪಾಲಿಕೆ ವತಿಯಿಂದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅರಿವು ಮೂಡಿಸುವ ನೆಲೆಯಲ್ಲಿ ಜಾಗೃತಿ ಕ್ರಮಗಳು ಮುಂದುವರಿಯಲಿವೆ. ಜನರು ಕೂಡ ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು. ಉದಯವಾಣಿ ಅಭಿಯಾನದಲ್ಲಿ ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಪರಿಶೀಲಿಸಿ ಪರಿಹಾರ ಕ್ರಮಗಳನ್ನು ಪಾಲಿಕೆಯ ಸಿಬಂದಿ ಮಾಡುತ್ತಿದ್ದಾರೆ. ಸುದಿನದ ಈ ಮಾದರಿಯ ಅಭಿಯಾನವು ಶ್ಲಾಘನೀಯ.
– ಮಹಮ್ಮದ್‌ ನಝೀರ್‌, ಆಯುಕ್ತರು- ಮನಪಾ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.