‘ಕಾಂಗ್ರೆಸಿಗರಿಗೆ ಪ್ರವೇಶವಿಲ್ಲ’ ಫಲಕ: ಇಲಾಖೆ ತನಿಖೆ


Team Udayavani, Apr 25, 2018, 8:10 AM IST

Falaka-24-4.jpg

ವಿಟ್ಲ: ಕನ್ಯಾನ ಗ್ರಾಮದಲ್ಲಿ ಹಿಂದೂಗಳ ಮನೆಯಲ್ಲಿ ಕಾಂಗ್ರೆಸಿಗರಿಗೆ ಪ್ರವೇಶವಿಲ್ಲ ಎಂದು ಹಾಕಿದ ಫಲಕದ ಬಗ್ಗೆ ವಾಟ್ಸ್ಯಾಪ್‌ ವೈರಲ್‌ ಆದ ವಿಚಾರವಾಗಿ ಸೋಮವಾರ ಫ್ಲೈಯಿಂಗ್‌ ಸ್ಕ್ವಾಡ್‌ ಹಾಗೂ ವಿಟ್ಲ ಪೊಲೀಸರ ತಂಡ ಮನೆ ಮನೆ ಭೇಟಿ ನೀಡಿ ತನಿಖೆ ನಡೆಸಿತು. ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಲ್ಲಿ ಈ ಫಲಕದ ವಿಚಾರ ಬಿಸಿಬಿಸಿಯಾಗಿ ಕಾವೇರುತ್ತಿದ್ದಂತೆ ಇಲಾಖೆಗೆ ಒತ್ತಡ ಹೆಚ್ಚಿತೆನ್ನಲಾಗಿದೆ. ಇದು ವಾಸ್ತವವೇ ಅಥವಾ ಎಷ್ಟು ಮನೆಗಳಲ್ಲಿ ಇಂತಹ ಫಲಕ ಇದೆ ಎಂಬ ಅಧಿಕೃತ ಲೆಕ್ಕಾಚಾರವನ್ನು ಜಿಲ್ಲಾ ಚುನಾವಣಾ ಆಯೋಗ ಮಾಡಲೇಬೇಕಾಗಿತ್ತು ಮತ್ತು ಮನೆ ಮನೆಗೆ ತೆರಳಿ ಮಹಜರು ನಡೆಸುವ ಪ್ರಕ್ರಿಯೆ ಆರಂಭಿಸಬೇಕಾಯಿತು.

‘ಇದು ಹಿಂದೂ ಮನೆ. ಗಣ್ಯಶ್ರೀಯನ್ನು ಕಪಟ ಪ್ರೇಮದಿಂದ ಮತಾಂತರ ಮಾಡಲು ಬೆಂಬಲಿಸಿದ ಕಾಂಗ್ರೆಸಿಗರಿಗೆ ಇಲ್ಲಿ ಪ್ರವೇಶವಿಲ್ಲ..’ ನಮ್ಮ ಮನೆಯಲ್ಲೂ ಹೆಣ್ಣು ಮಕ್ಕಳಿದ್ದಾರೆ ಎಂದು ಬರೆದ ಫಲಕ ಮನೆಯಲ್ಲಿ ಅಧಿಕಾರಿಗಳಿಗೆ ದೊರೆತಿದ್ದು, ಮನೆ ಮಂದಿಯಿಂದ ಫಲಕ ಅಂಟಿಸಿದ ಬಗ್ಗೆ ಹೇಳಿಕೆ ಪಡೆದು ಮಹಜರು ನಡೆಸಿದ್ದಾರೆ. ಒತ್ತಡಕ್ಕೆ ಮಣಿದು ಫಲಕ ಹಾಕಿದ್ದೀರಾ? ಫಲಕ ತಂದುಕೊಟ್ಟವರು ಯಾರು? ಯಾವ ಉದ್ದೇಶದಿಂದ ಫಲಕ ಅಳವಡಿಸಲಾಗಿದೆ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಭಾಗಗಳಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಫಲಕಗಳನ್ನು ತೆರವು ಮಾಡಿದ್ದಾರೆನ್ನಲಾಗಿದೆ. ಮನೆಗಳ ಬಾಗಿಲಿಗೆ ಅಂಟಿಸಿದ ಕಾಗದವನ್ನು ತೆಗೆಸಿದ ಅಧಿಕಾರಿಗಳ ನಡೆ ಕೆಲವು ಹಿಂದೂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

ಒತ್ತಡ ಮುಕ್ತ ಚುನಾವಣೆಗೆ ಕ್ರಮ
ಸ್ವಾತಂತ್ರ್ಯವಿದೆ ಎಂದು ವೈಯಕ್ತಿಕ ನಿಂದನೆಗೆ ಅವಕಾಶವಿರುವುದಿಲ್ಲ. ಮರೆತು ಹೋದ ಪ್ರಕರಣವನ್ನು ಮತ್ತೆ ನೆನಪಿಸಿ, ನೊಂದ ಕುಟುಂಬದವರು ದುಃಖೀಸುವಂತಾಗಬಾರದು. ಪ್ರತಿ ಯೊಬ್ಬರಿಗೂ ಅವರದೇ ಆದ ಆಯ್ಕೆ ಇದ್ದು, ಮನೆಯ ಮುಂದೆ ಪ್ರದರ್ಶನಕ್ಕೆ ಅವಕಾಶವಿಲ್ಲ. ಬರುವುದು ಬೇಡವೆಂದು ಹೇಳಬಹುದು ಹೊರತು ಫಲಕ ಹಾಕಿ ಹೇಳುವ ಅವಕಾಶ ಕಾನೂನಿನಲ್ಲಿಲ್ಲ. ಮತದಾನ ಗೌಪ್ಯ ಪ್ರಕ್ರಿಯೆಯಾಗಿದ್ದು, ಯಾರ ಒತ್ತಡವೂ ಇರಬಾರದು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.