ನಿಧಿ ಆಸೆ!ಮಾಲಿಕನನ್ನು ಕಟ್ಟಿಹಾಕಿ ಅಗೆದು ಅಗೆದು ಬರಿಗೈಯಲ್ಲಿ ವಾಪಸ್!
Team Udayavani, Jan 24, 2017, 9:48 AM IST
ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪ್ಪಾಡಿ ಎಂಬಲ್ಲಿ ನಿಧಿ ಇದೆ ಎಂದು ಮನೆಯ ಮಾಲಿಕರೊಬ್ಬರನ್ನು ಕಟ್ಟಿ ಹಾಕಿದ ದರೋಡೆಕೋರರ ತಂಡ ನೆಲ ಅಗೆದು ಬರಿಗೈಯಲ್ಲಿ ವಾಪಾಸಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
9 ಮಂದಿಯ ತಂಡ ಕೃತ್ಯದಲ್ಲಿ ಭಾಗಿಯಾಗಿದ್ದು ವಿಘ್ನರಾಜ್ ಭಟ್ ಅವರ ಮನೆಗೆ ನುಗ್ಗಿ ಅವರನ್ನು ಕಟ್ಟಿ ಹಾಕಿ ಮನೆಯ ಗೇಟ್ ಬಳಿ ನೆಲವನ್ನು ಅಗೆದಿದ್ದಾರೆ. ಏನೂ ಸಿಗದೆ ಬರಿಗೈಯಲ್ಲಿ ವಾಪಾಸಾಗಿದ್ದಾರೆ. ಅಚ್ಚರಿಯೆಂದರೆ ವಿಘ್ನರಾಜ್ ಅವರ ಕೈಗಳನ್ನು ಕಟ್ಟಿದ್ದು ಬಿಟ್ಟರೆ ಬೇರೆ ಯಾವುದೇ ರೀತಿಯ ಹಾನಿ ಮಾಡುವುದಾಗಿ ಇತರ ಯಾವುದೇ ಸ್ವತ್ತುಗಳನ್ನು ಒಯ್ದಿಲ್ಲ.
ಪೊಲೀಸರಿಗೆ ದೂರು ನೀಡಲಾಗಿದ್ದು ಸ್ಥಳಕ್ಕೆ ಎಸ್ಪಿ ಭೂಷಣ್ ರಾವ್ ಬೋರಸೆ ಮತ್ತು ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಘ್ನರಾಜ್ ಅವರಲ್ಲಿ ಘಟನೆಯ ಬಗ್ಗೆ ವಿವರ ಪಡೆದಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ