ಅಕ್ರಮವಾಸಿಗಳ ಪತ್ತೆ, ಗಡೀಪಾರಿಗೆ ಕ್ರಮ: ಡಿಸಿಎಂ


Team Udayavani, Aug 11, 2018, 10:15 AM IST

parameshwar.jpg

ಮಂಗಳೂರು: ರಾಜ್ಯ ದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶೀಯರ ಪ‌ತ್ತೆ ಕಾರ್ಯಾಚರಣೆ ಚುರುಕುಗೊಳಿಸಲಾಗಿದ್ದು, 107 ಮಂದಿ ಆಫ್ರಿಕನ್ನರ ಗಡೀಪಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಎಂ ಡಾ| ಜಿ. ಪರಮೇಶ್ವರ್‌ ಹೇಳಿದ್ದಾರೆ. ನಗರದ ಸರ್ಕ್ಯೂಟ್  ಹೌಸ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿರುವವರ ವಾಪಸಾತಿ ನಡೆ ಯುತ್ತಿದೆ. ಅಧಿಕ ಬಾಂಗ್ಲಾ ದೇಶಿಗಳು ವಲಸೆ ಬಂದಿದ್ದಾರೆ ಎಂಬ ಮಾಹಿತಿ ಪರಿಶೀಲಿಸಲಾಗುತ್ತಿದೆ. ಅವಧಿ ಮುಗಿದ ಬಳಿಕ ಇಲ್ಲೇ ಇರುವ ವಿದೇಶೀಯರನ್ನು ಪತ್ತೆ ಹಚ್ಚಿ ವಾಪಸು ಕಳುಹಿಸುತ್ತೇವೆ. ಈ ಬಗ್ಗೆ ರಾಯಭಾರಿ ಕಚೇರಿಗಳಿಗೆ ಮಾಹಿತಿ ನೀಡಲಾಗಿದೆ. ರಾಜ್ಯ ಸರಕಾರವೇ ವಿಮಾನ ಯಾನ ವೆಚ್ಚ ಭರಿಸಿ ಕಳುಹಿಸಿ, ಬಳಿಕ ಆಯಾ ರಾಯಭಾರ ಕಚೇರಿಗಳಿಂದ ವಸೂಲಿ ಮಾಡಲಾಗುವುದು ಎಂದರು.

ಸೀರೆ ಬದಲು ಪ್ಯಾಂಟ್‌ 
ಮಹಿಳಾ ಪೊಲೀಸರಿಗೆ ಸೀರೆ ಧರಿಸಿ ಕರ್ತವ್ಯ ನಿರ್ವಹಿಸಲು ಕಷ್ಟವಾಗುತ್ತಿದೆ. ಇದರಲ್ಲಿ ಬದಲಾವಣೆ ತರಬೇಕೆಂಬ ಸಲಹೆ ಹಿನ್ನೆಲೆಯಲ್ಲಿ ಪ್ಯಾಂಟ್‌, ಶರ್ಟ್‌ ಸಮವಸ್ತ್ರದ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದರು. ಪೊಲೀಸರ ಭಡ್ತಿ, ವೇತನ, ಭತ್ತೆ ಸಂಬಂಧ ಔರಾದ್‌ಕರ್‌ ಸಮಿತಿ ಶಿಫಾರಸುಗಳ ಅನುಷ್ಠಾನ ಜಾರಿ ಯಲ್ಲಿದೆ. 12,000 ಬ್ಯಾಕ್‌ಲಾಗ್‌ ಹುದ್ದೆ ಭರ್ತಿಗೊಳಿಸಲಾಗಿದೆ. 2,200 ವೇತನ ಭತ್ತೆ ಶಿಫಾರಸು ಅನುಷ್ಠಾನಗೊಳಿಸಲಾಗಿದೆ. ವೇತನ ಪರಿಷ್ಕರಣೆ ಅಂಶವನ್ನು 6ನೇ ವೇತನ ಆಯೋಗಕ್ಕೆ ಶಿಫಾರಸು ಮಾಡಲಾಗುವುದು. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳ ಲಾಗುವುದು. ಗೌರಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟದಲ್ಲಿದೆ ಎಂದು ಗೃಹ ಸಚಿವರು ಉತ್ತರಿಸಿದರು.

ಶೀಘ್ರ ವರ್ಗಾವಣೆ ಪಟ್ಟಿ ಪ್ರಕಟ
ಚುನಾವಣೆಯಿಂದ ಪೊಲೀಸರ ವರ್ಗ ವಿಳಂಬವಾಗಿದೆ. ಚುನಾವಣಾ ಆಯೋಗದ ಅನುಮತಿ ಪಡೆದಿದ್ದು, ಒಂದೆರಡು ದಿನಗಳಲ್ಲಿ ಪೊಲೀಸರ ವರ್ಗಾವಣೆ ಪಟ್ಟಿ ಪ್ರಕಟಗೊಳ್ಳಲಿದೆ ಎಂದರು.

ಅತಿಥಿಗಳ ಊಟಕ್ಕೆ ಲೆಕ್ಕಾಚಾರ ಸರಿಯೇ? ಬಿಜೆಪಿಗೆ ಪರಂ ತಿರುಗೇಟು
ಸಮ್ಮಿಶ್ರ ಸರಕಾರದ ಪದಗ್ರಹಣದ ವೇಳೆ ಗಣ್ಯರ ಆತಿಥ್ಯದ ವೆಚ್ಚದ ಕುರಿತು ಬಿಜೆಪಿ ಟೀಕೆಗೆ ಡಾ| ಜಿ. ಪರಮೇಶ್ವರ್‌, “ಮನೆಗೆ ಬಂದ ಅತಿಥಿಗಳು ಊಟ ಮಾಡಿದ್ದನ್ನು ಲೆಕ್ಕ ಹಾಕುತ್ತಾರೆಯೇ?’ ಎಂಬ ಪ್ರಶ್ನೆಯ ತಿರುಗೇಟು ನೀಡಿದ್ದಾರೆ. ಅತಿಥಿಗಳ ಉಪಚಾರದ ಖರ್ಚನ್ನು ಬಿಜೆಪಿಯವರು ವಿವಾದ ಮಾಡುತ್ತಿ ದ್ದಾರೆ. ಇದು ಬಿಜೆಪಿಯವರ ಸಂಕುಚಿತ ಮನಃಸ್ಥಿತಿಯ ಪ್ರತಿಬಿಂಬ ಎಂದರು. 
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಏಕೆ ಆಯಿತು, ಕಾರಣಗಳೇನು ಎಂಬ  ಆತ್ಮವಿಮರ್ಶೆ ಮಾಡುತ್ತಿದ್ದೇವೆ. ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟು ಇದನ್ನು ನಡೆಸಲಾಗುತ್ತಿದೆ. ಲೋಪ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ. ನಗರ ಸœಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ಈಗಾಗಲೇ ಪಕ್ಷದ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ ಎಂದರು.  

ಬ್ಯಾಂಕ್‌ ಸಾಲ ಮನ್ನಾಕ್ಕೆ ಬದ್ಧ
ರೈತರ ರಾಷ್ಟ್ರೀಕೃತ ಬ್ಯಾಂಕ್‌ ಸಾಲ ಮನ್ನಾ ಘೋಷಣೆಗೂ ಸರಕಾರ ಬದ್ಧವಾಗಿದೆ, ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. 4 ವರ್ಷಗಳಲ್ಲಿ ಹಂತಹಂತವಾಗಿ ಅನುಷ್ಠಾನಗೊಳಿಸುತ್ತೇವೆ. ಕೇಂದ್ರವು ರಾಷ್ಟ್ರೀಕೃತ ಬ್ಯಾಂಕ್‌ ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡುತ್ತಿದ್ದರೆ ನಮ್ಮ ಹೊರೆ ಕಡಿಮೆ ಯಾಗುತ್ತಿತ್ತು. ಆದರೆ ಪ್ರಧಾನಿಗೆ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದು ಬೇಕಾಗಿಲ್ಲ ಎಂದರು. ಮಾಜಿ ಸಚಿವರಾದ ರಮಾನಾಥ ರೈ, ಪ್ರಮೋದ್‌ ಮಧ್ವರಾಜ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಶಾಸಕರಾದ ಜೆ.ಆರ್‌. ಲೋಬೊ, ವಿಜಯ ಕುಮಾರ್‌ ಶೆಟ್ಟಿ , ಮೇಯರ್‌ ಭಾಸ್ಕರ್‌ ಕೆ., ಇಬ್ರಾಹಿಂ, ಮುಖಂಡರಾದ ಜಿ.ಎ. ಬಾವಾ, ಯು.ಕೆ. ಮೋನು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಪತ್ರ ಬರೆಯುವುದರಲ್ಲಿ  ತಪ್ಪಿಲ್ಲ
ಸಿಎಂಗೆ ಸಿದ್ದು ಪತ್ರ ಕುರಿತು ಮಾತನಾಡಿದ ಡಾ| ಜಿ. ಪರಮೇಶ್ವರ್‌, ಸಿದ್ದರಾಮಯ್ಯ ಜವಾಬ್ದಾರಿಯುತ ನಾಯಕ. ಕೆಲವು ಮುಖ್ಯ ಅಂಶಗಳನ್ನು ಸರಕಾರಕ್ಕೆ ತಿಳಿಸುವುದರಲ್ಲಿ ತಪ್ಪಿಲ್ಲ. ಅದನ್ನು ದೊಡ್ಡ ವಿಷಯವಾಗಿ ಮಾಡಬೇಕಿಲ್ಲ ಎಂದರು.

ತನಿಖೆ ದೃಷ್ಟಿಯಿಂದ ತಡೆ
ಶೀರೂರು ಶ್ರೀಗಳ ಸಾವು ವಿಶೇಷ ಪ್ರಕರಣ ವಾಗಿದ್ದು, ತನಿಖಾ ಹಂತದಲ್ಲಿದೆ. ಶ್ರೀಗಳ ಆರಾಧನೆಗೆ ಪೊಲೀಸರು ಯಾಕೆ ಅನುಮತಿ ನೀಡಿಲ್ಲ ಎಂಬುದು ಗೊತ್ತಿಲ್ಲ. ತನಿಖೆ ಪ್ರಗತಿಯಲ್ಲಿರುವುದರಿಂದ ಸಾಕ್ಷ್ಯ ನಾಶವಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಡಾ| ಪರಮೇಶ್ವರ್‌ ಉತ್ತರಿಸಿದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.