ದರೋಡೆ ನಾಟಕವಾಡಿದ್ದ ಚಾಲಕನ ಬಂಧನ

ಗೋಳಿತ್ತೂಟ್ಟು ಲಾರಿ ದರೋಡೆ ಪ್ರಕರಣದ ರಹಸ್ಯ ಬಯಲು

Team Udayavani, Apr 4, 2019, 10:25 AM IST

upp

ಉಪ್ಪಿನಂಗಡಿ : ಕಳೆದ ತಿಂಗಳ 25ರಂದು ನಸುಕಿನ ವೇಳೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗೋಳಿತ್ತೂಟ್ಟಿನಲ್ಲಿ ಲಾರಿ ಚಾಲಕನನ್ನು ಕಟ್ಟಿಹಾಕಿ ದರೋಡೆ ಮಾಡಲಾಗಿತ್ತು ಎಂಬ ಪ್ರಕರಣದ ಹಿಂದಿನ ರಹಸ್ಯವನ್ನು ಪೊಲೀಸರು ಭೇದಿಸಿದ್ದು, ದೂರುದಾತನನ್ನೇ ಪೊಲೀಸರು ಬಂಧಿಸಿದ್ದಾರೆ. ಲಾರಿ ಚಾಲಕನೇ ದರೋಡೆ ನಾಟಕವಾಡಿದ್ದು, ಆತ ಮಾರಾಟ ಮಾಡಿದ್ದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣದ ವಿವರ
ಮಂಡ್ಯದ ಪಾಂಡವಪುರ ತಾಲೂಕಿನ ರಾಮೇಗೌಡರ ಪುತ್ರ ಅಂಬರೀಷ್‌ ಎಸ್‌. ಆರ್‌. (35) ತನ್ನ ಲಾರಿಯಲ್ಲಿ ಚಿಕ್ಕ ಬಳ್ಳಾಪುರದ ಹಿಂದೂಸ್ಥಾನ್‌ ಲಿವರ್‌ ಕಂಪೆನಿಯಿಂದ ಸಾಬೂನು, ಶ್ಯಾಂಪೋ, ಚಾ ಹಾಗೂ ಕಾಫಿ ಹುಡಿಗಳನ್ನು ಮಂಗಳೂರು ಕಡೆಗೆ ಸಾಗಿಸುತ್ತಿದ್ದ. ಚಿಕ್ಕಬಳ್ಳಾಪುರದಿಂದ ಮಂಡ್ಯ, ಶ್ರೀರಂಗಪಟ್ಟಣ, ಕೆ.ಆರ್‌. ಪೇಟೆ, ಚನ್ನರಾಯ ಪಟ್ಟಣ ಮೂಲಕ ಮಂಗಳೂರು ಕಡೆಗೆ ಬರುತ್ತಿದ್ದ ಈತ ಮಾ. 25ರಂದು ಸಂಜೆ 6.30ರ ಹೊತ್ತಿಗೆ ಹಾಸನ ತಲುಪಿದ್ದ. ರಾತ್ರಿ ಸಕಲೇಶಪುರ ಸಮೀಪದ ಮಾರನಹಳ್ಳಿಯಲ್ಲಿ ಊಟ ಮಾಡಿ ಪುತ್ತೂರು ಕಡೆಗೆ ಬರುತ್ತಿದ್ದ.

ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಗೋಳಿತ್ತೂಟ್ಟು ಗ್ರಾಮದ ಶಿರಡಿಗುಡ್ಡೆಯ ಏರುರಸ್ತೆಯಲ್ಲಿ ಸಾಗುತ್ತಿದ್ದಂತೆ ಹಿಂದಿನಿಂದ ಬಂದ ಇಂಡಿಕಾ ಕಾರಿನಲ್ಲಿದ್ದ ಇಬ್ಬರು ತನ್ನ ಮೇಲೆ ಹಲ್ಲೆ ನಡೆಸಿ, ಕಟ್ಟಿ ಹಾಕಿ ದರೋಡೆ ಮಾಡಿದ್ದರು ಎಂದು ಅಂಬರೀಷ್‌ ಪೊಲೀಸರಿಗೆ ದೂರು ನೀಡಿದ್ದ. ತನ್ನ ಪ್ಯಾಂಟಿನಲ್ಲಿದ್ದ 5,200 ರೂ. ಹಾಗೂ 2,000 ರೂ. ಮೌಲ್ಯದ ಮೊಬೈಲನ್ನು ದರೋಡೆ ಮಾಡಿದ್ದಾರೆ. ಅಲ್ಲದೆ ಲಾರಿಯಲ್ಲಿದ್ದ ಕೆಲವು ಬಾಕ್ಸ್‌ ಸಾಮಗ್ರಿಗಳನ್ನು ಕೊಂಡೊಯ್ದಿದ್ದಾರೆ ಎಂದು ನೀಡಿದ್ದ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಶೇಷ ತಂಡ ರಚನೆ
ಇದೊಂದು ಹೆದ್ದಾರಿ ದರೋಡೆ ಪ್ರಕರಣವಾಗಿದ್ದರಿಂದ ತನಿಖೆ ಕೈಗೊಂಡ ಪೊಲೀಸರು, ಪ್ರೊಬೆಷನರಿ ಎಎಸ್‌ಪಿ ಪ್ರದೀಪ್‌ ಗುಂಟಿ ಐಪಿಎಸ್‌, ಉಪ್ಪಿನಂಗಡಿ ಎಸ್‌ಐ ನಂದ  ಕುಮಾರ್‌, ಪ್ರೊಬೆಷನರಿ ಎಸ್‌ಐ ಪವನ್‌ ಕುಮಾರ್‌ ಹಾಗೂ ಪುತ್ತೂರು ಗ್ರಾಮಾಂತರ ಸಿಐಡಿ. ಮಂಜುನಾಥ್‌ ನೇತೃತ್ವದ ವಿಶೇಷ ತಂಡ ರಚಿಸಿದ್ದರು.

ದೂರಿನಲ್ಲಿ ಪೊಲೀಸರಿಗೆ ಸಂಶಯ ವ್ಯಕ್ತವಾಗಿದ್ದು, ಇದೊಂದು ಕಟ್ಟು ಕಥೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂತು. ಅಂಬರೀಷ್‌ ನನ್ನು ತೀವ್ರ ವಿಚಾರಣೆ ನಡೆಸಿದಾಗ ದರೋಡೆ ನಾಟಕವಾಡಿದ್ದನ್ನು ಒಪ್ಪಿಕೊಂಡ. ದರೋಡೆ ನಡೆದಿದೆ ಎಂದು ಹೇಳಲಾಗಿದ್ದ ಲಾರಿಯ ಮಾಲಕನೂ ಆಗಿದ್ದ ಅಂಬರೀಷ್‌ಗೆ ವಿಪರೀತ ಸಾಲವಿತ್ತು. ಸಾಲ ತೀರಿಸಲೆಂದು ಲಾರಿಯಲ್ಲಿದ್ದ ಸಾಮಗ್ರಿಗಳ ಪ್ಯಾಕೆಟ್‌ಗಳನ್ನು ಚನ್ನಪಟ್ಟಣದ ಅಂಗಡಿಗೆ ಮಾರಿದ್ದ. ಇದನ್ನು ಮರೆಮಾಚಲು ದರೋಡೆ ನಾಟಕವಾಡಿದ್ದನ್ನು ಪೊಲೀಸರ ಮುಂದೆ ಒಪ್ಪಿ ಕೊಂಡಿದ್ದಾನೆ.

ಅಂಬರೀಷ್‌ನನ್ನು ಬಂಧಿಸಿ, ಈತ ಲಾರಿಯಿಂದ ಕದ್ದು ಮಾರಾಟ ಮಾಡಿದ್ದ ಸಾಮಗ್ರಿಗಳನ್ನು ಚನ್ನಪಟ್ಟಣದಿಂದ ವಶಕ್ಕೆ ಪಡೆಯಲಾಯಿತು. ಈ ಸೊತ್ತುಗಳ ಒಟ್ಟು ಮೌಲ್ಯ 58,867 ರೂ. ಎಂದು ಅಂದಾಜಿಲಗಿದೆ. ಅಲ್ಲದೆ ಸೊತ್ತು ಮಾರಿ ಪಡೆದಿದ್ದ 51,500 ರೂ. ಅನ್ನು ಈತನಿಂದ ವಶ ಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.