ಅಧಿಕಾರಿಗಳ ಗೈರು ಖಂಡಿಸಿ ನಿರ್ಣಯ: ಗ್ರಾಮಸ್ಥರ ಆಗ್ರಹ


Team Udayavani, Jul 16, 2017, 3:10 AM IST

15kamath3.gif

ಕಿನ್ನಿಗೋಳಿ : ಗ್ರಾಮಸಭೆಗೆ ಕೃಷಿ, ತೋಟಗಾರಿಕೆ, ಪೊಲೀಸ್‌ ಸಹಿತ  ವಿವಿಧ ಇಲಾಖೆಯ ಅಧಿಕಾರಿಗಳ ಗೈರು,  ವಿದ್ಯುತ್‌ ಸಮಸ್ಯೆ, ಕೆಮ್ರಾಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರ ಕೊರ ತೆ, ಬಟ್ಟಕೋಟಿ ಕೆಮ್ರಾಲ್‌ ರಸ್ತೆ ದುರವಸ್ಥೆ, ಪಕ್ಷಿಕೆರೆ ಪೇಟೆಯಲ್ಲಿ ಚರಂಡಿ ಸಮಸ್ಯೆ ಮೊದಲಾದ ವಿಷಯಗಳ ಬಗ್ಗೆ  ಜು. 15ರಂದು ಜರಗಿದ  ಕೆಮ್ರಾಲ್‌ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳ ಗಮನ ಸೆಳೆದರು.  

ಗ್ರಾಮ ಪಂಚಾಯತ್‌ ಸಭಾಭವನದಲ್ಲಿ  ಪಂಚಾಯತ್‌ ಅಧ್ಯಕ್ಷ ನಾಗೇಶ್‌ ಎಂ. ಅಂಚನ್‌   ಅಧ್ಯಕ್ಷತೆಯಲ್ಲಿ  ಜರ ಗಿ ದ ಗ್ರಾಮ ಸಭೆಗೆ ವಿವಿಧ ಇಲಾಖೆಗಳ  ಸುಮಾರು 22  ಅಧಿಕಾರಿಗಳು  ಹಾಜ ರಾ ಗಬೇಕಿತ್ತು. ಆದರೆ ಕೇವಲ 6 ಇಲಾಖೆಯ ಅಧಿಕಾರಿಗಳು ಮಾತ್ರ ಹಾಜರಾಗಿದ್ದರಿಂದ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ  ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿಗಳಿಗೆ ಬರೆಯುವಂತೆ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ತಿಳಿಸಿದರು.

ರಸ್ತೆ, ಚರಂಡಿ ಸಮಸ್ಯೆ ಪರಿಹಾರವಾಗಿಲ್ಲ
ಕೆಮ್ರಾಲ್‌ ಪೇಟೆಯ ರಿಕ್ಷಾ ಪಾರ್ಕ್‌ ಸಮೀ ಪ ಚರಂಡಿ ಹಾಗೂ ಮೋರಿ ಬ್ಲಾಕ್‌ ಆಗಿ ಕೆಸರು ನೀರು, ಪ್ಲಾಸ್ಟಿಕ್‌ ತ್ಯಾಜ್ಯ ರಸ್ತೆಯಲ್ಲಿ ಹರಿಯುತ್ತಿದ್ದು, ಎರಡು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಹೊಸಕಾಡು ರಸ್ತೆ ಹಾಗೂ ಕೆಮ್ರಾಲ್‌ ಚರ್ಚ್‌ ಶಾಲೆಯ ರಸ್ತೆ   ಸಂಪೂರ್ಣ ಹದಗೆಟ್ಟಿದ್ದು, ಅದನ್ನು  ದುರಸ್ತಿ ಮಾಡಬೇಕು ಎಂದು ರಾಬರ್ಟ್‌ ಡಿ’ ಸೋಜಾ  ಆಗ್ರಹಿಸಿದರು. 

ಪಕ್ಷಿಕೆರೆ ಪೇಟೆಯ ಖಾಸಗಿ  ಜಾಗದಲ್ಲಿ ಚರಂಡಿ ಬ್ಲಾಕ್‌ ಮಾಡಿರುವ ಬಗ್ಗೆ ನೋಟಿಸ್‌ ನೀಡಲಾಗಿದೆ ಎಂದು ಪಿಡಿಒ ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಸದಸ್ಯೆ ಕಸ್ತೂರಿ ಪಂಜ, ತತ್‌ಕ್ಷಣ ಮೋರಿಯನ್ನು ದುರಸ್ತಿ ಮಾಡಿಸಬೇಕು. ರಸ್ತೆ  ದುರಸ್ತಿಗಾಗಿ  ತನ್ನ ಅನುದಾನದಲ್ಲಿ  1 ಲ. ರೂ. ನೀಡಲಾಗುವುದು ಎಂದು ಭರವಸೆ ನೀಡಿದರು.

ಆರೋಗ್ಯ ಕೇಂದ್ರಕ್ಕೆ ವೈದ್ಯರಿಲ್ಲ
ಕೆಮ್ರಾಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ಖಾಯಂ ವೈದ್ಯರು ರಜೆಯಲ್ಲಿ ರುವುದರಿಂದ  ಕಟೀಲು ಕೇಂದ್ರದ ವೈದ್ಯರು ವಾರದಲ್ಲಿ ಮೂರು ದಿನ ಬರುತ್ತಿ ದ್ದಾರೆ. ಈ ಸಮಸ್ಯೆಯನ್ನು  ಕೂಡಲೇ ಸರಿ ಪಡಿಸಬೇಕು ಎಂದು ಗ್ರಾಮಸ್ಥ  ಹರೀಶ್‌ ಆಗ್ರಹಿಸಿದಾಗ, ಬೇರೆ ವೈದ್ಯರನ್ನು ನೇಮಕ ಮಾಡುವಂತೆ ಜಿ.ಪಂ.ಗೆ ಮನವಿ ಮಾಡಲಾಗುವುದು ಎಂದು ಅಧ್ಯಕ್ಷ  ನಾಗೇಶ್‌ ಅಂಚನ್‌ ತಿಳಿಸಿದರು.

ಕೋರªಬ್ಬು ದೈವಸ್ಥಾನ ಬಳಿಯಲ್ಲಿ ಕಾಂಕ್ರೀಟ್‌ ರಸ್ತೆ ಅಂಚಿಗೆ ಸರಿಯಾಗಿ ಮಣ್ಣು  ತುಂಬಿಸದೆ  ಸಮಸ್ಯೆಯಾಗಿದೆ ಎಂದು ದಯಾನಂದ ದೂರಿದರು. 

ಕೆಮ್ರಾಲ್‌ ಅಂಗನವಾಡಿ ಕೇಂದ್ರ ಸಮಾ ಜ  ಕಂಟ ಕರ ಅಡ್ಡೆಯಾಗಿದೆ ಎಂಬ ದೂರು ಕೇಳಿ ಬಂತು.ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಟಿ. ಜಯಚಂದ್ರಯ್ಯ ನೋಡಲ್‌ ಅಧಿಕಾರಿಯಾಗಿದ್ದರು. ತಾ.ಪಂ. ಸದಸ್ಯರಾದ ವಜ್ರಾಕ್ಷಿ  ಶೆಟ್ಟಿ , ಶುಭಲತಾ ಶೆಟ್ಟಿ, ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ತುಳಸಿ ಶೆಟ್ಟಿಗಾರ್‌, ಸಮಾಜ ಕಲ್ಯಾಣ ಇಲಾಖೆಯ ಅಶ್ವಿ‌ನಿ, ಮೆಸ್ಕಾಂ ಇಲಾಖೆಯ ಶ್ರೀನಿವಾಸ ಮೂರ್ತಿ, ದಾಮೋದರ್‌, ಕಂದಾಯ ಇಲಾಖೆ ಸಂತೋಷ್‌, ಪಂಚಾಯತ್‌ ರಾಜ್ಯ ಇಲಾಖೆಯ ಹರೀಶ್‌ರಾಜ್‌, ಆರೋಗ್ಯ ಇಲಾಖೆಯ ಚಂದ್ರ ಪ್ರಭಾ ಸಹಿತ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.  ಪಿಡಿಒ ರಮೇಶ್‌ ರಾಥೋಡ್‌ ವಂದಿಸಿದರು.

ಭಟ್ರಕೋಡಿ 
ರಸ್ತೆಯಲ್ಲಿ ನೀರು

ಭಟ್ರಕೋಡಿ ನಡುಗೋಡು ಸಂಪರ್ಕ ರಸ್ತೆಯಲ್ಲಿ ಮಳೆಗಾಲದಲ್ಲಿ  ನೀರು ಸರಾಗವಾಗಿ ಹರಿದು ಹೋಗದಂತೆ ಖಾಸಗಿಯವರು ತಡೆಯೊಡ್ಡಿದ್ದಾರೆ. ರಸ್ತೆಯಲ್ಲಿ ದೊಡ್ಡ ಹೊಂಡಗಳು ಎದ್ದಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ.  ಐದು ವರ್ಷಗಳಿಂದ ಈ ಸಮಸ್ಯೆ ಇದ್ದರೂ  ಪಂಚಾಯತ್‌ ಯಾಕೆ ಮೌನ ವಹಿಸುತ್ತಿದೆ ಎಂದು ನಿತಿನ್‌ ವಾಸ್‌ ಪ್ರಶ್ನಿಸಿದಾಗ, ಈ ಬಗ್ಗೆ  ವಾರ್ಡ್‌ ಸದಸ್ಯರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕಾಗಿದೆ ಎಂದು  ಕಸ್ತೂರಿ ಪಂಜ ತಿಳಿಸಿದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.