ಮಂಗಳೂರಿನ ಆರು ಪಾರ್ಕ್‌ಗಳ ಅಭಿವೃದ್ಧಿಗೆ ಮುಂದಾದ ಪಾಲಿಕೆ

ಸಾರ್ವಜನಿಕರ ವಾಯು ವಿಹಾರಕ್ಕೆ ಅನುಕೂಲ ಒದಗಿಸುವ ಉದ್ದೇಶ: 1.56 ಕೋಟಿ ರೂ. ವೆಚ್ಚದ ಕಾಮಗಾರಿ

Team Udayavani, Jan 4, 2021, 12:56 PM IST

ಮಂಗಳೂರಿನ ಆರು ಪಾರ್ಕ್‌ಗಳ ಅಭಿವೃದ್ಧಿಗೆ ಮುಂದಾದ ಪಾಲಿಕೆ

ಮಹಾನಗರ, ಜ. 3: ಮಂಗಳೂರು ನಗರದ ಸೌಂದರ್ಯದ ಜತೆಗೆ ಸಾರ್ವ ಜನಿಕರಿಗೆ ವಾಯು ವಿಹಾರಕ್ಕೆ ಅನುಕೂಲ ವಾಗಲಿ ಎಂಬ ಉದ್ದೇಶದಿಂದ 1.56 ಕೋಟಿ ರೂ. ವೆಚ್ಚದಲ್ಲಿ ನಗರದ 6 ಪಾರ್ಕ್‌ ಗಳನ್ನು ಅಭಿವೃದ್ಧಿಪಡಿಸಲು ಮಹಾನಗರ ಪಾಲಿಕೆ ಮುಂದಾಗಿದೆ.

ಮಂಗಳೂರು ಮಹಾನಗರ ಪಾಲಿಕೆಗೆ ರಾಜ್ಯ ಸರಕಾರದ 2020-21ನೇ 15ನೇ ಹಣಕಾಸು ಯೋಜನೆಯಡಿ ಸಾಮಾನ್ಯ ಸಹಾಯ ಧನವಾಗಿ 23 ಕೋಟಿ ರೂ. ಬಿಡು ಗಡೆಯಾಗಿದ್ದು, ಇದರಲ್ಲಿ 1.56 ಕೋಟಿ ರೂ.ವನ್ನು ಪಾರ್ಕ್‌ ಅಭಿವೃದ್ಧಿಗೆ ಮೀಸಲಿಡಲು ನಿರ್ಧರಿಸಲಾಗಿದೆ. ಇದಕ್ಕೆಂದು ಈಗಾಗಲೇ ಅಂದಾಜು ವೆಚ್ಚ ತಯಾರು ಮಾಡಲಾಗಿದೆ.

ನಗರದ ಬಂಗ್ರಕೂಳೂರು ವಾರ್ಡ್‌ ಪಾರ್ಕ್‌, ಕಂಬ್ಳ ವಾರ್ಡ್‌ನ ಭಗವತಿ ದೇವಸ್ಥಾನ ಬಳಿಯ ಪಾರ್ಕ್‌, ಮಂಗಳಾ ದೇವಿ ವಾರ್ಡ್‌ನ ಮಂಗಳಾನಗರ ಮತ್ತು ಜೆಪ್ಪು ಪಾರ್ಕ್‌, ಪದವು ಪಶ್ಚಿಮ ವಾರ್ಡ್‌ ಪಾರ್ಕ್‌, ಕದ್ರಿ ಉತ್ತರ ವಾರ್ಡ್‌ ಪಾರ್ಕ್‌, ಮಣ್ಣಗುಡ್ಡೆ ವಾರ್ಡ್‌ನ ಮೇಯರ್‌ ಬಂಗ್ಲೆ ಬಳಿ ಪಾರ್ಕ್‌ ಅಭಿವೃದ್ಧಿ ಕಾಮಗಾರಿಯನ್ನು ಮನಪಾ ಕೈಗೆತ್ತಿಕೊಂಡಿದೆ.

ವಿಪಕ್ಷದಿಂದ ಅಪಸ್ವರ :

ಮಹಾನಗರ ಪಾಲಿಕೆ ವತಿಯಿಂದ ಪಾರ್ಕ್‌ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮನಪಾ ವಿರೋಧ ಪಕ್ಷದ ಸದಸ್ಯರಿಂದ ಅಪಸ್ವರ ಕೇಳಿಬಂದಿದೆ. ಮನಪಾ ಮಾಜಿ ಮೇಯರ್‌ ಭಾಸ್ಕರ್‌ ಕೆ. ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಅನುದಾನ ಬಿಡುಗಡೆಯಲ್ಲಿ ಮನಪಾ ತಾರತಮ್ಯ ಮಾಡಿದೆ. ಬಿಜೆಪಿ ಸದಸ್ಯರ ವಾರ್ಡ್‌ಗಳ ಪಾರ್ಕ್‌ ಅಭಿವೃದ್ಧಿಗೆ ಮಾತ್ರ ಹಣ ಬಿಡುಗಡೆ ಮಾಡಿದ್ದು.  ವಿಪಕ್ಷ ಸದಸ್ಯರ ವಾರ್ಡ್‌ಗಳ ಪಾರ್ಕ್‌ ಅಭಿವೃದ್ಧಿಗೆ ಹಣ ಮೀಸಲಿಟ್ಟಿಲ್ಲ. ಈ ರೀತಿಯ ತಾರತಮ್ಯ ಸರಿಯಲ್ಲ’ ಎಂದು ಹೇಳಿದ್ದಾರೆ.

ಪಾರ್ಕ್‌ ಅಭಿವೃದ್ಧಿಗೆ ಯೋಜನೆ :

ಪಾಲಿಕೆ ಅಭಿವೃದ್ಧಿಪಡಿಸಲು ಗುರುತಿಸಿದ ಕೆಲವೊಂದು ಪಾರ್ಕ್‌ ಈಗಾಗಲೇ ಪಾಳು ಬಿದ್ದಿದೆ. ಇನ್ನೂ ಕೆಲವು ಕಡೆಗಳಲ್ಲಿ ಪಾರ್ಕ್‌ ಕಾಮಗಾರಿ ಅರ್ಧಂಬರ್ಧ ನಡೆದಿದೆ. ಇದರಿಂದಾಗಿ ಸಾರ್ವಜನಿಕರ ಸಮರ್ಪಕ ಬಳಕೆಗೆ ಅನಾನುಕೂಲವಾಗುತ್ತಿತ್ತು. ಭಗವತಿ ದೇಗುಲದ ಬಳಿಯ ಪಾರ್ಕ್‌ ಪಾಳೂ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಮಕ್ಕಳ ಆಟಕ್ಕೆ ಜಾರು ಬಂಡಿ, ವಾಕಿಂಗ್‌ ಟ್ರಾಕ್‌ ನಿರ್ಮಾಣವಾಗಲಿದೆ. ಅದೇ ರೀತಿ ಕೋಡಿಕಲ್‌ ಬಳಿಯ ಕಲ್ಲಕಂಡದಲ್ಲಿರುವ ಬೃಹತ್‌ ಪಾರ್ಕ್‌ ಅಭಿವೃದ್ಧಿಗೆ ಈ ಹಿಂದೆ ಸುಮಾರು 70 ಲಕ್ಷ ರೂ. ಬಿಡುಗಡೆಗೊಂಡಿದ್ದರೂ ಅಭಿವೃದ್ಧಿಹೊಂದಿಲ್ಲ. ಇದೀಗ 63 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಸದ್ಯದಲ್ಲೇ ಡಿಪಿಆರ್‌ ಆಗಲಿದೆ. ಅದೇ ರೀತಿ ಪದವು ಪಶ್ಚಿಮ ವಾರ್ಡ್‌ನ ಪೊಲೀಸ್‌ ಕ್ವಾಟ್ರìಸ್‌ ಬಳಿಯ ಕೆಬಿಎಚ್‌ ಪಾರ್ಕ್‌ ಅಭಿವೃದ್ಧಿಯಾಗಲಿದ್ದು, ಆವರಣಗೋಡೆ, ವಾಕಿಂಗ್‌ ಟ್ರಾಕ್‌ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಅದೇರೀತಿ, ಉಳಿದ ಕಡೆಗಳಲ್ಲಿಯೂ ಪಾರ್ಕ್‌ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ.

 

ಪಾರ್ಕ್‌ಗಳ ಅಭಿವೃದ್ಧಿಗೆ ಯೋಜಿಸಲಾದ ಅನುದಾನ :

ಪಾರ್ಕ್‌ :                                        ಅಂದಾಜು ಮೊತ್ತ :

ಬಂಗ್ರಕೂಳೂರು ವಾರ್ಡ್‌                 63 ಲಕ್ಷ ರೂ.

ಕಂಬ್ಳ ವಾರ್ಡ್‌                               15 ಲಕ್ಷ ರೂ.

ಮಂಗಳಾನಗರ, ಜೆಪ್ಪು ಪಾರ್ಕ್‌        30 ಲಕ್ಷರೂ.

ಪದವು (ಪಶ್ಚಿಮ) ವಾರ್ಡ್‌              18 ಲಕ್ಷ ರೂ.

ಕದ್ರಿ (ಉತ್ತರ) ವಾರ್ಡ್‌                  10.30 ಲಕ್ಷ ರೂ.

ಮೇಯರ್‌ ಬಂಗ್ಲೆ ಬಳಿ ಪಾರ್ಕ್‌          20 ಲಕ್ಷರೂ.

ಒಟ್ಟು    1,56,30,000 ಕೋಟಿ

 

ನಗರದಲ್ಲಿ ಉದ್ಯಾನವನ ಮತ್ತು ಹಸುರು ಜಾಗ ಅಭಿವೃದ್ಧಿಗೆ ಮಹಾನಗರ ಪಾಲಿಕೆ ಪ್ರಾಶಸ್ತÂ ನೀಡುತ್ತಿದೆ. ನಗರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಅದರಂತೆಯೇ ಹಸುರು ಉಳಿಸುವ ಕಾರ್ಯ ಕೂಡ ಸಾಗಬೇಕು. ಈ ಉದ್ದೇಶದಿಂದ ಮೊದಲ ಹಂತದಲ್ಲಿ ಪಾರ್ಕ್‌ ಅಭಿವೃದ್ಧಿ ಮಾಡುತ್ತಿದ್ದೇವೆ. ಅಭಿವೃದ್ಧಿಯ ಜತೆಗೆ ನಿರ್ವಹಣೆ ಕಡೆಗೂ ಗಮನ ನೀಡಲಾಗುತ್ತದೆ. -ಅಕ್ಷಯ್‌ ಶ್ರೀಧರ್‌,ಮನಪಾ ಆಯುಕ್ತ

 

 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.