ಸುಬ್ರಹ್ಮಣ್ಯ, ಧರ್ಮಸ್ಥಳ ಪುಣ್ಯ ಕ್ಷೇತ್ರಗಳಲ್ಲಿ ಭಕ್ತರ ದಟ್ಟಣೆ
Team Udayavani, Nov 30, 2020, 9:12 AM IST
ಸುಬ್ರಹ್ಮಣ್ಯ/ಬೆಳ್ತಂಗಡಿ, ನ. 29: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಜಾ ದಿನವಾದ ಶನಿವಾರ ಹಾಗೂ ರವಿವಾರ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ.
ದೂರದೂರುಗಳ ಭಕ್ತರು ಅಧಿಕ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿ, ಸೇವೆಗಳನ್ನು ನೆರವೇರಿಸಿ ಶ್ರೀ ದೇವರ ದರುಶನ ಪಡೆದುಕೊಂಡರು.
ಚಂಪಾ ಷಷ್ಠಿಗೆ ಸಿದ್ಧತೆ :
ಇನ್ನು ಕೆಲವು ದಿನಗಳಲ್ಲಿಯೇ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಜಾತ್ರೆ ಆರಂಭವಾಗಲಿದ್ದು, ಕ್ಷೇತ್ರದಲ್ಲಿ ಪೂರ್ವ ತಯಾರಿಗಳ ಸಿದ್ಧತಾ ಕೆಲಸಗಳು ಭರದಿಂದ ನಡೆಯುತ್ತಿವೆ.
ತಾಂಬೂಲ ಪ್ರಶ್ನೆ :
ದೇವಸ್ಥಾನದಿಂದ ಪ್ರತಿವರ್ಷ ಪುರುಷರಾಯ ಬೆಟ್ಟದಲ್ಲಿ ನೆರವೇರಿಸಿಕೊಂಡು ಬರುತ್ತಿದ್ದ ದೈವಗಳ ನಡಾವಳಿ, ದೇಗುಲದ ತೋಟಗಳಲ್ಲಿ ಇರುವ ದೈವಗಳ ಗುಡಿಗಳಲ್ಲಿ ನೇಮ, ದೇವರಗದ್ದೆ ಹೊಸಳಿಗಮ್ಮ ದೈವದ ಗುಡಿಯ ಕುರಿಮುದ್ರೆ ಕಾರ್ಯಕ್ರಮ 2020-21ನೇ ಸಾಲಿನಲ್ಲಿ ನಡೆಯದೇ ಇರುವ ಸಂಬಂಧ ಕ್ಷೇತ್ರದಲ್ಲಿ ರವಿವಾರ ತಾಂಬೂಲ ಪ್ರಶ್ನೆ ಚಿಂತನೆ ನಡೆಯಿತು. ದೈವಜ್ಞರಾದ ಶಶಿಕುಮಾರ್ ಪಂಡಿತ್ ತಾಂಬೂಲ ಪ್ರಶ್ನೆ ನಡೆಸಿಕೊಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ :
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರವಿವಾರ ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ 26,000 ಭಕ್ತರು ಆಗಮಿಸಿದ್ದರು. ಸೋಮವಾರ ವಿಶೇಷ ದಿನವಾದ್ದರಿಂದ ಕ್ಷೇತ್ರಕ್ಕೆ ಇನ್ನಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ