ಭಕ್ತಿ ಭಾವವು ಏಕತೆಯಿಂದ ಕೂಡಿರಲಿ: ಚಾರುಕೀರ್ತಿ ಸ್ವಾಮೀಜಿ
ಬೈಲಂಗಡಿ ಬಸದಿಯ ಸಂಪ್ರೋಕ್ಷಣೆಗೆ ಚಾಲನೆ
Team Udayavani, May 9, 2019, 6:02 AM IST
ಪಡುಪಣಂಬೂರು: ಭಕ್ತಿ ಭಾವನೆಯು ಏಕ ತೆೆಯಿಂದ ಕೂಡಿದಲ್ಲಿ, ಧಾರ್ಮಿಕ ಪ್ರಜ್ಞೆ ಜಾಗೃತವಾಗುತ್ತದೆ. ಭಕ್ತಿಯ ಆರಾಧನೆಯ ಕೇಂದ್ರಗಳು ಮನಸ್ಸಿನ ಭಾವನೆಗಳನ್ನು ಅರಳಿಸುವ, ಆಲಿಸುವ ಕೇಂದ್ರಗಳಾಗಬೇಕು ಎಂದು ಮೂಡುಬಿದಿರೆಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.
ಪಡುಪಣಂಬೂರು ಬೈಲಂಗಡಿ ಶ್ರೀ ಚಂದ್ರನಾಥ ಸ್ವಾಮೀ ಬಸದಿಯಲ್ಲಿ ಮೇ 8ರಂದು ಆರಂಭಗೊಂಡ ಧಾಮ ಸಂಪ್ರೋಕ್ಷಣೆ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಕ್ಕೆ ಚಾಲನೆ ನೀಡಿ ಅವರು ಆಶೀರ್ವಚಿಸಿದರು.
ಬೆಳಗ್ಗೆ ತೋರಣ ಮುಹೂರ್ತ, ವಿಮಾನ ಶುದ್ಧಿ, ಮುಖವಸ್ತ್ರ ಉದ್ಘಾಟನೆ, ನಾಂದಿ ಮಂಗಲ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ, ದಿಕಾಲಕ ಬಲಿ ಶ್ರೀ ಚಂದ್ರನಾಥ ಸ್ವಾಮಿಗೆ ಕಲಶಾಭಿಷೇಕ ಜರಗಿತು.
ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಂ. ದುಗ್ಗಣ್ಣ ಸಾವಂ ತರು, ಸಮಿತಿಯ ಗೌರವಾಧ್ಯಕ್ಷ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಅಶೋಕ್ ರಾಜ್ ಎರ್ಮಾಳು ಬೀಡು, ಅರ್ಕುಳಬೀಡು ವಜ್ರನಾಭ ಶೆಟ್ಟಿ, ಕಾರ್ಯಾಧ್ಯಕ್ಷ ಪುಷ್ಪರಾಜ್ ಜೈನ್ ಮಂಗಳೂರು, ಪ್ರಸನ್ನ ಕುಮಾರ ಉಡುಪಿ, ಗೌರವ ಸಲಹೆಗಾರರ ಎಲ್. ಡಿ. ಬಲ್ಲಾಳ್, ಕೋಶಾಧಿಕಾರಿ ರತ್ನಾಕರ ಜೈನ್ ಮಂಗಳೂರು, ಕಾರ್ಯದರ್ಶಿ ಧನಂಜಯ್ಕುಮಾರ್ ಬೆಳ್ಳಾಯರು, ಸೇವಾಕರ್ತ ಮೂಲ್ಕಿ ಅರಮನೆಯ ಗೌತಮ್ ಜೈನ್, ಆಶಾಲತಾ, ವರ್ಷ, ಪವಿತ್ರೇಶ್, ರಕ್ಷಾ, ಶೀತಲ್, ನಿಶ್ಚಲ್ ಸಮಿತಿಯ ಸದಸ್ಯರು, ಪಡುಪಣಂಬೂರು ಜೈನ ಸಮಾಜ ಸೇವಾ ಸಂಘದ ಸದಸ್ಯರು, ಗ್ರಾಮದ ಶ್ರಾವಕ ಮತ್ತು ಶ್ರಾವಕಿಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…