ಧರ್ಮಸ್ಥಳ ಲಕ್ಷದೀಪೋತ್ಸವ: ಲಲಿತೋದ್ಯಾನ ಉತ್ಸವ

ಇಂದು ಸಾಹಿತ್ಯ ಸಮ್ಮೇಳನ

Team Udayavani, Nov 23, 2022, 9:59 AM IST

ಧರ್ಮಸ್ಥಳ ಲಕ್ಷದೀಪೋತ್ಸವ: ಲಲಿತೋದ್ಯಾನ ಉತ್ಸವ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಮೂರನೇ ದಿನದ ರಾತ್ರಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಭಗವಾನ್‌ ಶ್ರೀ ಮಂಜುನಾಥ ಸ್ವಾಮಿಗೆ ಲಲಿತೋದ್ಯಾನ ಉತ್ಸವ ಮತ್ತು ರಥೋತ್ಸವ ನೆರವೇರಿತು.

ಶ್ರೀ ಮಂಜುನಾಥ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿರಿಸಿ ಅಂಗಣದಲ್ಲಿ 16 ಸುತ್ತು ಪ್ರದಕ್ಷಿಣೆ, ಲಲಿತೋದ್ಯಾನಕ್ಕೆ ವಿಹಾರಕ್ಕೆ ಕರೆತಂದು ವಿಶೇಷ ಪೂಜೆ ಬಳಿಕ ರಥೋತ್ಸವದೊಂದಿಗೆ ಲಲಿತೋದ್ಯಾನ ಉತ್ಸವ ಪೂರ್ಣಗೊಂಡಿತು. ನ. 22ರಂದು ರಾತ್ರಿ ಕಂಚಿಮಾರುಕಟ್ಟೆ ಉತ್ಸವ ನೆರವೇರಿತು.

ಲಲಿತಕಲಾ ಗೋಷ್ಠಿ
ಅಮೃತವರ್ಷಿಣಿ ಸಭಾಭವನದಲ್ಲಿ ನ. 21ರಂದು ಸಂಜೆ ಲಲಿತಕಲಾಗೋಷ್ಠಿ ನಡೆಯಿತು. ನಾಗಸ್ವರವಾದನ, ಉಡುಪಿಯ ಭಾರ್ಗವಿ ಆರ್ಟ್ಸ್ ಮತ್ತು ಡ್ಯಾನ್ಸ್‌ ಅಕಾಡೆಮಿಯವರಿಂದ ಭಾವ-ಯೋಗ-ಗಾನ-ನೃತ್ಯ ಪ್ರದರ್ಶನ, ರಾತ್ರಿ ಹಾಸನದ ವಿದ್ವಾನ್‌ ಉನ್ನತ್‌ ಎಚ್‌.ಆರ್‌. ಮತ್ತು ತಂಡ ನಾಟ್ಯ ಕಲಾನಿವಾಸ್‌ ಅವರಿಂದ ಸ್ವಾತಿ ತಿರುನಾಳರ “ಭಾವಯಾಮಿ ರಘುರಾಮಂ’ ರಾಮಾಯಣ ಪ್ರಸ್ತುತಿ ನಡೆಯಿತು.

ನ. 24: ಸಮವಸರಣ ಪೂಜೆ
ನ. 24ರಂದು ಸಂಜೆ ಗಂಟೆ 6ರಿಂದ ನೆಲ್ಯಾಡಿ ಬೀಡು ಬಳಿಯ ಬಸದಿಯಲ್ಲಿ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ. ಮೂಡುಬಿದಿರೆಯ ಬೆಟೆRàರಿಯ ಲೇಖಕಿ ವೀಣಾ ರಘುಚಂದ್ರ ಶೆಟ್ಟಿ ಅವರಿಗೆ ಗೌರವ, ಪುಷ್ಪದಂತ ಭೂತಬಲಿ ವಿರಚಿತ ಸಿದ್ಧಾಂತ ಚಿಂತಾಮಣಿ ಕೃತಿಯ ಬಿಡುಗಡೆ ನಡೆಯಲಿದೆ. ಇದರೊಂದಿಗೆ ಐದು ದಿನಗಳ ಲಕ್ಷದೀಪೋತ್ಸವ ಸಂಪನ್ನಗೊಳ್ಳಲಿದೆ.

ಇಂದು ಸಾಹಿತ್ಯ ಸಮ್ಮೇಳನ
ನ. 23ಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಬೆಂಗಳೂರು ಉದ್ಘಾಟಿಸುವರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾಂಸ ವಿದ್ವಾನ್‌ ಡಾ| ಎಚ್‌.ವಿ. ನಾಗರಾಜ ರಾವ್‌ ಮೈಸೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತ್ಯ ಪರಿಚಾರಕ ಮತ್ತು ಸುಶಿಕ್ಷಣ ಸೇವಾಪರ ಸಂಸ್ಥೆಯ ಸ್ಥಾಪಕ ಬೆಂಗಳೂರು ಸತ್ಯೇಶ್‌ ಎನ್‌. ಬೆಳ್ಳೂರು, ಪತ್ರಕರ್ತ ರವೀಂದ್ರ ಭಟ್‌ ಐನಕೈ, ತುಮಕೂರು ಕನ್ನಡ ಸಹಾಯಕ ಪ್ರಾಧ್ಯಾಪಕ ಮತ್ತು ಲೇಖಕ ಡಾ| ಗೀತಾ ವಸಂತ ಉಪನ್ಯಾಸ ನೀಡಲಿದ್ದಾರೆ.

ಸಂಗೀತ ನೃತ್ಯ ವೈವಿಧ್ಯ
ಸಂಜೆ 5.30ರಿಂದ 6.30ರ ವರೆಗೆ ವಸ್ತುಪ್ರದರ್ಶನ ಮಂಟಪದಲ್ಲಿ ಮಡಿಕೇರಿಯ ಮೇಘಾ ಭಟ್‌ ಅವರಿಂದ ಶಾಸ್ತ್ರೀಯ ಸಂಗೀತ, 6.30ರಿಂದ 7.30ರ ವರೆಗೆ ಅಪೂರ್ವ ಅನಿರುದ್ಧ ಬೆಂಗಳೂರು ಅವರಿಂದ ವೀಣಾ ವಾದನ, 7.30ರಿಂದ 8.30ರ ವರೆಗೆ ವಿ. ರಜನಿ ಎಲ್‌. ಕರಿಗಾರ, ಕಾಣೆಬೆನ್ನೂರು ಅವರಿಂದ ಹಿಂದುಸ್ಥಾನಿ ಸಂಗೀತ, 8.30ರಿಂದ 10ರ ವರೆಗೆ ಪುತ್ತೂರು ನೃತ್ಯೋಪಸನಾ ಕಲಾಕೇಂದ್ರದ ವಿದುಷಿ ಶಾಲಿನಿ ಆತ್ಮಭೂಷಣ್‌ ಮತ್ತು ತಂಡದವರಿಂದ ಸಮೂಹ ನೃತ್ಯ, 10ರಿಂದ 11.30ರ ವರೆಗೆ ಭದ್ರಾವತಿಯ ಪ್ರೀತಮ್‌ ಮೆಲೋಡಿಯ ಶಂಕರ್‌ ಬಾಬು ಅವರಿಂದ ರಸಮಂಜರಿ ನಡೆಯಲಿದೆ. ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 8.30ರಿಂದ ಬಹು-ಗ್ರಾÂಮಿ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ, ಅರ್ಥ್ ಡೇ ನೆಟ್‌ವರ್ಕ್‌ ರಾಯಭಾರಿ ರಿಕಿ ಕೇಜ್‌ ಅವರಿಂದ ಸಂಗೀತ ನೃತ್ಯ ವೈವಿಧ್ಯ ಇರಲಿದೆ.

 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.