ಭಕ್ತ ಜನಸಾಗರವಾದ ಉಜಿರೆ-ಧರ್ಮಸ್ಥಳ ರಾಜಮಾರ್ಗ


Team Udayavani, Dec 3, 2018, 12:05 PM IST

3-december-6.gif

ಬೆಳ್ತಂಗಡಿ: ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸನ್ನಿಧಿಯ ಲಕ್ಷದೀಪೋತ್ಸವದ ಮೊದಲ ದಿನವಾದ ರವಿವಾರ ಭಕ್ತರಿಂದ ಉಜಿರೆ-ಧರ್ಮಸ್ಥಳ ದವರೆಗೆ ಬೃಹತ್‌ ಪಾದಯಾತ್ರೆ ನಡೆಯಿತು. ಪಾದಯಾತ್ರೆ ಸಮಿತಿಯು 6ನೇ ವರ್ಷದಲ್ಲಿ ಆಯೋಜಿಸಿದ ಪಾದಯಾತ್ರೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಹೊರಟು, ಸುಮಾರು 8 ಕಿ.ಮೀ. ದೂರದ ಧರ್ಮಸ್ಥಳಕ್ಕೆ 10 ಸಾವಿರಕ್ಕೂ ಅಧಿಕ ಭಕ್ತರು ಹೆಜ್ಜೆ ಹಾಕಿದರು. ಭಕ್ತರು ಭಜನೆ ಸಹಿತ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಗುಣಗಾನ ಮಾಡುತ್ತಾ ಸಾಗಿದರು.

ಭಕ್ತರ ಬಾಯಾರಿಕೆಯನ್ನು ತಣಿಸುವ ನಿಟ್ಟಿನಲ್ಲಿ ಅಲ್ಲಲ್ಲಿ ಪಾನೀಯದ ವ್ಯವಸ್ಥೆ ಮಾಡಲಾಗಿತ್ತು. ರಸ್ತೆಯುದ್ದಕ್ಕೂ ಸಾಗಿದ ಭಕ್ತಸಮೂಹ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ನೀಡದೆ ಅತ್ಯಂತ ಶಿಸ್ತಿನಿಂದ ಕ್ಷೇತ್ರವನ್ನು ತಲುಪಿತು.

ಪಾದಯಾತ್ರೆಗೆ ಚಾಲನೆ
ಉಜಿರೆ ದೇವಸ್ಥಾನದಲ್ಲಿ ಅಲ್ಲಿನ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ಅವರು ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಬಿ. ಯಶೋವರ್ಮ, ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಅವರ ಜತೆಗೂಡಿ ಪಾದಯಾತ್ರೆಗೆ ಚಾಲನೆ ನೀಡಿದರು. ಚಾಲನೆಯ ಸಂದರ್ಭ ಶ್ರೀಕ್ಷೇತ್ರ ಧ.ಗ್ರಾ. ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ….ಎಚ್‌. ಮಂಜುನಾಥ್‌, ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಎಪಿಎಂಸಿ ಅಧ್ಯಕ್ಷ ಕೇಶವ ಬೆಳಾಲು, ಜಿ.ಪಂ. ಸದಸ್ಯರಾದ ಧರಣೇಂದ್ರಕುಮಾರ್‌, ಸೌಮ್ಯಲತಾ, ಪ್ರಮುಖರಾದ ಪ್ರತಾಪಸಿಂಹ ನಾಯಕ್‌, ವಸಂತ ಸಾಲ್ಯಾನ್‌, ಪೀತಾಂಬರ ಹೇರಾಜೆ, ಇಚ್ಚಿಲ ಸುಂದರ ಗೌಡ, ರಾಜಶೇಖರ ಅಜ್ರಿ, ಜಯಂತ ಕೋಟ್ಯಾನ್‌, ಪಿ.ಕೆ. ರಾಜು ಪೂಜಾರಿ, ರಾಜೇಶ್‌ ಪೈ, ಮೋಹನ್‌, ಪ್ರಭಾಕರ ಗೌಡ, ಶರತ್‌ ಕೃಷ್ಣ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.

ಸ್ತಬ್ಧಚಿತ್ರ, ಸ್ವಾಮಿಯ ಭಾವಚಿತ್ರ
ಪಾದಯಾತ್ರೆಯಲ್ಲಿ ಭಕ್ತರ ಜತೆಗೆ ಶಿವನ ಮೂರ್ತಿಯನ್ನೊಳಗೊಂಡ ಸ್ತಬ್ಧಚಿತ್ರ, ಶ್ರೀ ಮಂಜುನಾಥ ಸ್ವಾಮಿಯ ಭಾವಚಿತ್ರಗಳು, ಡಾ| ಹೆಗ್ಗಡೆ ದಂಪತಿಯ ಭಾವಚಿತ್ರದ ವಾಹನಗಳು ಸಾಗಿದವು. ಪಾನೀಯ ಕುಡಿದು ಲೋಟವನ್ನು ಹಾಕುವುದಕ್ಕಾಗಿ ಸೂಕ್ತ ಬುಟ್ಟಿಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಪಾದಯಾತ್ರೆಯ ಸಂದರ್ಭದಲ್ಲಿ ಪಾದಯಾತ್ರಿಗಳಿಗೆ ತೊಂದರೆಯಾದಲ್ಲಿ ಆ್ಯಂಬುಲೆನ್ಸ್‌ ವ್ಯವಸ್ಥೆ, ವಾಹನ-ಭಕ್ತರ ನಿಯಂತ್ರಣಕ್ಕೆ ಪೊಲೀಸ್‌ ಭದ್ರತೆ, ಅಚ್ಚುಕಟ್ಟಿನ ಸ್ವಯಂಸೇವಕ ತಂಡಗಳನ್ನು ವ್ಯವಸ್ಥೆಗೊಳಿಸಲಾಗಿತ್ತು.

ಹೆಚ್ಚಿನ ಸಂಖ್ಯೆಯ ಭಕ್ತರು
ಲಕ್ಷದೀಪೋತ್ಸವದ ಮೊದಲ ದಿನವಾದ ರವಿವಾರ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಕ್ಷೇತ್ರವನ್ನು ಪೂರ್ತಿ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ಬೀದಿಗಳಲ್ಲಿ ಸಾಕಷ್ಟು ಸಂಖ್ಯೆಯ ಸಂತೆ-ಅಂಗಡಿ ಮುಂಗಟ್ಟುಗಳು ಕಂಡುಬಂದವು. ಜತೆಗೆ ಡಿ. 3ರಂದು ಕಾರ್ತಿಕ ಸೋಮವಾರ ಪುಣ್ಯದಿನವಾಗಿದ್ದು, ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಇಂದಿನ ಕಾರ್ಯಕ್ರಮ
ಧರ್ಮಸ್ಥಳ ಕ್ಷೇತ್ರದ ಲಕ್ಷದೀಪೋತ್ಸವದಲ್ಲಿ ಡಿ.3ರಂದು ಧಾರ್ಮಿಕ ಕಾರ್ಯಕ್ರಮದಲ್ಲಿ ರಾತ್ರಿ 9ಕ್ಕೆ ಕೆರೆಕಟ್ಟೆ ಉತ್ಸವ, ವಸ್ತುಪ್ರದರ್ಶನ ಮಂಟಪದಲ್ಲಿ ಸಂಜೆ 5.30ಕ್ಕೆ ಲಘು ಸಂಗೀತ, 7ಕ್ಕೆ ಭರತನಾಟ್ಯ-ನೃತ್ಯರೂಪಕ, 9ಕ್ಕೆ ತುಳುನಾಟಕ ‘ಇಂಚಲಾ ಉಂಡಾ’ ಪ್ರದರ್ಶನಗೊಳ್ಳಲಿದೆ. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.