ಧರ್ಮಸ್ಥಳ: ರಾಜ್ಯಾದ್ಯಂತ ಮುಷ್ಕರ, ಬಾಣಸಿಗರಾದ ಸಾರಿಗೆ ನೌಕರರು
Team Udayavani, Dec 12, 2020, 12:21 PM IST
ಬೆಳ್ತಂಗಡಿ: ಸಾರಿಗೆ ನೌಕರರನ್ನು ಸರಕಾರಿ ನೌಕರರಾಗಿ ಪರಿಗಣಿಸಬೇಕು ಎಂಬ ನೆಲೆಯಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡ ಮುಷ್ಕರದ ಹಿನ್ನೆಲೆ ಧರ್ಮಸ್ಥಳ ಡಿಪ್ಪೋದಿಂದ ಯಾವುದೇ ಬಸ್ ಓಡಾಟ ನಡೆಸದೆ ಮುಷ್ಕರವನ್ನು ಬೆಂಬಲಿಸಿದೆ.
ಪರಿಣಾಮ ಶನಿವಾರ ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ನಾನಾ ಕಡೆಯಿಂದ ಬಂದ ಭಕ್ತರು ಹಿಂದೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡಿದರು.
ಬಸ್ ನಿಲ್ದಾಣದಲ್ಲೇ ಉಪಹಾರ ವ್ಯವಸ್ಥೆ
ಶನಿವಾರ ಮುಷ್ಕರದಿಂದಾಗಿ ನೂರಾರು ಸಾರಿಗೆ ಸಿಬಂದಿ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಉಪಹಾರ ವ್ಯವಸ್ಥೆ ಮಾಡಿಕೊಂಡರು. ಚಾಲಕರ ನಿರ್ವಾಹಕರು ಸೌಟು ಹಿಡಿದು ಅಡುಗೆ ಸಿದ್ಧಪಡಿಸಿದ್ದಾರೆ. ನಿಲ್ದಾಣದಲ್ಲೇ ಪ್ರಯಾಣಿಕರಿಗು ಉಪಹಾರ ವ್ಯವಸ್ಥೆ ಮಾಡಿದರು.
ಎರಡನೇ ಶನಿವಾರವಾದ್ದರಿಂದ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಅಡಚಣೆಯಾಗಿದೆ. ವಿಶೇಷ ಬಸ್ ಗಳ ವ್ಯವಸ್ಥೆಯೂ ಸ್ಥಗಿತವಾಗಿದೆ.
ಶುಕ್ರವಾರ ಸಹಜ ಸ್ಥಿತಿಯಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಓಡಾಟವು ಶನಿವಾರ ನೌಕರರ ಮುಷ್ಕರ ಪರಿಣಾಮ ಸ್ಥಗಿತಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ