ಲಕ್ಷದೀಪೋತ್ಸವದಲ್ಲಿ ಕಣ್ಣಿಗೆ ಬಿದ್ದದ್ದು ; ಶಕುನದ ಹಕ್ಕಿಯೊಂದಿಗೆ ಭವಿಷ್ಯ ನುಡಿವ ಸಿದ್ಧರು


Team Udayavani, Nov 24, 2019, 3:56 PM IST

Gini-Shashtra-730

ಅಲೆಮಾರಿ ಜನಾಂಗದವರು ನಮ್ಮ ಜನಮಾನಸದ ಒಂದು ಭಾಗವಾಗಿಯೇ ಹೋಗಿದ್ದಾರೆ. ಅವರು ತಮ್ಮ ಕುಲ ಕಸುಬನ್ನ ನಿಷ್ಠೆಯಿಂದ ಮಾಡುವಂತವರು. ಇಂತಹ ವೃತ್ತಿಯನ್ನು ಪಾಲಿಸುವವರಲ್ಲಿ ಗಿಣಿ ಶಾಸ್ತ್ರ ಹೇಳುವವರು ಕೂಡಾಒಬ್ಬರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೀಪೋತ್ಸವದ ಆಚರಣೆಯಲ್ಲಿ ಕಂಡು ಬಂದ ಒಂದು ವೈಶಿಷ್ಟ್ಯಎಂದರೆ ಗಿಣಿಶಾಸ್ತ್ರ ಹೇಳುಗರು. ಇಲ್ಲಿಗೆ ಬಂದಿದ್ದ ಗಿಣಿಶಾಸ್ತ್ರದವರು ‘ಸುಡಗಾಡು ಸಿದ್ಧರು’ ಎಂಬ ಅಲೆಮಾರಿ ಜನಾಂಗಕ್ಕೆ ಸೇರಿದವರು. ತಲೆತಲಾಂತರದಿಂದಲೂ ಸಾಗಿ ಬಂದಿರುವ ಕುಲಕಸುಬಾದ ಗಿಣಿಶಾಸ್ತ್ರವನ್ನು ಹೇಳುತ್ತಿದ್ದಾರೆ.

ಲಕ್ಷ ದೀಪೋತ್ಸವದಲ್ಲಿ ಕಾಣಿಸಿಕೊಂಡಿದ್ದ ಗಿಣಿ ಶಾಸ್ತ್ರದವರು ಮೈಲಳ್ಳಿಯ ಚಿಳಿಕೆರೆ ತಾಲೂಕಿನ ಚಿತ್ರದುರ್ಗದವರು. ಪ್ರಸುತ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನೆಲೆಸಿದ್ದಾರೆ. ತೆಲಗು ಹಾಗೂ ಕನ್ನಡ ಭಾಷೆ ಮಾತನಾಡುವ ಇವರು ಕಾಲಕ್ಕೆ ತಕ್ಕಂತೆ ಮುಂದುವರಿದು ಸ್ವಂತ ಮನೆ, ಜಮೀನನ್ನು ಹೊಂದಿದ್ದಾರೆ.

ಇವರದ್ದು ಕೇವಲ ಹೊಟ್ಟೆಪಾಡಿನ ಉದ್ಯೋಗವಷ್ಟೇ ಅಲ್ಲ. ಗಿಣಿ ಶಾಸ್ತ್ರ ಹೇಳುವುದು ತಲೆತಲಾಂತರದ ಸಂಪ್ರದಾಯ ಎನ್ನುವ ಕಾರಣಕ್ಕೆ ವರ್ಷದಲ್ಲಿ ಕೇವಲ ಎರಡು ತಿಂಗಳು ಮಾತ್ರ ಗಿಣಿ ಭವಿಷ್ಯ ಹೇಳುತ್ತಾರೆ. ಶಾಸ್ತ್ರ ಹೇಳಿ ಸಂಪಾದಿಸಿದ ಮೊತ್ತವನ್ನು ಶ್ರೀ ಸಿದ್ಧಾರೂಢ ಮಠಕ್ಕೆಅರ್ಪಿಸುತ್ತಾರೆ. ಇನ್ನುಳಿದ ಹತ್ತು ತಿಂಗಳು ಹಚ್ಚೆ ಹಾಕುತ್ತಾರೆ ಹಾಗೂ ಸ್ಟೇಷನರಿ ವಸ್ತುಗಳನ್ನು ಮಾರುತ್ತಾರೆ.

ನಾಲ್ಕು ತಲೆಮಾರಿನ ಜನ ಭವಿಷ್ಯ ಹೇಳುವುದನ್ನು ಮುಂದುವರೆಸಿದ್ದಾರೆ. ಜೊತೆಯಲ್ಲಿ ಮನೆಯ ಒಬ್ಬನೇ ಸದಸ್ಯ ಈ ವೃತ್ತಿಯಲ್ಲಿರಬಹುದು. ತಮ್ಮ ವೃತ್ತಿಯ ಪಾಲುದಾರನಾದ ಗಿಣಿಯನ್ನ ಚಿಕ್ಕಮರಿ ಇದ್ದಾಗಲೇ ಪಡೆದು ಅದಕ್ಕೆ ತರಬೇತಿ ನೀಡಲಾಗುತ್ತದೆ. ಭವಿಷ್ಯ ಹೇಳುವಾಗ ಗಿಣಿ ತನ್ನ ಯಜಮಾನನ ಆದೇಶದಂತೆ ಹಲವು ಕಾರ್ಡ್‌ಗಳಲ್ಲಿ ಒಂದನ್ನು ಆಯ್ದು ನೀಡಿ ಮತ್ತೆ ಪಂಜರ ಸೇರುತ್ತದೆ.

ಲಕ್ಷದೀಪೊತ್ಸವಕ್ಕೆ ಆಗಮಿಸಿದ್ದ ಜನರು ಗಿಣಿಶಾಸ್ತ್ರ  ಕೇಳಲು ಸಾಲಾಗಿ ಕುಳಿತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕೆಲವರು ಗಿಣಿರಾಮನ ಭವಿಷ್ಯ ಕೇಳಿ ತೃಪ್ತರಾಗಿ ಹೋದರೆ, ಇನ್ನು ಕೆಲವರು ಚಿಂತೆಯಲ್ಲಿ ಸಾಗಿದರು. ಸಾಲಾಗಿ ಕುಳಿತಿರುವ ಗಿಣಿಗಳು ನೋಡಲು ಆಕರ್ಷಕವಾಗಿತ್ತು.

ಗಿಣಿ ಶಾಸ್ತ್ರ ಹೇಳುವ ಸಂಪ್ರದಾಯ ನಮ್ಮ ಪೀಳಿಗೆಗೆ ಮುಕ್ತಾಯವಾಗುತ್ತದೆ. ನಾವು ಅನಕ್ಷರಸ್ಥರು. ಆದರೆ ನಮ್ಮ ಮಕ್ಕಳು ವಿದ್ಯೆ ಕಲಿತು ದೊಡ್ಡ ವ್ಯಕ್ತಿಗಳಾಗಬೇಕು. ಆದ್ದರಿಂದ ಅವರಿಗೆ ಈ ಕಸುಬನ್ನ ನಾವು ಹಸ್ತಾಂತರಿಸುವುದಿಲ್ಲ ಎಂಬುದು ಗಿಣಿ ಶಾಸ್ತ್ರ ಹೇಳುವವರ ಅಭಿಪ್ರಾಯವಾಗಿದೆ.

ವರದಿ: ವಾಣಿ ಭಟ್ ; ಚಿತ್ರಗಳು: ಸುರ್ವಣಾ ಹೆಗಡೆ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.