ಧರ್ಮಸ್ಥಳ ಲಕ್ಷದೀಪೋತ್ಸವ : ಭಾವೈಕ್ಯತೆಯ ಮೌಲ್ಯ ಮನಗಾಣಿಸಿದ ಪಾದಯಾತ್ರೆ
Team Udayavani, Nov 24, 2019, 8:11 PM IST
ಅಂದು ಉಜಿರೆ ಎಂದಿನಂತಿರಲಿಲ್ಲ. ಎಲ್ಲಿ ನೋಡಿದರೂ ಕಿಕ್ಕಿರಿದು ನೆರೆದ ಜನಸ್ತೋಮ. ಭಕ್ತಿ ಭಾವದಿಂದ ಮಂಜುನಾಥನನ್ನು ನೆನೆಯುತ್ತಾ, ಧರ್ಮಸ್ಥಳದ ಕಡೆಗೆ ಕಾಲ್ನಡಿಗೆಯಲ್ಲಿ ಮಕ್ಕಳು ಹಿರಿಯರೆನ್ನದೆ ಮುನ್ನಡೆಯುವ ಉತ್ಸಾಹ. ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತ ಏರ್ಪಟ್ಟ ಪಾದಯಾತ್ರೆಯ ಚಿತ್ರಣ ಇದು. ಶುಕ್ರವಾರ ಸಂಜೆ ಉಜಿರೆಯಿಂದ ಧರ್ಮಸ್ಥಳದವರೆಗೆ ಈ ಭಕ್ತ ಯಾತ್ರೆಯದ್ದೇ ಸೊಗಸು. ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಹಲವರು ಧರ್ಮಸ್ಥಳದೆಡೆಗಿನ ಭಕ್ತಿ ಭಾವದ ನಡಿಗೆಯನ್ನು ಸಂಭ್ರಮಿಸಿದರು. ಈ ಮೂಲಕ ಏಳನೇ ವರ್ಷದ ಪಾದಯಾತ್ರೆಯು ಭಿನ್ನವೆನ್ನಿಸಿತು.
ವಿವಿದೆಡೆಗಳಿಂದ ಆಗಮಿಸಿದ ಭಕ್ತರು ವಿವಿಧ ವಲಯಗಳ ಹೆಸರಿನ ತಂಡಗಳೊಂದಿಗೆ ನಡೆಯುತ್ತಿದ್ದರು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಚಾರ್ಮಾಡಿ, ಕೊಕ್ಕಡ, ಮಡಂತ್ಯಾರು, ಗುರುವಾಯನಕೆರೆ, ಹೊಸಂಗಡಿ, ವೇಣೂರು, ಅಳದಂಗಡಿ, ನಾರಾವಿ ಮತ್ತು ಕಣಿಯೂರು ವಲಯಗಳ ತಂಡಗಳು ಒಟ್ಟಾಗಿ ಹೆಜ್ಜೆ ಹಾಕಿದವು.
ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಬೋಧಕೇತೆ ಸಿಬ್ಬಂದಿ ಪಾಲ್ಗೊಂಡಿದ್ದರು. ಉಜರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಸಮಾರೋಪಗೊಂಡಿತು. ವಿವಿಧ ಕಡೆಗಳಿಂದ ಆಗಮಿಸಿದ ಭಕ್ತವೃಂದ ಶಿವಧ್ಯಾನ, ಭಜನೆ ಹಾಡುತ್ತಾ ಹೆಜ್ಜೆ ಇರಿಸಿದರು.
ಕಣ್ಣು ಹಾಯಿಸಿದ ಕಡೆಗೆಲ್ಲಾ ಭಕ್ತರು. ಅಮ್ಮನ ಕೈ ಹಿಡಿದ ಕಂದಮ್ಮ, ತಂದೆಯ ಹೆಗಲೇರಿದ ಬಾಲಕ, ಪಿಸುಗುಡುತ್ತಾ ಸಾಗುತ್ತಿದ್ದ ತರುಣಿಯರು, ದೇಹ ಸ್ಪಂದಿಸದಿದ್ದರೂ ಮಂಜುನಾಥನ ಕಾಣುವ ತವಕದಿಂದ ನಡೆದು ಬರುತ್ತಿದ್ದ ಮುನ್ನಡೆದ ಹಿರಿಯರು. ಎಲ್ಲರ ಮೊಗದಲ್ಲಿ ಭಕ್ತಿಯ ಭಾವವೇ ಎದ್ದುಕಾಣುತ್ತಿತ್ತು.
ಪಾದಯಾತ್ರೆಯ ವೇಳೆ ಮುಂಜಾಗ್ರತಾ ಕ್ರಮವಾಗಿ ಆಂಬ್ಯುಲೆನ್ಸ್ ವಾಹನಗಳಿದ್ದು, ಆಯಾಸ ಮತ್ತು ಬಾಯಾರಿಕೆಗೆ ತಂಪು ಪಾನೀಯ ಹಾಗೂ ನೀರಿನ ವ್ಯವಸ್ಥೆುತ್ತು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾಾನದ ಆಡಳಿತ ಮೊಕ್ತೇಸರ ‘ಜಯರಾಘವ ಪಡ್ವೆಟ್ನಾಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪಾದಯಾತ್ರೆಗೆ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಲಕ್ಷ್ಮಿಗ್ರೂಪ್ ಇಂಡಸ್ಟ್ರೀಸ್ನ ಸ್ವಯಂ ಸೇವಕರು, ಸಾರ್ವಜನಿಕ ಸ್ವಯಂ ಸೇವಕರು ಮತ್ತು ಪೊಲೀಸ್ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದರು.
ಧರ್ಮಸ್ಥಳದಲ್ಲಿ ಪಾದಯಾತ್ರೆ ಸಮಾರೋಪಗೊಂಡ ನಂತರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಮಾತುಗಳು ಭಕ್ತವೃಂದದ ಮನಗೆದ್ದವು. ಲಕ್ಷದೀಪೋತ್ಸವದ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ನಡೆದು ಶ್ರೀ ಮಂಜುನಾಥೇಶ್ವರ ಸನ್ನಿಧಿಗೆ ತಲುಪಿಕೊಳ್ಳುವುದನ್ನು ಭಾವೈಕ್ಯತೆಯ ವೈಶಿಷ್ಟ್ಯ ಎಂದು ಅವರು ವಿಶ್ಲೇಸಿದರು. ಇಡೀ ವರ್ಷದ ಬದುಕಿಗೆ ಬೇಕಾಗುವ ದೈಹಿಕ ಶಕ್ತಿಯನ್ನು ಪಡೆಯುವುದಕ್ಕೆ ಈ ಪಾದಯಾತ್ರೆ ನೆರವಾಗುತ್ತದೆ ಎಂದು ಹೇಳಿದ್ದು ಪಾದಯಾತ್ರಿಗಳೊಳಗೆ ಹೊಸ ಹುಮ್ಮಸ್ಸು ಮೂಡಿಸಿತು.
ಬರಹ: ಧೃತಿ ಅಂಚನ್ ; ಚಿತ್ರ: ಶಿವಪ್ರಸಾದ್ ಹಳುವಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ