ಇಂದಿನಿಂದ ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ವಸ್ತುಪ್ರದರ್ಶನ, ಅಂಗಡಿ ಮಳಿಗೆಗಳು; ವಿದ್ಯುತ್‌ ದೀಪಗಳಿಂದ ಅಲಂಕಾರ

Team Udayavani, Nov 22, 2019, 1:45 AM IST

pp-62

ಬೆಳ್ತಂಗಡಿ: ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂಭ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಸಜ್ಜುಗೊಂಡಿದೆ. ನಾಡಿನ ಪವಿತ್ರ ಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನ. 22ರಿಂದ 26ರ ವರೆಗೆ ನಡೆಯಲಿರುವ ದೀಪೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

ಈಗಾಗಲೇ ದೇವಸ್ಥಾನ, ಬೀಡು, ರಸ್ತೆಗಳು, ವಸತಿಗೃಹ ಸಹಿತ ರಸ್ತೆಗಳು, ಸುತ್ತಮುತ್ತಲಿನ ಕಟ್ಟಡಗಳು ವಿದ್ಯುದ್ದೀಪಗಳಿಂದ ಅಲಂಕಾರಗೊಂಡು, ಸಾಲು ಸಾಲು ವಿಭಿನ್ನ ಮಳಿಗೆಗಳಿಂದ ಜನಾಕರ್ಷಣೆ ಪಡೆದಿದೆ.
ನೇತ್ರಾವತಿ ಸ್ನಾನಘಟ್ಟದಿಂದ ಮುಖ್ಯ ದ್ವಾರದವರೆಗೆ ವಿದ್ಯುದ್ದೀಪಗಳು, ರಸ್ತೆ ಕೆರೆಗಳಲ್ಲಿ ಆಲಂಕಾರಿಕ ವಸ್ತುಗಳನ್ನು ಜೋಡಿಸಲಾಗಿದೆ. ಮುಖ್ಯದ್ವಾರ ಸಹಿತ ದೇವಸ್ಥಾನದ ಸಮೀಪದವರೆಗೂ ಸಾಲು ಸಾಲು ವಿವಿಧ ಬಗೆಯ ತಿಂಡಿ-ತಿನಿಸು, ಬಟ್ಟೆಬರೆಗಳು, ಕಾಫಿ – ಟೀ ಸ್ಟಾಲ್‌ ಮಳಿಗೆ ಗಳು ಭಕ್ತರನ್ನು ಸೆಳೆಯುವಂತಿದೆ.

ಧರ್ಮಸ್ಥಳ ಪ್ರೌಢಶಾಲೆ ಮುಂಭಾಗದ ಆವರಣದಲ್ಲಿ ರಾಷ್ಟ್ರಮಟ್ಟದ 42ನೇ ವಸ್ತುಪ್ರದರ್ಶನ ಮಳಿಗೆಗಳು ಸಜ್ಜು ಗೊಂಡಿವೆ. ಲಕ್ಷ ದೀಪೋತ್ಸವ ಪ್ರಯುಕ್ತ ಸಾವಿರಾರು ಸ್ವಚ್ಛತಾ ಸೇನಾನಿಗಳು ಕ್ಷೇತ್ರದ ಸ್ವತ್ಛತೆ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ದೇವಸ್ಥಾನದ ಮುಂಭಾಗ ವಿವಿಧ ವಿನ್ಯಾಸವನ್ನು ಒಳಗೊಂಡಿರುವ ವಿದ್ಯುದ್ದೀಪಗಳನ್ನು ಜೋಡಿಸಲಾಗಿದೆ. ಗೂಡುದೀಪಾಕೃತಿಯ ಬಣ್ಣ ಬಣ್ಣದ ಬಲುºಗಳು ಮನಮೋಹಕವಾಗಿವೆ. ನಾಡಿನೆಲ್ಲೆಡೆಯಿಂದ ಬರುವ ಭಕ್ತರ ಸೇವೆಗಾಗಿ ಕ್ಷೇತ್ರದ ಸಿಬಂದಿ ಪೊಲೀಸರು, ವಿದ್ಯಾರ್ಥಿಗಳು, ಸ್ವತ್ಛತಾ ಸೇನಾನಿಗಳು, ಸ್ವಯಂ ಸೇವಕರು, ಗೃಹರಕ್ಷಕ ದಳ ಸರ್ವ ರೀತಿಯಲ್ಲಿ ತಯಾರಿ ನಡೆಸಿದೆ.

ಲಕ್ಷದೀಪೋತ್ಸವ ಸಂಭ್ರಮ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತರನ್ನು ಕರೆತರಲು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಶುಕ್ರವಾರ ಅಪರಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳಕ್ಕೆ ಸಾವಿರಾರು ಮಂದಿ ಪಾದಯಾತ್ರಿಗಳು ಆಗಮಿಸಲಿದ್ದಾರೆ.

197 ಮಳಿಗೆಗಳು
ರಾಜ್ಯಮಟ್ಟದ 42ನೇ ವಸ್ತುಪ್ರದರ್ಶನದಲ್ಲಿ ಜ್ಞಾನ-ವಿಜ್ಞಾನ ಸಮ್ಮಿಳಿತದ 197 ವಿವಿಧ ಪ್ರಕಾರದ ಮಳಿಗೆಗಳು ಆಕರ್ಷಿಸಲಿವೆ. ಸರಕಾರಿ ಮಳಿಗೆಗಳು, ಎಲೆಕ್ಟ್ರಾನಿಕ್‌ ವಸ್ತುಗಳು, ಪುಸ್ತಕ ಮಳಿಗೆ, ಸಿರಿ ಉತ್ಪನ್ನಗಳು, ತರಕಾರಿ ಬೀಜಗಳು, ರುಡ್ಸೆಟ್‌ ಮಳಿಗೆ, ಎಸ್‌ಕೆಡಿಆರ್‌ ಡಿಪಿ ಮಳಿಗೆ, ಕೃಷಿ ಉಪಕರಣಗಳು, ನಾಟಿ ಔಷಧ, ಕರಕುಶಲ ವಸ್ತು, ಗೋಬರ್‌ ಗ್ಯಾಸ್‌, ವಸ್ತ್ರ ಮಳಿಗೆಗಳು, ವಾಹನ ಮಳಿಗೆ, ನೀರು ಶುದ್ಧೀಕರಣ ಸಹಿತ ವಿವಿಧ ಬಗೆಯ ಮಳಿಗೆಗಳು ಸಿದ್ಧಗೊಂಡಿವೆ.

ಸರ್ವಸಿದ್ಧತೆ
ಲಕ್ಷದೀಪೋತ್ಸವ ಸಂದರ್ಭ ಬರುವ ಭಕ್ತರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇತ್ಯಾದಿಗಳ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಸ್ವತ್ಛತಾ ಸೇನಾನಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಭಕ್ತರಿಗೆ ಯಾವುದೇ ಕೊರತೆ ಬಾರದ
ರೀತಿಯಲ್ಲಿ ಸಿದ್ಧಗೊಳಿಸಲಾಗಿದೆ.
– ಹರ್ಷೇಂದ್ರ ಕುಮಾರ್‌, ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮೇಲುಸ್ತುವಾರಿ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.