ಬಾಹುಬಲಿಯ ತ್ಯಾಗ ಬದುಕಿಗೆ ಮಾದರಿ: ನಟ ರಮೇಶ್‌


Team Udayavani, Feb 10, 2019, 12:30 AM IST

dharmasthala-m.jpg

ಬೆಳ್ತಂಗಡಿ: ಭಗವಾನ್‌ ಬಾಹುಬಲಿ ಸ್ವಾಮಿಯು ಜಗತ್ತಿಗೆ ತೋರಿದ ತ್ಯಾಗವನ್ನು ಎಲ್ಲರೂ ಬದುಕಿ ನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚಿತ್ರ ನಟ ರಮೇಶ್‌ ಅರವಿಂದ್‌ ಅವರು ಹೇಳಿದರು. 

ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ಭಗವಾನ್‌ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಬಾಹುಬಲಿ ಚರಿತೆ 3ಡಿ ಪ್ರೊಜೆಕ್ಷನ್‌ ಶೋವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 
ಬಾಹುಬಲಿಯ ತ್ಯಾಗವನ್ನು ನೆನಪಿಸುವಂತೆ ಇಂತಹ ಬೃಹತ್‌ ಮೂರ್ತಿಗಳನ್ನು ಪ್ರತಿಷ್ಠಾಪಿಸ ಲಾಗುತ್ತದೆ. ನಮ್ಮ ಯೋಚನೆ, ಪ್ರೀತಿಯೂ ಅಷ್ಟೇ ಎತ್ತರಕ್ಕೆ ಬೆಳೆಯ ಬೇಕಿದೆ ಎಂದರು. 

ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವೆ ಡಾ| ಜಯಮಾಲಾ ಅವರು ಮಾತನಾಡಿ, ಧರ್ಮಸ್ಥಳ ಕಲೆ-ಕಲಾವಿದರಿಗೆ ನೆಲೆ ಕೊಟ್ಟ ಭೂಮಿ. ಇಲ್ಲಿ ಕಲಾಸೇವೆ ಮಾಡಿದವರು ಉನ್ನತಿಗೇರಿದ್ದಾರೆ ಎಂದು ತಿಳಿಸಿದರು. ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಅತಿಥಿಗಳನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್‌. ಪ್ರಭಾಕರ್‌ ಅವರು ವಾಸ್ತುಶಿಲ್ಪಿ ರೆಂಜಾಳ ಗೋಪಾಲಕೃಷ್ಣ ಶೆಣೈ ಅವರ ಮೂರ್ತಿ ಅನಾವರಣ ಗೊಳಿಸಿದರು.

ವೇದಿಕೆಯಲ್ಲಿ ಶಾಸಕ ಹರೀಶ್‌ ಪೂಂಜ, ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಕ್ಷೇತ್ರದ ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌, ಅನಿತಾ ಸುರೇಂದ್ರ ಕುಮಾರ್‌, ಡಿ. ಹಷೇìಂದ್ರ ಕುಮಾರ್‌, ಸುಪ್ರಿಯಾ ಹಷೇìಂದ್ರ ಕುಮಾರ್‌, ಡಿ. ರಾಜೇಂದ್ರ ಕುಮಾರ್‌, ಶ್ರದ್ಧಾ ಅಮಿತ್‌ ಹಾಗೂ ಡಾ| ಹೆಗ್ಗಡೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಪ್ರೊ| ಎಂ. ರಾಮಚಂದ್ರ ಸ್ವಾಗತಿಸಿದರು.

ಆಕರ್ಷಕ 3ಡಿ ಶೋ
ಬಾಹುಬಲಿಯ ಚರಿತ್ರೆಯನ್ನೊಳಗೊಂಡ ಧ್ವನಿ ಹಾಗೂ ಬೆಳಕಿನ 3ಡಿ ಪೊ›ಜೆಕ್ಷನ್‌ ಶೋ ಅತ್ಯಂತ ಆಕರ್ಷಕವಾಗಿ ಮೂಡಿ ಬಂತು. ಕ್ಷೇತ್ರದ ಶ್ರೇಯಸ್‌ ಕುಮಾರ್‌ ಅವರ ನೇತೃತ್ವದಲ್ಲಿ ಬೆಂಗಳೂರಿನ ಸಂಸ್ಥೆ ಇದನ್ನು ನಿರ್ಮಾಣಗೊಳಿಸಿದ್ದು, ಬಾಹುಬಲಿಯ ವಿಗ್ರಹದ ಮೇಲೆಯೇ 17 ನಿಮಿಷಗಳ ಫೆ. 18ರ ವರೆಗೆ ಪ್ರತಿದಿನ ರಾತ್ರಿ 7ರಿಂದ ಮೂರು ಶೋ ಪ್ರದರ್ಶನಗೊಳ್ಳಲಿದೆ.

ಇಂದು ಕ್ಷುಲ್ಲಕ ದೀಕ್ಷೆ
ಬೆಳ್ತಂಗಡಿ:
 ಮಹಾಮಸ್ತಕಾಭಿಷೇಕದ 2ನೇ ದಿನವಾದ ಫೆ. 10ರಂದು ಬೆಳಗ್ಗೆ 8ಕ್ಕೆ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ಆಚಾರ್ಯ ಶ್ರೀ 108 ಪುಷ್ಪ ದಂತಸಾಗರ ಮುನಿಮಹಾರಾಜರಿಂದ ಶ್ರೀ ಸತೀಶ್‌ ಜೀ ಬೈಯಾಜಿ, ಶ್ರೀ ಪೂರನ್‌ ಬೈಯ್ನಾಜಿ ಹಾಗೂ ಶ್ರೀಪ್ರಭು ಬೈಯ್ನಾಜಿ ಅವರಿಗೆ ಕ್ಷುಲ್ಲಕ ದೀಕ್ಷಾ ಮಹಾಮಹೋತ್ಸವ ನೆರವೇರಲಿದೆ.

ಸಂಜೆ 4ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಜನ ಮಂಗಲ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ರಾಜ್ಯ ವಸತಿ ಸಚಿವ ಎನ್‌. ನಾಗರಾಜು ಉದ್ಘಾಟಿಸಲಿದ್ದು, ಅಂಗವಿಕಲರಿಗೆ ಗಾಲಿ ಕುರ್ಚಿಗಳನ್ನು ವಿತರಿಸಲಿದ್ದಾರೆ. ಅತಿಥಿಗಳಾಗಿ ರಾಜ್ಯ ಗೃಹ ಸಚಿವ ಎಂ.ಬಿ. ಪಾಟೀಲ್‌, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ, ಶಾಸಕ ಹರೀಶ್‌ ಪೂಂಜ, ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ.ಸದಸ್ಯೆ ಧನಲಕ್ಷ್ಮೀ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ 7ಕ್ಕೆ ಚಿತ್ರರಂಗದ ಪ್ರಸಿದ್ಧ ಗಾಯಕರಿಂದ ಗಾನ ತರಂಗ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮ ಫೆ. 10ರಂದು ಬಾಹುಬಲಿ ಬೆಟ್ಟದಲ್ಲಿ ಬೆಳಗ್ಗೆ 8ಕ್ಕೆ ನಿತ್ಯವಿಧಿ ಸಹಿತ ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ, ದಿಕಾ³ಲಕ ಬಲಿ, ಯಜ್ಞ ಶಾಲೆಯಲ್ಲಿ ಯûಾರಾಧನೆ ಪೂರ್ವಕ ಯಕ್ಷ ಪ್ರತಿಷ್ಠೆ, ಮಧ್ಯಾಹ್ನ 12.35ಕ್ಕೆ ಧ್ವಜಾರೋಹಣ ವಿಧಿ, 54 ಕಲಶಗಳಿಂದ ಪಾದಾಭಿಷೇಕ, ಅಪರಾಹ್ನ 3ರಿಂದ ಶ್ರೀ ಪೀಠ ಯಂತ್ರಾರಾಧನೆ, ಸಂಜೆ ಭೇರಿತಾಡನ, ಧ್ವಜಪೂಜೆ, ಶ್ರೀ ಬಲಿವಿಧಾನ, ಮಹಾಮಂಗಳಾರತಿ ನಡೆಯಲಿದೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.