ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಅಭಿವೃದ್ಧಿ ಮಂತ್ರದಡಿ 1.73 ಕೋ.ರೂ.


Team Udayavani, Jul 11, 2020, 6:47 AM IST

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಅಭಿವೃದ್ಧಿ ಮಂತ್ರದಡಿ 1.73 ಕೋ.ರೂ.

ಯೋಜನೆಯಿಂದ ಅನುಷ್ಠಾನಗೊಂಡಿರುವ ರುದ್ರಭೂಮಿಯ ಅಭಿವೃದ್ಧಿ ಕಾರ್ಯ.

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೈಯಕ್ತಿಕ ಕುಟುಂಬಗಳ ಅಭಿವೃದ್ಧಿಯೊಂದಿಗೆ ಗ್ರಾಮದ ಅಭಿವೃದ್ಧಿ ಆಗಬೇಕೆಂಬ ಆಶಯದಂತೆ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ| ಎಲ್‌.ಎಚ್‌. ಮಂಜುನಾಥ ಅವರ ಶಿಫಾರಸಿನಂತೆ ಸಂಸ್ಥೆಯ ಅಧ್ಯಕ್ಷ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯದ ವಿವಿಧ ಕಾಮಗಾರಿಗಳ ಅಭಿವೃದ್ಧಿಯ ವರದಿಯನ್ನು ಪರಿಶೀಲಿಸಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ ಈವರೆಗೆ 1.73 ಕೋ.ರೂ. ಅನುದಾನ ಮಂಜೂರು ಮಾಡಿದ್ದಾರೆ.

ಗ್ರಾಮ ಕಲ್ಯಾಣ ಯೋಜನೆಯಡಿಯಲ್ಲಿ ಸಮುದಾಯ ಭವನ, ವೃದ್ಧಾಶ್ರಮ ನಿರ್ಮಾಣ, ವ್ಯಾಯಾಮ ಶಾಲೆ, ಸಾರ್ವಜನಿಕ ಶೌಚಾಲಯ ರಚನೆ, ಭಜನ ಮಂದಿರ ನಿರ್ಮಾಣ, ಗೋ ಶಾಲಾ ನಿರ್ವಹಣೆ, ಮಹಿಳಾ ಮಂಡಳಿ ಕಟ್ಟಡ, ಅಂಧರ ಗೀತಗಾಯನ ಕಲಾ ಸಂಘಕ್ಕೆ ಸಹಾಯಧನ, ಸ್ತ್ರೀಶಕ್ತಿ ಭವನದ ಕಟ್ಟಡ ನಿರ್ಮಾಣ ಮುಂತಾದ 33 ಕಾಮಗಾರಿಗಳಿಗೆ 36 ಲಕ್ಷ ರೂ. ಮಂಜೂರು ಮಾಡಲಾಗಿದೆ.

ಹಾಲು ಉತ್ಪಾದಕರ ಸಂಘಗಳ ಕಟ್ಟಡ ರಚನೆ ಇನ್ನಿತರ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. 86 ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ 81 ಲಕ್ಷ ರೂ. ಮಂಜೂರು ಮಾಡಲಾಗಿದೆ.
ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮದಡಿ ದಹನ ಶೆಡ್‌ ರಚನೆ, ಸಿಲಿಕಾನ್‌ ಚೇಂಬರ್‌ ಅಳವಡಿಕೆ, ಆವರಣ ಗೋಡೆ ರಚನೆ, ದಾಸ್ತಾನು ಕೊಠಡಿ ನಿರ್ಮಾಣ, ತ್ಯಾಜ್ಯ ಗುಂಡಿ ನಿರ್ಮಾಣ, ಶೌಚಾಲಯ ನಿರ್ಮಾಣ, ನೀರು ಮತ್ತು ವಿದ್ಯುತ್‌ ವ್ಯವಸ್ಥೆ ಮುಂತಾದ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. ಪ್ರಸ್ತುತ ವರ್ಷದಲ್ಲಿ 6 ಹಿಂದೂ ರುದ್ರಭೂಮಿಗಳಿಗೆ 12.50 ಲಕ್ಷ ರೂ. ಮಂಜೂರಾಗಿದೆ.

ಜ್ಞಾನದೀಪ ಕಾರ್ಯಕ್ರಮದಡಿ ಶಾಲಾ ಕಟ್ಟಡ, ಸಭಾಭವನ, ರಂಗಮಂದಿರ, ಶೌಚಾಲಯ, ಆವರಣ ಗೋಡೆ ನಿರ್ಮಾಣ ಮೊದಲಾದ ಕಾಮಗಾರಿಗಳಿಗೆ 8.25 ಲಕ್ಷ ರೂ. ನೀಡಲಾಗಿದೆ. 1990ರಿಂದ ಇದುವರೆಗೆ 269.37 ಕೋ.ರೂ.ಗಳನ್ನು ಡಾ| ಹೆಗ್ಗಡೆ ಮಂಜೂರು ಮಾಡಿದ್ದಾರೆ ಎಂದು ಸಮುದಾಯ ಅಭಿವೃದ್ಧಿ ವಿಭಾಗದ ಹಿರಿಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜನಮಂಗಲ ಕಾರ್ಯಕ್ರಮ
ಧರ್ಮಸ್ಥಳದ ಮಹಾಮಸ್ತಕಾಭಿಷೇಕ ಸಂದರ್ಭ ಘೋಷಿಸಿದ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಶೇಷಚೇತನರಿಗೆ ಅವಶ್ಯವಿರುವ ವಿವಿಧ ಬಗೆಯ ಸಲಕರಣೆಯನ್ನು ಒದಗಿಸಲಾಗುತ್ತಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ರಾಜ್ಯದ 1,240 ವಿಶೇಷ ಚೇತನರಿಗೆ 35 ಲಕ್ಷ ರೂ. ಮೌಲ್ಯದ ಸಲಕರಣೆ ವಿತರಣೆಗೆ ಮಂಜೂರಾತಿ ನೀಡಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.