ಡೀಸೆಲ್‌ ಕೊರತೆ: ಮೀನುಗಾರರ ಪರದಾಟ, ಬಂದರಿನಲ್ಲಿ ಬೋಟುಗಳ ಲಂಗರು

ವಾರ್ಷಿಕ ಕೋಟಾ ಖಾಲಿ

Team Udayavani, Feb 18, 2023, 7:17 AM IST

ಡೀಸೆಲ್‌ ಕೊರತೆ: ಮೀನುಗಾರರ ಪರದಾಟ, ಬಂದರಿನಲ್ಲಿ ಬೋಟುಗಳ ಲಂಗರು

ಮಲ್ಪೆ: ಮೀನುಗಾರಿಕೆಗೆ ಸರಕಾರ ವಾರ್ಷಿಕವಾಗಿ ನೀಡುವ ನಿಗದಿತ ಪ್ರಮಾಣದ ಡೀಸೆಲ್‌ ಬಳಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಮತ್ಸé ಸಂಪತ್ತು ಸಿಗುವಂಥ ತಿಂಗಳಿನಲ್ಲೇ ಮೀನುಗಾರಿಕಾ ದೋಣಿಗಳು ಎರಡು ಮೂರು ದಿನಗಳಿಂದ ಸಮುದ್ರಕ್ಕೆ ತೆರಳದೇ ಬಂದರಿನಲ್ಲೇ ಲಂಗರು ಹಾಕಿವೆ.

ಸರಕಾರವು ಎಪ್ರಿಲ್‌ನಿಂದ -ಮಾರ್ಚ್‌ವರೆಗೆ 1.50 ಲಕ್ಷ ಕೆ.ಎಲ್‌. ತೆರಿಗೆ ರಹಿತ ಡೀಸೆಲ್‌ ಪೂರೈಸುತ್ತಿದೆ. ವಾರ್ಷಿಕ ಕೋಟಾ ಮುಗಿದ ಕಾರಣ ಫೆ. 14ರಿಂದ ಯಾವುದೇ ಮೀನುಗಾರಿಕೆ ಬಂಕ್‌ಗಳಲ್ಲಿ ಡೀಸೆಲ್‌ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಹುತೇಕ ದೋನಿಗಳು ಮೀನುಗಾರಿಕೆಗೆ ತೆರಳದ ಕಾರಣ ಲಕ್ಷಾಂತರ ರೂ. ವಹಿವಾಟು ಸ್ಥಗಿತಗೊಂಡಿದೆ.

ಉತ್ತಮ ಫಸಲಿನ ಹೊತ್ತು
ಮೀನುಗಾರಿಕೆ ಋತುವಿನ ಮಧ್ಯದ ಅವಧಿಯಲ್ಲಿ ಮೀನುಗಾರಿಕೆ ಹೆಚ್ಚೆನೂ ಇರದು. ಆದರೆ ಫೆಬ್ರವರಿ ಯಿಂದ ಹೆಚ್ಚು ಮೀನುಗಳು ಸಿಗುವ ಸಮಯ. ಹಾಗಾಗಿ ಬಹುತೇಕ ಆಳಸಮುದ್ರ ಮೀನುಗಾರರು ಮೀನುಗಾರಿಕೆಯತ್ತ ಗಮನ ಹರಿಸಿದ್ದರು. ಆದರೆ ಈ ಸಂದರ್ಭದಲ್ಲೇ ಡೀಸೆಲ್‌ ಕೊರತೆ ಎದುರಾಗಿರುವುದು ಮೀನುಗಾರರನ್ನು ಸಂಕಷ್ಟಕ್ಕೆ ತಳ್ಳಿದೆ.

ಕಳೆದ ಬಾರಿಯೂ ಕೊರತೆ
ಕಳೆದ ವರ್ಷ 2 -3 ಸಲ ಚಂಡಮಾರುತ ಎದುರಾದಾಗ ಮೀನುಗಾರಿಕೆ ಸ್ಥಗಿತಗೊಂಡಿತ್ತು. ಹಾಗಾಗಿ ಮಾ. 20ರ ಬಳಿಕ ಡೀಸೆಲ್‌ ಕೊರತೆ ಉದ್ಭವಿಸಿತ್ತು. ಈ ಬಾರಿ ಋತುಮಾನದ ಮಧ್ಯೆ ಮೀನುಗಾರಿಕೆ ಸ್ಥಗಿತಗೊಳ್ಳದ ಕಾರಣ ಫೆಬ್ರವರಿಯಲ್ಲಿಯೇ ಡೀಸೆಲ್‌ ಸಮಸ್ಯೆ ಕಾಡಿದೆ. ಕಳೆದ ಬಾರಿ ಸರಕಾರ ಹೆಚ್ಚುವರಿಯಾಗಿ 10 ಸಾವಿರ ಕೆ.ಎಲ್‌. ಡೀಸೆಲ್‌ ಒದಗಿಸಿತ್ತು. ಪ್ರಸ್ತುತ ಮಲ್ಪೆ ಮೀನುಗಾರ ಸಂಘವು ಬೆಂಗಳೂರಿಗೆ ತೆರಳಿ ಜನಪ್ರತಿನಿಧಿಗಳ ಸಹಕಾರದಲ್ಲಿ ಹೆಚ್ಚುವರಿ ಡೀಸೆಲ್‌ಗೆ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

ದೋಣಿಗಳ ಸಂಖ್ಯೆಗೆ ಸಾಲದು
ಉಡುಪಿ ಮತ್ತು ದ.ಕ. ಜಿಲ್ಲೆ ಒಟ್ಟಾಗಿ 5000ಕ್ಕೂ ಹೆಚ್ಚು ದೋಣಿಗಳನ್ನು ಹೊಂದಿವೆ. ಈ ಹಿಂದೆ 140 ಅಶ್ವಶಕ್ತಿ ಎಂಜಿನ್‌ ಆಧಾರದಲ್ಲಿ 2014ರಿಂದ 1.50 ಲಕ್ಷ ಕೆ. ಎಲ್‌. ಡೀಸೆಲ್‌ ನೀಡಲಾಗುತ್ತಿತ್ತು. ಇದೀಗ ಎಲ್ಲ ದೋಣಿಯಲ್ಲೂ 350 ಅಶ್ವಶಕ್ತಿ ಎಂಜಿನ್‌ಗಳಿವೆ. ಜತೆಗೆ ದೋಣಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಸರಕಾರ ನೀಡುವ ಡೀಸೆಲ್‌ ಪ್ರಮಾಣವನ್ನು ಹೆಚ್ಚಿಸಿಲ್ಲ. ವಾರ್ಷಿಕವಾಗಿ ಕನಿಷ್ಠ 2 ಲಕ್ಷ ಕೆ. ಎಲ್‌. ನೀಡಬೇಕೆಂಬ ಮೀನುಗಾರರ ಬೇಡಿಕೆ ಇನ್ನೂ ಈಡೇರಿಲ್ಲ.

ಹೆಚ್ಚವರಿ ಡೀಸೆಲ್‌ ಪ್ರಸ್ತಾವನೆಗೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಇದರ ಕಡತಗಳನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ. ಅತೀ ಶೀಘ್ರದಲ್ಲಿ ಸಿಗುವ ನಿರೀಕ್ಷೆ ಇದೆ.
– ಎಸ್‌. ಅಂಗಾರ, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವರು.

ಒಂದೂವರೆ ತಿಂಗಳ ಮೊದಲೇ ಡೀಸೆಲ್‌ ಖಾಲಿಯಾಗಿದೆ. ಮೀನುಗಾರರಿಗೆ ವಾರ್ಷಿಕ 2 ಲಕ್ಷ ಕೆ. ಎಲ್‌ ಡೀಸೆಲ್‌ ನೀಡಬೇಕೆಂಬ ಬೇಡಿಕೆ ಇನ್ನೂ ಈಡೇರಿಲ್ಲ. ಸರಕಾರ ಈಗಲಾದರೂ ಡೀಸೆಲ್‌ ಪ್ರಮಾಣ ಏರಿಸಬೇಕು.
– ದಯಾನಂದ ಕೆ. ಸುವರ್ಣ, ಅಧ್ಯಕ್ಷರು, ಮೀನುಗಾರರ ಸಂಘ, ಮಲ್ಪೆ

ಹೆಚ್ಚುವರಿ 25 ಸಾವಿರ ಕೆ.ಎಲ್‌. ಡೀಸೆಲ್‌ ಒದಗಿಸಲು ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಇಲಾಖೆ ಮಟ್ಟದಲ್ಲಿ ಪ್ರಕ್ರಿಯೆ ನಡೆಯುತ್ತಿದೆ.
– ಶಿವಕುಮಾರ್‌, ಉಪ ನಿರ್ದೇಶಕರು, ಮೀನುಗಾರಿಕೆ ಇಲಾಖೆ (ಪ್ರಭಾರ ಜಂಟಿ ನಿರ್ದೇಶಕರು )

– ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.