ಶಿಥಿಲಗೊಂಡ ಕಟ್ಟಡ, ಶಿಕ್ಷಕರ ಕೊರತೆ

ನೂರಕ್ಕೂ ಅಧಿಕ ಮಕ್ಕಳಿರುವ ಬಂಗ್ಲೆಗುಡ್ಡೆ ಸರಕಾರಿ ಶಾಲೆ

Team Udayavani, Jun 28, 2023, 3:52 PM IST

ಶಿಥಿಲಗೊಂಡ ಕಟ್ಟಡ, ಶಿಕ್ಷಕರ ಕೊರತೆ

ಸುಬ್ರಹ್ಮಣ್ಯ: ಸರಕಾರಿ ಶಾಲೆಗೆ ಹೆಚ್ಚು ಮಕ್ಕಳನ್ನು ಕಳುಹಿಸಿ ದ್ದಲ್ಲಿ ಅಲ್ಲಿಗೆ ಪೂರಕ ಸೌಲಭ್ಯಗಳನ್ನು ನೀಡುತ್ತೇವೆ ಎನ್ನುವ ಸರಕಾರ, ಶಿಕ್ಷಣ ಇಲಾಖೆ ಶಾಲೆಯಿಂದ ಬೇಡಿಕೆ ಸಲ್ಲಿಸಿದರೂ ಈವರೆಗೆ ಈಡೇರಿಸಿಲ್ಲ.

ಸುಳ್ಯ ತಾ|ನ ಕೊಲ್ಲಮೊಗ್ರುವಿನ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡ ಸಮಸ್ಯೆ ಹಾಗೂ ಶಿಕ್ಷಕರ ಕೊರತೆ ಎದುರಾಗಿದ್ದು, ಇಲ್ಲಿನ ಸಮಸ್ಯೆ ಬಗ್ಗೆ ಸಂಬಂಧಿಸಿದವರ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.

70 ವರ್ಷ ಹಳೆಯ ಶಾಲೆ
ವಿವಿಧ ಸವಾಲುಗಳ ಮಧ್ಯೆ ಅಭಿವೃದ್ಧಿ ಹೊಂದುತ್ತಿರುವ ಕೊಲ್ಲಮೊಗ್ರುವಿನ ಬಂಗ್ಲೆ ಗುಡ್ಡೆ ಸರಕಾರಿ ಶಾಲೆಗೆ ಅಭಿವೃದ್ಧಿ ಭಾಗ್ಯ ಮಾತ್ರ ಇಂದಿಗೂ ಲಭಿಸಿಲ್ಲ. ಇಲ್ಲಿನ ಬಂಗ್ಲೆ ಗುಡ್ಡೆ ಶಾಲೆಗೆ ಸುಮಾರು 70 ವರ್ಷಗಳಾ ಗಿದ್ದು, ಇಲ್ಲಿ 1ನೇ ತರಗತಿಯಿಂದ 7ನೇ ತರಗತಿ ವರೆಗೆ ಶಿಕ್ಷಣ ನೀಡಲಾಗುತ್ತಿದೆ.

ಸರಕಾರಿ ಶಾಲೆಗಳಲ್ಲಿ ಹಿಂದೆ ಮಕ್ಕಳ ಸಂಖ್ಯೆ ಹೆಚ್ಚಿದ್ದ ಸಮಯದಲ್ಲಿ ಇಲ್ಲೂ ಮಕ್ಕಳ ಸಂಖ್ಯೆ ಹೆಚ್ಚಿತ್ತು. ಬಳಿಕ ಮಕ್ಕಳ ಸಂಖ್ಯೆ ಕುಸಿಯತೊಡಗಿ ಒಮ್ಮೆ 40ಕ್ಕೆ ಇಳಿದಿತ್ತು. ಬಳಿಕ ಶಾಲೆ, ಎಸ್‌ಡಿಎಂಸಿ, ಪೋಷಕರ ಪ್ರಯತ್ನದಿಂದ ಮಕ್ಕಳ ಸಂಖ್ಯೆ ಹೆಚ್ಚಳಗೊಂಡಿದ್ದು, ಇದೀಗ 1ರಿಂದ 7ನೇ ತರಗತಿ ವರೆಗೆ 115 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ನಲಿ-ಕಲಿ ವಿಭಾಗದಲ್ಲೇ 50ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ.

ಶಿಥಿಲ ಕಟ್ಟಡ
70 ವರ್ಷಗಳ ಹಿಂದೆ ನಿರ್ಮಾಣ ಗೊಂಡ ಶಾಲಾ ಕಟ್ಟಡದಲ್ಲೇ 4 ರಿಂದ 7ನೇ ತರಗತಿಗಳು ನಡೆಯುತ್ತಿದೆ. ಸುಣ್ಣ-ಬಣ್ಣ ಬಳಿದು ಹೊಸತರಂತೆ ಕಟ್ಟಡವನ್ನು ಅಂದಗೊಳಿಸಿದರೂ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಗೋಡೆ, ಮೇಲ್ಛಾವಣಿ, ಪೀಠೊಪಕರಣ ಶಿಥಿಲಗೊಂಡಿದೆ ಎನ್ನು ತ್ತಾರೆ ಪೋಷಕರು. ಇಲ್ಲಿ ಸುಮಾರು 10 ವರ್ಷಗಳ ಹಿಂದೆ ನಿರ್ಮಿಸಲಾದ ನಲಿ -ಕಲಿ ಕಟ್ಟಡವೂ ಶಿಥಿಲಾವಸ್ಥೆ ತಲುಪಿದ್ದು, ಮಳೆ ನೀರು ಸೋರುತ್ತಿದೆ. ಮುಂಜಾಗ್ರತೆ ದೃಷ್ಟಿಯಿಂದ ಪೋಷಕರು ಹಣ ಸಂಗ್ರ ಹಿಸಿ ಮೇಲ್ಛಾವಣಿಗೆ ಟಾರ್ಪಾಲು ಹಾಕಿಸಿ ದ್ದಾರೆ. ವಿದ್ಯುತ್‌ ಉಪಕರಣಗಳು ದುರಸ್ತಿ ಆಗಬೇಕಿದೆ.

ಶಿಕ್ಷಕರ ಕೊರತೆ
ಕಟ್ಟಡ ಸಮಸ್ಯೆ ಜತೆಗೆ ಇಲ್ಲಿ ಶಿಕ್ಷಕರ ಕೊರತೆಯೂ ಇದೆ. ಮುಖ್ಯ ಶಿಕ್ಷಕರು ಸೇರಿದಂತೆ ಮೂವರು ಸರಕಾರಿ ಶಿಕ್ಷಕರಿ ದ್ದಾರೆ. ಒಬ್ಬರು ಅತಿಥಿ ಶಿಕ್ಷಕರಿದ್ದಾರೆ. 100ಕ್ಕೂ ಅಧಿಕ ಮಕ್ಕಳಿರುವ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಇರಬೇಕು ಎಂಬ ನಿಯಮವಿದ್ದರೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಈವರೆಗೆ ಆಗಿಲ್ಲ. ಕಳೆದ ವರ್ಷ ಪೋಷಕರೇ ಹಣ ಸಂಗ್ರಹಿಸಿ ನಾಲ್ವರು ಶಿಕ್ಷಕರನ್ನು ನೇಮಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು.

ಅನುದಾನ ಬಂದಿಲ್ಲ
ನಲಿ-ಕಲಿ ವಿಭಾಗದಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿರುವ ಕಾರಣ ಹಾಗೂ ಈಗಿರುವ ನಲಿ-ಕಲಿ ಕಟ್ಟಡ ಶಿಥಿಲಾವಸ್ಥೆಗೆ ತಲುಪಿರುವುದರಿಂದ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ ಸರಕಾರದಿಂದ ಅನುದಾನವೇ ಬಂದಿಲ್ಲ. ದಾನಿಗಳು, ಪೋಷಕರಿಂದ ಸಂಗ್ರಹಿಸಿದ 12 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ ಎನ್ನುತ್ತಾರೆ ಎಸ್‌ಡಿಎಂಸಿ ಅಧ್ಯಕ್ಷರು. ಈ ಮೊದಲು ರಂಗ ಮಂದಿರ ನಿರ್ಮಾಣದ ವೇಳೆಯೂ ಸರಕಾರದಿಂದ 3.95 ಲಕ್ಷ ರೂ. ಅನುದಾನ ಮಾತ್ರ ಬಂದಿತ್ತು. ಶಾಲೆಯವರ ಮನವಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಶಾಲೆಯ ಅಭಿವೃದ್ಧಿಗೆ ಸರಕಾರ ಅನುದಾನ ಒದಗಿಸಿ ಅಭಿ ವೃದ್ಧಿಗೆ ಸ್ಪಂದಿಸಲಿ ಹಾಗೂ ಹೆಚ್ಚುವರಿ ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊ ಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.

ಕೂಡಲೇ ಕ್ರಮ ಕೈಗೊಳ್ಳಲಿ
ಬಂಗ್ಲೆಗುಡ್ಡೆ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಹೊಸ ಕಟ್ಟ ಡದ ಆವಶ್ಯಕತೆ ಇದೆ. ಇಲ್ಲಿಗೆ ಇನ್ನೂ ಮೂವರು ಶಿಕ್ಷಕರ ಅಗತ್ಯ ವಿದ್ದು, ಇವುಗಳ ಬಗ್ಗೆ ಇಲಾಖೆ ಕೂಡಲೇ ಕ್ರಮಕೈಗೊಳ್ಳಲಿ.
-ಬಾಲಸುಬ್ರಹ್ಮಣ್ಯ ಕೊಲ್ಲಮೊಗ್ರು,
ಎಸ್‌ಡಿಎಂಸಿ ಅಧ್ಯಕ್ಷರು

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.