ಶಿಥಿಲಾವಸ್ಥೆಯಲ್ಲಿ ಮಾಡದಗುಡ್ಡೆ ಅಂಗನವಾಡಿ ಕೇಂದ್ರ

ಕಡತದಲ್ಲೇ ಬಾಕಿ ಉಳಿದ ನಿರ್ಮಾಣ ಕಾರ್ಯ

Team Udayavani, Dec 12, 2019, 5:23 AM IST

sx-13

ಬೋಳಿಯಾರ್‌: ಮುರಿದು ಬೀಳುವ ಹಂತದಲ್ಲಿರುವ ಛಾವಣಿ, ನೇತಾಡುತ್ತಿರುವ ಬಾಗಿಲು ಇದು ಬೋಳಿಯಾರು ಮಾಡದಗುಡ್ಡೆ ಅಂಗನವಾಡಿ ಕೇಂದ್ರದ ಕಟ್ಟಡದ ದುರಾವಸ್ಥೆ. ಪುಟ್ಟ ಪುಟ್ಟ ಕಂದಮ್ಮಗಳು ಯಾವುದೇ ಪರಿವಿಲ್ಲದೆ ಈ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿ ಹೆಜ್ಜೆ ಹಾಕಿ ಆಟವಾಡುತ್ತಿದ್ದರೆ, ಕಟ್ಟಡ ನಿರ್ಮಾಣಕ್ಕೆ ಪಂಚಾಯತ್‌ ಅಧಿಕಾರಿಗಳಿಗೆ ಅಂಗನವಾಡಿ ಸಹಾಯಕಿಯರು ಮತ್ತು ಮಕ್ಕಳ ಹೆತ್ತವರು ಮಾಡಿದ ಮನವಿ ಕೇವಲ ಕಡತದಲ್ಲಿಯೇ ಧೂಳು ತಿನ್ನುತ್ತಿದೆ.

ಮಂಗಳೂರು ತಾಲೂಕಿನ ಬೋಳಿಯಾರ್‌ ಗ್ರಾ.ಪಂ. ವ್ಯಾಪ್ತಿಯ ಮಾಡದಗುಡ್ಡೆ ಅಂಗನವಾಡಿ ಕೇಂದ್ರ ಪಂಚಾಯತ್‌ ಕಚೇರಿಯ ಬದಿಯಲ್ಲೇ ಇದ್ದರೂ ಅಂಗನವಾಡಿ ಕೇಂದ್ರದ ದುರವಸ್ಥೆ ಪಂಚಾಯತ್‌ನ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ದಿನಾಲೂ ಕಣ್ಣಿಗೆ ಕಂಡರೂ ಕೇಂದ್ರಕ್ಕೆ ನೂತನ ಕಟ್ಟಡ ಕಲ್ಪಿಸುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎನ್ನುತ್ತಾರೆ ಅಂಗನವಾಡಿ ಕೇಂದ್ರದ ಮಕ್ಕಳ ಹೆತ್ತವರು.

6 ವರ್ಷದಿಂದ ಪಂಚಾಯತ್‌ಗೆ ಮನವಿ
ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಆರು ವರ್ಷಗಳಿಂದ ಅಂಗನವಾಡಿ ಸಹಾಯಕಿಯರು ಮತ್ತು ಮಕ್ಕಳ ಹೆತ್ತವರು ಪ್ರತೀ ಗ್ರಾಮ ಸಭೆಯಲ್ಲಿ ಮನವಿ ಮಾಡಿ ಒತ್ತಾಯಿಸುತ್ತಿದ್ದಾರೆ. ಆದರೆ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಸಭೆಯಲ್ಲಿ ನಿರ್ಣಯ ತೆಗೆದುಕೊಂಡರೂ ಯಾವುದೇ ಫಲಿತಾಂಶ ಲಭ್ಯವಾಗಿಲ್ಲ. ಮನವಿ ಸಲ್ಲಿಸಿದರೂ ಪಂಚಾಯತ್‌ ಸ್ಪಂದಿಸದೇ ಇರುವಾಗ ಹಿಂದಿನ ಗ್ರಾಮಸಭೆಯಲ್ಲಿ ಮನವಿ ಸಲ್ಲಿಸುವುದನ್ನೇ ಕೈಬಿಡಲಾಗಿದೆ ಎನ್ನುತ್ತಾರೆ ಅಂಗನವಾಡಿ ಕೇಂದ್ರದ ಮಕ್ಕಳ ಹೆತ್ತವರು.

ಮಳೆಗಾಲದಲ್ಲಿ ಹಾವುಗಳ ಕಾಟ
ಒಂದೆಡೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿ ಮಕ್ಕಳ ದೈನಂದಿನ ಕಲಿಕೆ ನಡೆದರೆ ಮಳೆಗಾಲ ಬಂತೆಂದರೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳು ಬರಲು ಹೆದರುವ ಸ್ಥಿತಿ ನಿರ್ಮಾಣವಾಗುತ್ತದೆ. ಮಳೆ ನೀರಿಗೆ ಅಂಗನವಾಡಿ ಕೇಂದ್ರ ಜಲಾವೃತಗೊಂಡರೆ ಮಕ್ಕಳಿಗೆ ಪಂಚಾಯತ್‌ ಕಚೇರಿಗೆ ಸ್ಥಳಾಂತರಗೊಳ್ಳುತ್ತದೆ. ಇನ್ನೊಂದೆಡೆ ಮುರಿದಿರುವ ಕಿಟಕಿಗಳ ಎಡೆಯಿಂದ ಹಾವುಗಳು ಅಂಗನವಾಡಿ ಕೇಂದ್ರದ ಒಳಗೆ ನುಸುಳುತ್ತವೆ. ಹಲವಾರು ಬಾರಿ ಮಕ್ಕಳು ಹಾವಿಗೆ ಹೆದರಿ ಹೊರ ಓಡಿ ಬಂದಿರುವ ಘಟನೆ ಸಂಭವಿಸಿದ್ದುಂಟು. ಹಾವಿನ ಭಯದಿಂದ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬರಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೆಲವು ಹೆತ್ತವರು ಹಾವು ಬರುವ ಕಾರಣದಿಂದ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ಕಳುಹಿಸುತ್ತಿಲ್ಲ ಎನ್ನುತ್ತಾರೆ ಸ್ತ್ರೀ ಶಕ್ತಿ ಸಂಘದಲ್ಲಿ ಸಕ್ರಿಯವಾಗಿರುವ ಆಸಿಯಾ ಅವರು. ನಾವು ಹೆಚ್ಚಾಗಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು ಹಲವು ಬಾರಿ ಹಾವುಗಳನ್ನು ಕೇಂದ್ರದಿಂದ ಹೊರ ಓಡಿಸಲು ಸ್ಥಳೀಯರಿಗೆ ಮೊರೆ ಹೋಗಿದ್ದೇವೆ ಎನ್ನುತ್ತಾರೆ.

ಕುಸಿಯುವ ಹಂತದಲ್ಲಿರುವ ಬಾಗಿಲು
ಸುಮಾರು 25ಕ್ಕೂ ಹೆಚ್ಚು ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸಹಿತ ಇಬ್ಬರು ಕಾರ್ಯನಿರ್ವಹಿಸುತ್ತಾರೆ.

ಸ್ಥಳೀಯ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುವಾಗ ಮಕ್ಕಳನ್ನು ಆಟವಾಡಿಸುತ್ತಿದ್ದರೆ, ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಇಬ್ಬರೇ ಇರುವ ಸಂದರ್ಭದಲ್ಲಿ ಮಕ್ಕಳು ಅವರಿಂದ ತಪ್ಪಿಸಿಕೊಂಡು ಮುರಿದು ಬೀಳುವ ಹಂತದಲ್ಲಿರುವ ಬಾಗಿಲು ಮತ್ತು ದಾರಂದದ ಎಡೆಯಲ್ಲಿ ಆಟವಾಡುತ್ತಿದ್ದು ಅಪಾಯಕಾರಿಯಾಗಿರುವ ಈ ಅಂಗನವಾಡಿಗೆ ಸುಸಜ್ಜಿತ ಕಟ್ಟಡವಾದರೆ ಮಾತ್ರ ಮಕ್ಕಳು ಸುರಕ್ಷಿತವಾಗಿರಲು ಸಾಧ್ಯ. ಉದ್ಯೋಗ ಖಾತ್ರಿ ಯೋಜನೆಯಡಿ ಈ ಕಟ್ಟಡಕ್ಕೆ ಅನುದಾನ ನೀಡಲು ಪಂಚಾಯತ್‌ಗೆ ಅಧಿಕಾರವಿದ್ದು, ಶೀಘ್ರವೇ ಅನುದಾನ ಬಿಡುಗಡೆ ಮಾಡಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಬೇಕಾಗಿದೆ.

ನೂತನ ಕಟ್ಟಡದಿಂದ ಸಮಸ್ಯೆ ಪರಿಹಾರ
ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಕಟ್ಟಡದೊಳಗೆ ಹಾವು, ಇಲಿಗಳ ಕಾಟ ಹೆಚ್ಚಿದೆ. ಮಳೆಗಾಲದಲ್ಲಿ ನೀರು ಒಳಬರುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ನೂತನ ಕಟ್ಟಡ ನಿರ್ಮಾಣವಾದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ
– ರಂಜಿನಿ ಬೋಳಿಯಾರ್‌, ಸ್ತ್ರೀ ಶಕ್ತಿ ಸಂಘದ ಸದಸ್ಯೆ

ತಾಂತ್ರಿಕ ತೊಂದರೆಯಿಂದ ಅನುದಾನ ದೊರೆತಿಲ್ಲ
ಬೋಳಿಯಾರ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾಡದಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಕೆಲವೊಂದು ತಾಂತ್ರಿಕ ತೊಂದರೆಯಿಂದಾಗಿ ಅನುದಾನ ಹೊಂದಿಸಲು ಸಾಧ್ಯವಾಗಿಲ್ಲ. ಮಾಡದಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು.
– ಸತೀಶ್‌ ಆಚಾರ್ಯ, ಅಧ್ಯಕ್ಷರು, ಬೋಳಿಯಾರು ಗ್ರಾ.ಪಂ.

ಅಧಿಕಾರಿಗಳ ಸ್ಪಂದನೆ ಸಿಗಬೇಕಿದೆ
ಅಂಗನವಾಡಿ ಕಟ್ಟಡ ದುರಸ್ತಿಗೆ ತಾ.ಪಂ.ನಿಂದ ಅನುದಾನ ಬಿಡುಗಡೆಯಾಗಿದೆ. ಈ ಹಿಂದೆಯೂ ಕಟ್ಟಡದ ಛಾವಣಿ ದುರಸ್ತಿ ನಡೆದಿತ್ತು. ಆದರೆ ಇಡೀ ಕಟ್ಟಡವೇ ಶಿಥಿಲಾವಸ್ಥೆಯಲ್ಲಿರುವುದರಿಂದ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾದರೆ ಮಾತ್ರ ಸಮಸ್ಯೆ ಪರಿಹಾರವಾಗಲು ಸಾಧ್ಯ.
– ಕೆ.ಪಿ. ಪೂರ್ಣಿಮಾ, ಅಂಗನವಾಡಿ ಶಿಕ್ಷಕಿ

– ವಸಂತ್‌ ಎನ್‌. ಕೊಣಾಜೆ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.