ಶಿಥಿಲಗೊಂಡಿದೆ ತೊಡಿಕಾನ ಕಿರು ಸಂಪರ್ಕ ಸೇತುವೆ 


Team Udayavani, Oct 27, 2018, 10:45 AM IST

27-october-4.gif

ಅರಂತೋಡು: ತೊಡಿಕಾನ ಶಾಲಾ ಬಳಿ ಮತ್ಸ್ಯ ತೀರ್ಥ ಹೊಳೆಗೆ ನಿರ್ಮಿಸಿದ ಹಳೆಯ ಕಿರು ಸೇತುವೆ ಶಿಥಿಲಗೊಂಡಿದ್ದು, ಈ ಮೂಲಕ ಸಂಚರಿಸುವವರು ಸಂಪರ್ಕ ಕಡಿತದ ಭೀತಿ ಎದುರಿಸುತ್ತಿದ್ದಾರೆ.

ಮತ್ಸ್ಯತೀರ್ಥ ಹೊಳೆಗೆ ಈ ಜಾಗದಲ್ಲಿ ಸೇತುವೆ ನಿರ್ಮಾಣವಾಗುವುದಕ್ಕಿಂತ ಮೊದಲು ತೊಡಿಕಾನ ಶಾಲೆಗೆ ತೆರಳುವ ಮಕ್ಕಳು, ಸಾರ್ವಜನಿಕರು ಅಡಿಕೆ ಮರದ ಪಾಲದ ಮೂಲಕ ನಡೆದುಕೊಂಡು ಹೋಗುತ್ತಿದ್ದರು. 35 ವರ್ಷಗಳ ಹಿಂದೆ ಲೋಕೋಪಯೋಗಿ ಇಲಾಖೆಯಿಂದ ಶಾಲಾ ಬಳಿಯ ಮತ್ಸ್ಯತೀರ್ಥ ಹೊಳೆಗೆ ಸೇತುವೆ ನಿರ್ಮಾಣ ಮಾಡಲಾಗಿತ್ತು. ಬಳಿಕ ಸಾರ್ವಜನಿಕರು ಅದರ ಪ್ರಯೋಜನವನ್ನು ಪಡೆದಿದ್ದರು. ಮುಖ್ಯವಾಗಿ ಈ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಾಲೆ ಕಾಲೇಜುಗಳಿಗೆ ತೆರಳುತ್ತಿದ್ದು, ಅವರಿಗೆ ವರದಾನವಾಗಿ ಪರಿಣಮಿಸಿತ್ತು.

ಮುಖ್ಯ ಸಂಪರ್ಕ ಸೇತುವೆ
ಸುಮಾರು ನಾಲ್ಕೈದು ವರ್ಷಗಳ ಹಿಂದೆ ಈ ಸೇತುವೆ ಮುಖ್ಯ ಸೇತುವೆಯಾಗಿತ್ತು. ತೊಡಿಕಾನದ ಕುಂಟುಕಾಡು, ಬಾಳೆಕಜೆ, ಚಿಪ್ಪುರು ಗುಡ್ಡೆ ಕುತ್ತಮೊಟ್ಟೆ ಭಾಗದ ಜನರು ಈ ಸೇತುವೆಯನ್ನೆ ಅವಲಂಬಿಸಿದ್ದರು. ಸಾರ್ವಜನಿಕರು ವಾಹನ ಸಂಚಾರಕ್ಕೆ ಹೊಳೆಯ ಕೆಳಭಾಗದ ಸೇತುವೆಯನ್ನೆ ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದಾರೆ. 

ಶಿಥಿಲಹಂತದಲ್ಲಿರುವ ಈ ಸೇತುವೆಯ ಕಂಬವನ್ನು (μಲ್ಲರ್‌) ಕಗ್ಗಲ್ಲಿನಿಂದ ನಿರ್ಮಿಸಲಾಗಿದೆ. ಆದರೆ ಸೇತುವೆಯ ಕಂಬದ ತಳ ಜೇಡಿ ಮಣ್ಣಿನಿಂದ ಕೋಡಿದೆ. ಈ ವರ್ಷ ಸುರಿದ ಭಾರೀ ಮಳೆಗೆ ನೀರಲ್ಲಿ ಕೊಚ್ಚಿಕೊಂಡು ಬಂದ ಮರದ ದಿಮ್ಮಿಗಳು ಸೇತುವೆಗೆ ಬಡಿದ ಪರಿಣಾಮ ಸೇತುವೆಗೆ ಭಾಗಶಃ ಹಾನಿಯಾಗಿದೆ. ಇದೀಗ ಸೇತುವೆ ಕುಸಿಯುವ ಭೀತಿಯಲ್ಲಿದೆ.

ವಾಹನ ಸಂಚಾರ ನಿರ್ಬಂಧ
ಸೇತುವೆಯು ಶಿಥಿಲಗೊಂಡಿರುವ ವಿಚಾರವನ್ನು ಆರಂತೋಡು ಗ್ರಾ.ಪಂ. ಗಮನಕ್ಕೆ ತರಲಾಗಿತ್ತು. ಈ ಹಿನ್ನಲೆಯಲ್ಲಿ ಗ್ರಾ.ಪಂ.ವತಿಯಿಂದ ಸೇತುವೆಯ ಮೇಲೆ ವಾಹನಗಳು ಸಂಚಾರಿಸಿದಂತೆ ಕಬ್ಬಿಣದ ಪೈಪ್‌ ಮೂಲಕ ತಡೆ ಬೇಲಿ ನಿರ್ಮಿಸಲಾಗಿದ್ದು, ದ್ವಿಚಕ್ರ ಸವಾರರಿಗೆ ಮಾತ್ರ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಹೂಳು ತುಂಬಿದ ಹೊಳೆ
ಹೊಳೆಯಲ್ಲಿ ಕೆಲವೆಡೆ ಹೂಳು ತುಂಬಿಕೊಂಡಿರುವ ಕಾರಣ ಹೊಳೆ ಹರಿಯುವ ಪಥ ಸ್ವಲ್ಪ ಬದಲಾಗಿದೆ. ಅಲ್ಲದೆ ಹೊಳೆಯ ಬದಿ ದಟ್ಟ ಪೊದೆಗಳು ಬೆಳೆದುಕೊಂಡಿರುವುದರಿಂದ ಮಳೆಗಾದಲ್ಲಿ ಹೊಳೆ ನೀರು ಸಮರ್ಕವಾಗಿ ಹರಿಯದೇ ಸೇತುವೆಯ ಕಂಬಗಳು ಹಾನಿಗೊಳ್ಳಲು ಕಾರಣವಾಗಿದೆ ಎನ್ನಲಾಗಿದೆ.

ಏನು ಮಾಡಬಹುದು?
ಸೇತುವೆಯ ಸ್ಲ್ಯಾಬ್‌ಗಳು ಸಮರ್ಪಕವಾಗಿದ್ದು, ಯಾವುದೇ ದುರಸ್ತಿ ಮಾಡುವ ಅಗತ್ಯ ಇಲ್ಲ. ಆದರೆ ಪಿಲ್ಲರ್‌ ಮಾತ್ರ ಕುಸಿಯುವ ಹಂತದಲ್ಲಿದೆ. ಇದಕ್ಕೆ ಪರಿಹಾರವಾಗಿ ಹಾನಿಯಾಗಿರುವ ಪಿಲ್ಲರ್‌ ಸುತ್ತ ಒಂದುವರೆ ಮೀಟರ್‌ನಷ್ಟು ಎತ್ತರಕ್ಕೆ ಕಾಂಕ್ರೀಟ್‌ ಹಾಕಿ ಪಿಲ್ಲರನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಡುತ್ತಾರೆ.

ಪತ್ರ ಬರೆಯಲಾಗುವುದು
ತೊಡಿಕಾನ ಶಾಲಾ ಮಕ್ಕಳು ಹೆಚ್ಚಾಗಿ ಸಂಚರಿಸುವ ಸೇತುವೆ ಶಿಥಿಲಗೊಂಡಿರುವ ಬಗ್ಗೆ ನಮಗೆ ದೂರು ಬಂದಿವೆ. ಸೇತುವೆಯಲ್ಲಿ ಬೈಕನ್ನು ಹೊರತುಪಡಿಸಿ ಇತರ ವಾಹನ ಸಂಚರಿಸದಂತೆ ತಡೆಬೇಲಿ ಹಾಕಲಾಗಿದೆ. ಈ ಸೇತುವೆಯ ದುರಸ್ತಿಗಾಗಿ ಅಥವಾ ಸೇತುವೆ ನಿರ್ಮಾಣಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ಗ್ರಾ.ಪಂ. ವತಿಯಿಂದ ಪತ್ರ ಬರೆಯಲಾಗುವುದು.
– ಜಯಪ್ರಕಾಶ್‌ ಪಿ.ಡಿ.ಒ.
ಅರಂತೋಡು ಗ್ರಾ.ಪಂ.

ಗಮನಕ್ಕೆ ತರಲಾಗಿದೆ
ಸೇತುವೆ ಶಿಥಿಲಗೊಂಡಿರುವ ಬಗ್ಗೆ ಈಗಾಗಲೇ ಸ್ಥಳೀಯ ಗ್ರಾ.ಪಂ.ನ ಗಮನಕ್ಕೆ ತರಲಾಗಿದೆ. ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಇಲಾಖೆಗೆ ಎಸ್‌ಡಿಎಂಸಿ ವತಿಯಿಂದ ಪತ್ರ ಬರೆಯಲಾಗುವುದು.
– ತಿಮ್ಮಯ್ಯ ಮೆತ್ತಡ್ಕ
ಎಸ್‌ಡಿಎಂಸಿ ಅಧ್ಯಕ್ಷ
ಹಿ.ಪ್ರಾ. ಶಾಲೆ ತೊಡಿಕಾನ

 ದುರಸ್ತಿ ಕಾರ್ಯ ಆಗಿಲ್ಲ
ಈ ಸೇತುವೆಯ ದುರಸ್ತಿ ಕಾರ್ಯವನ್ನು ತಡಮಾಡದೇ ತತ್‌ಕ್ಷಣ ಆರಂಭಿಸಬೇಕಾಗಿದೆ. ಇದು ತುಂಬಾ ಹಳೆಯ ಸೇತುವೆ ಆಗಿದೆ. ಈ ಸೇತುವೆ ನಿರ್ಮಾಣವಾದ ಬಳಿಕ ಒಮ್ಮೆಯೂ ದುರಸ್ತಿ ಕಾರ್ಯ ನಡೆದಿಲ್ಲ. ಸಂಬಂಧಪಟ್ಟವರು ಶೀಘ್ರ ಈ ಕುರಿತು ಕ್ರಮಕೈಗೊಳ್ಳಬೇಕಾಗಿದೆ.
ವಸಂತ ಭಟ್‌ ತೊಡಿಕಾನ
  ಸ್ಥಳೀಯರು

 ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.