ಮಂಗಳೂರು-ಹೊಸದಿಲ್ಲಿ ಮಧ್ಯೆ ಮತ್ತೆ ನೇರ ವಿಮಾನ
Team Udayavani, Jul 20, 2019, 5:44 AM IST
ಮಂಗಳೂರು: ಮಂಗಳೂರಿನಿಂದ ಹೊಸದಿಲ್ಲಿಗೆ ನೇರ ಸಂಪರ್ಕ ಕಲ್ಪಿಸುವ ಸ್ಪೈಸ್ ಜೆಟ್ ವಿಮಾನ ಯಾನ ಆ.4ರಿಂದ ಆರಂಭವಾಗಲಿದೆ. ಕೆಲವು ತಿಂಗಳಿನಿಂದ ಸ್ಥಗಿತವಾಗಿದ್ದ ಮಂಗಳೂರು-ಹೊಸದಿಲ್ಲಿ ನೇರ ವಿಮಾನ ಸೇವೆಗೆ ಮರುಜೀವ ಸಿಗಲಿದೆ.
ಸದ್ಯದ ಮಾಹಿತಿ ಪ್ರಕಾರ ಸ್ಪೈಸ್ಜೆಟ್ನ ಒಂದು ವಿಮಾನ ಮಂಗಳೂರು-ಹೊಸದಿಲ್ಲಿ ಮಧ್ಯೆ ಸಂಚರಿಸಲಿದೆ. ಆ.4ರಿಂದ ಪ್ರತೀದಿನ ಬೆಳಗ್ಗೆ 6.15ಕ್ಕೆ ಮಂಗಳೂರಿನಿಂದ ಹೊರಡುವ ಈ ವಿಮಾನ ಬೆಳಗ್ಗೆ 8.55ಕ್ಕೆ ಹೊಸದಿಲ್ಲಿ ತಲುಪಲಿದೆ. ಪ್ರತೀ ದಿನ ರಾತ್ರಿ 8.30ಕ್ಕೆ ಹೊಸದಿಲ್ಲಿಯಿಂದ ಹೊರಡುವ ವಿಮಾನ ರಾತ್ರಿ 11.15ಕ್ಕೆ ಮಂಗಳೂರು ತಲುಪಲಿದೆ. ಮರುದಿನ ಬೆಳಗ್ಗೆ ಮತ್ತೆ ಸಂಚರಿಸಲಿದೆ.
ರಾಜಧಾನಿ ಹೊಸದಿಲ್ಲಿಗೆ ಮಂಗಳೂರಿನಿಂದ ಒಂದು ಜೆಟ್ ಏರ್ವೆàಸ್ ಈ ಹಿಂದೆ ಸಂಚರಿಸುತ್ತಿತ್ತು. ಆದರೆ ಕೆಲವು ತಿಂಗಳಿನಿಂದ ಆ ವಿಮಾನವೂ ತನ್ನ ಸೇವೆಯನ್ನು ಸ್ಥಗಿತಗೊಳಿಸಿತ್ತು. ಪರಿಣಾಮವಾಗಿ ಮಂಗಳೂರಿನಿಂದ ಹೊಸದಿಲ್ಲಿಗೆ ನೇರ ವಿಮಾನ ಸೇವೆಯೇ ಇರಲಿಲ್ಲ. ದಿಲ್ಲಿಗೆ ಹೋಗಬೇಕಾದರೆ ಬೆಂಗಳೂರು ಅಥವಾ ಮುಂಬಯಿಗೆ ಹೋಗಿ ದಿಲ್ಲಿಗೆ ತೆರಳಬೇಕಾಗಿತ್ತು. ಹೀಗಾಗಿ ಹೊಸದಿಲ್ಲಿಗೆ ನೇರವಿಮಾನ ಸೇವೆ ಮರು ಆರಂಭಿಸುವ ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಸಲ್ಲಿಸಿದ್ದರು. ಸ್ಪೈಸ್ಜೆಟ್ ಮಂಗಳೂರು-ಹೊಸದಿಲ್ಲಿ ವಿಮಾನ ಸೇವೆಯನ್ನು ಆರಂಭಿಸಲಿದೆ.
ಸದ್ಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್, ಇಂಡಿಗೋ, ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗಳು ಮಂಗಳೂರಿನಿಂದ ಮುಂಬಯಿ, ಬೆಂಗಳೂರು, ಚೆನ್ನೈ, ಹೈದರಾಬಾದ್, ದುಬಾೖ, ದೋಹಾ, ಕತಾರ್, ಶಾರ್ಜಾ, ಬೆಹರೈನ್, ಕುವೈಟ್, ಮಸ್ಕತ್ಗೆ ಸೇವೆ ನೀಡುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ