ಶಿಸ್ತುಬದ್ಧ ಜೀವನ ವ್ಯಕ್ತಿತ್ವದ ಪ್ರತಿಬಿಂಬ:ಶುಭಾ ಬಾಳಿಗ
Team Udayavani, Jul 19, 2017, 2:30 AM IST
ಕೊಡಿಯಾಲ್ಬೈಲ್: ನಾಯಕ ಸ್ಥಾನದಲ್ಲಿರುವವರು ಆತ್ಮ ವಿಶ್ವಾಸ, ಸಕಾರಾತ್ಮಕ ಚಿಂತನೆ, ಶಿಸ್ತುಬದ್ಧತೆ, ಪ್ರಾಮಾಣಿಕ ಸನ್ನಡತೆಗಳಿಂದ ಸಾಂಘಿಕವಾಗಿ ಶ್ರಮಿಸಬಲ್ಲ ವ್ಯಕ್ತಿತ್ವವನ್ನು ಹೊಂದಿರಬೇಕು. ಶಿಸ್ತುಬದ್ಧ ಜೀವನ ವ್ಯಕ್ತಿತ್ವದ ಪ್ರತಿಬಿಂಬವಾಗಿದೆ ಎಂದು ನ್ಯಾಯವಾದಿ ಶುಭಾ ಬಾಳಿಗ ಹೇಳಿದರು.
ಕೆನರಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನ ಕಾರ್ಯ ಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ನಾಯಕರು ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಸಾಮರ್ಥ್ಯವನ್ನು ಅನಾವರಣಗೊಳಿಸುವ ಮೂಲಕ ಕಾಲೇಜಿನ ಘನತೆಯನ್ನು ಎತ್ತಿಹಿಡಿಯಲು ಶ್ರಮಿಸಬೇಕು ಎಂದು ಹೇಳಿದರು.ಸೇವಾ ಮನೋಭಾವವನ್ನು ಮೈಗೂಡಿಸಿಕೊಂಡು ದುಡಿಯ ಬಲ್ಲವರೇ ಉತ್ತಮ ನೇತಾರ ರಾಗಬಲ್ಲರು ಎಂದು ಪ್ರಾಂಶುಪಾಲೆ ಡಾ| ಕೆ.ವಿ. ಮಾಲಿನಿ ಹೇಳಿದರು. ಕಾಲೇಜಿನ ಸಂಚಾಲಕ ಮಾರೂರು ಸುಧೀರ್ ಪೈ ಅತಿಥಿಯಾಗಿದ್ದರು. ವಿದ್ಯಾರ್ಥಿ ಕ್ಷೇಮಪಾಲಕಿ ಪ್ರೊ| ಸಂಧ್ಯಾ ಬಿ. ಚುನಾಯಿತ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿ ಕ್ಷೇಮಪಾಲಕಿ ಡಾ| ಭುವನಾ ರಾಮಚಂದ್ರನ್ ಉಪಸ್ಥಿತರಿದ್ದರು. ಅನಸೂಯಾ ಭಾಗವತ್ ವಂದಿಸಿದರು.ವಿದ್ಯಾರ್ಥಿನಿ ದೀûಾ ಕಾರ್ಯ ಕ್ರಮವನ್ನು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್