ಕಾಲುದಾರಿ ಕಸಿದ ಭೂ ಕುಸಿತ 


Team Udayavani, Sep 29, 2018, 11:25 AM IST

29-sepctember-5.gif

ಉಪ್ಪಿನಂಗಡಿ: ಈ ಬಾರಿಯ ಭಾರೀ ಮಳೆಗೆ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯ ಆದರ್ಶನಗರ ಜನತಾ ಕಾಲನಿಯ ಹಲವು ಕಡೆ ಧರೆ ಕುಸಿತಕ್ಕೊಳಗಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಇಲ್ಲಿನ ಸಾರ್ವಜನಿಕ ಕಾಲುದಾರಿಯೊಂದು ಕುಸಿದ ಪರಿಣಾಮ ಇದರಿಂದ ಸುಮಾರು ಮೂವತ್ತು ಕುಟುಂಬಗಳಿಗೆ ಸಂಚಾರಕ್ಕೆ ತೊಡಕಾಗಿದೆ. ಶಾಸಕರು, ಪಂಚಾಯತ್‌ ಪ್ರತಿನಿಧಿಗಳು ತಿಂಗಳುಗಳ ಹಿಂದೆಯೇ ಇದನ್ನು ಬಂದು ವೀಕ್ಷಿಸಿದ್ದರಾದರೂ, ಸ್ಪಂದನೆ ಮಾತ್ರ ಯಾರಿಂದಲೂ ದೊರೆತ್ತಿಲ್ಲ.

ಆದರ್ಶನಗರ ಜನತಾ ಕಾಲನಿಯು ಗುಡ್ಡದ ಮೇಲಿದ್ದು, ಈ ಬಾರಿ ಮಳೆಗಾಲದಲ್ಲಿ ಇಲ್ಲಿಯೂ ಹಲವು ಕಡೆ ಗುಡ್ಡ ಕುಸಿತಕ್ಕೊಳಗಾಗಿದೆ. ಮತ್ತೆಯೂ ಈ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದರೆ, ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪವನ್ನು ಇಲ್ಲಿಯೂ ಕಾಣಬಹುದಿತ್ತು. ಆದರೆ ಮಳೆ ಮತ್ತೆ ಬಿಡುವು ಪಡೆದಿದ್ದರಿಂದ ದೊಡ್ಡ ಮಟ್ಟದ ಅನಾಹುತ ಇಲ್ಲಿ ಸಂಭವಿಸಲಿಲ್ಲ. ಆದರೆ ಇದಕ್ಕೆ ಸುಮಾರು 15 ಮನೆಗಳಿಗೆ ಗುಡ್ಡ ಜರಿದು ಹಾನಿಗೀಡಾಗಿವೆ. ಸುಮಾರು ಮೂವತ್ತು ಕುಟುಂಬಗಳಿಗಿದ್ದ ಏಕೈಕ ಕಾಲು ದಾರಿಯೊಂದು ಕುಸಿದು ಹೋಗಿದೆ.

ಅಪಾಯದ ದಾರಿ
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಸ್ಥಳೀಯರಾದ ಈಸುಬು, ಆದರ್ಶನಗರ ಜನತಾ ಕಾಲನಿಯಲ್ಲಿ ಈ ಬಾರಿಯ ಮಳೆಗಾಲದಲ್ಲಿ ಗುಡ್ಡ ಕುಸಿತದಿಂದಾಗಿ ಸುಮಾರು 15 ಮನೆಗಳು ಹಾನಿಗೊಂಡಿವೆ. ಇದರೊಂದಿಗೆ ಸುಮಾರು 30 ಮನೆಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಕಾಲುದಾರಿಯೂ ಕುಸಿತಗೊಂಡಿದೆ. ಅಳಿದುಳಿದ ಕಾಲು ದಾರಿಯಲ್ಲಿ ಜೋತಾಡುತ್ತಿರುವ ಹಗ್ಗದ ಮೇಲೆ ನಡೆಯುವಂತೆ ನಾವು ನಡೆಯಬೇಕಾದ ಸ್ಥಿತಿಯಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಈ ಕಾಲುದಾರಿಯನ್ನಾದರೂ ಸರಿಪಡಿಸಿಕೊಡಿ ಎಂದು 34ನೇ ನೆಕ್ಕಿಲಾಡಿ ಗ್ರಾ.ಪಂ. ಗೆ ಮನವಿ ಮಾಡಿದರೂ ಅವರಿಂದ ಸ್ಪಂದನೆಗೆ ಬದಲು ನಮ್ಮಲ್ಲಿ ಹಣವಿಲ್ಲ ಎನ್ನುವ ಉತ್ತರ ಬರುತ್ತಿದೆ. ಈ ಭಾಗದಲ್ಲಿ ಹಾನಿಯಾದ ಸಂದರ್ಭಜನಪ್ರತಿನಿಧಿಗಳು ವೀಕ್ಷಿಸಿದ್ದರೂ, ಮತ್ತೆ ಅವರಿಂದ ಯಾವ ಸ್ಪಂದನವೂ ದೊರೆತಿಲ್ಲ. ಇದರಿಂದ ಕಾಲು ದಾರಿ ಕುಸಿದು ತಿಂಗಳು ಕಳೆದರೂ, ಇಲ್ಲಿನ ಸುಮಾರು 30 ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿ ಬದುಕುವಂತಾಗಿದೆ ಎನ್ನುತ್ತಾರೆ.

ಸಾರ್ವಜನಿಕರ ಆಕ್ರೋಶ
ಸ್ಥಳಕ್ಕೆ ಕ್ಷೇತ್ರದ ಶಾಸಕರು, ಪಂಚಾಯತ್‌ ಪ್ರತಿನಿಧಿಗಳು ಹೀಗೆ ಆಡಳಿತಗಾರರೆಲ್ಲಾ ಭೇಟಿ ನೀಡಿ ಇಲ್ಲಿನ ಸ್ಥಿತಿಯನ್ನು ಪರಿಶೀಲಿಸಿ, ಪೋಟೋ ತೆಗೆಸಿಕೊಂಡು, ಭರವಸೆ ನೀಡಿದ್ದು ಬಿಟ್ಟರೆ, ಇಲ್ಲಿನವರ ಸಮಸ್ಯೆಯನ್ನು ಪರಿಹರಿಸುವ ಕೆಲಸ ಆಗಿಲ್ಲ. ಭಾಗಶಃ ಮನೆ ಹಾನಿಗೀಡಾದ ಕೆಲವರಿಗೆ ಕಂದಾಯ ಇಲಾಖೆಯಿಂದ ಸ್ವಲ್ಪ ಪರಿಹಾರ ದೊರಕಿರುವುದು ಬಿಟ್ಟರೆ ಮತ್ತೇನೂ ಸಹಾಯವೂ ಇಲ್ಲಿನವರಿಗೆ ಸಿಕ್ಕಿಲ್ಲ. ಸುಮಾರು ಮೂವತ್ತು ಮನೆಗಳಿಗೆ ಸಂಪರ್ಕ ಸೇತುವಾಗಿದ್ದ ಕಾಲುದಾರಿಯನ್ನು ರಿಪೇರಿ ಮಾಡಿಸಿ ಇಲ್ಲಿನವರನ್ನು ಅತಂತ್ರ ಸ್ಥಿತಿಯಿಂದ ಪಾರು ಮಾಡಲು ಯಾರೂ ಮುಂದಾಗದಿರುವುದು ಜನಪ್ರತಿನಿಧಿಗಳಿಗೆ ಜನಸಾಮಾನ್ಯರ ಮೇಲೆ ಕಾಳಜಿಯಿಲ್ಲ ಎನ್ನುವುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಸಾರ್ವಜನಿಕರು ಅವಲತ್ತುಕೊಂಡಿದ್ದಾರೆ.

ಇಂಟರ್‌ ಲಾಕ್‌ ಅಳವಡಿಸಿದ ಕಾಲುದಾರಿ
ಗ್ರಾ.ಪಂ. ವತಿಯಿಂದ ಇಂಟರ್‌ಲಾಕ್‌ ಹಾಕಿ ಧರೆಯ ಮೇಲ್ಭಾಗದಲ್ಲಿ ಮಾಡಲಾಗಿರುವ ಕಾಲುದಾರಿಯು ಭಾಗಶಃ ಕುಸಿದಿದ್ದು, ಈಗ ಉಳಿದ ಒಂದೊಂದೇ ಇಂಟರ್‌ಲಾಕ್‌ ಮೇಲೆ ಜಾಗೃತೆಯಿಂದ ಹೆಜ್ಜೆಯಿಟ್ಟು ಮುಂದೆ ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಕಾಲುದಾರಿಯು ಸುಮಾರು 30 ಮನೆಗಳಿಗೆ ಸಂಚಾರ ಕಲ್ಪಿಸುತ್ತಿದ್ದು, ಈಗ ಕಾಲುದಾರಿ ಕುಸಿತದಿಂದ ಈ ಕುಟುಂಬಗಳು ಅತಂತ್ರಕ್ಕೆ ಸಿಲುಕಿವೆ. 

ಪರ್ಯಾಯ ದಾರಿ ಇಲ್ಲ
ಕುಸಿದಿರುವ ಈ ದಾರಿಯ ಮೂಲಕ ಶಾಲೆ- ಕಾಲೇಜು, ಮದರಸಾ ಮೊದಲಾದೆಡೆ ದಿನವೂ ಹಲವು ಮಕ್ಕಳು ಹೋಗುತ್ತಿದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಇನ್ನು ಅನಾರೋಗ್ಯ ಪೀಡಿತರ ಸಹಿತ ಸೊತ್ತು, ಸರಂಜಾಮುಗಳನ್ನು ಸಾಗಿಸಲು ಈ ದಾರಿಯಲ್ಲಿ ಸಾಧ್ಯವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.