ಕೊಳೆರೋಗಕ್ಕೆ 69.07 ಕೋ.ರೂ. ಪರಿಹಾರ


Team Udayavani, Dec 17, 2018, 9:17 AM IST

kole.jpg

ಮಂಗಳೂರು: ಕೊಳೆರೋಗ ಬಾಧಿತ ಅಡಿಕೆ ಕೃಷಿಕರ ನೋವಿಗೆ ಕೇಂದ್ರ ಸರಕಾರ ಸ್ಪಂದಿಸಿದ್ದು, ದ.ಕ. ಜಿಲ್ಲೆಯ 60 ಕೋ.ರೂ. ಹಾಗೂ ಉಡುಪಿಯ 9.07 ಕೋ.ರೂ. ಪ್ರಸ್ತಾವನೆಗೆ ಅಸ್ತು ಎಂದಿದೆ. ಹೀಗಾಗಿ ಅರ್ಜಿ ಸಲ್ಲಿಸಿದ ಬೆಳೆಗಾರರಿಗೆ ಪರಿಶೀಲನೆಯ ಬಳಿಕ ಎಕರೆಗೆ 6,800 ರೂ.ಗಳಷ್ಟು ಪರಿಹಾರ ದೊರೆಯಲಿದೆ. 

“ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರಿಗೆ ಪರಿ ಹಾರ ಇನ್ನೂ ದೊರೆತಿಲ್ಲ’ ಎಂದು ಶಾಸಕ ಹರೀಶ್‌ ಪೂಂಜ ಡಿ.14ರಂದು ವಿಧಾನಸಭೆಯಲ್ಲಿ ಪ್ರಶ್ನಿಸಿದ ಬೆನ್ನಿಗೇ, ಕೇಂದ್ರದಿಂದ ಬಂದ ಪರಿಹಾರ ಮೊತ್ತವನ್ನು ರಾಜ್ಯ ಸರಕಾರ ಹಂಚಿಕೆ ಮಾಡಿದೆ. 

ದ.ಕ.ದಲ್ಲಿ 33,395 ಹೆಕ್ಟೇರ್‌ ತೋಟ ಕೊಳೆರೋಗ ಬಾಧಿತವಾಗಿದ್ದು, ಎನ್‌ಡಿಆರ್‌ಎಫ್‌ ನಿಯಮಾನುಸಾರ 60 ಕೋ.ರೂ. ಪರಿಹಾರ ಒದಗಿಸುವಂತೆ ತೋಟಗಾರಿಕೆ ಇಲಾಖೆ ಸಲ್ಲಿಸಿದ ವರದಿಯ ಅನ್ವಯ ಕೇಂದ್ರವು ಪರಿಹಾರ ಪ್ಯಾಕೇಜ್‌ ಪ್ರಕಟಿಸಿದೆ. ಇದರಂತೆ ತಾಲೂಕು ಅಧಿಕಾರಿಗಳು ಪರಿಶೀಲನೆ ನಡೆಸಿದ ಹಲವು ಅರ್ಜಿ ದಾರರಿಗೆ ಶನಿವಾರ 6 ಕೋ.ರೂ.ಗಳನ್ನು ಬಿಡುಗಡೆ ಮಾಡಿದೆ. ಉಳಿದವನ್ನು ಸೋಮವಾರದಿಂದ ಹಂತ ಹಂತವಾಗಿ ಪರಿಶೀಲಿಸಿ ಬಿಡುಗಡೆ ಮಾಡಲಾಗುತ್ತದೆ. ಉಡುಪಿ ಜಿಲ್ಲೆಯಿಂದ ಸಲ್ಲಿಕೆಯಾದ 9.07 ಕೋ.ರೂ. ಪ್ರಸ್ತಾವನೆಗೂ ಒಪ್ಪಿಗೆ ದೊರೆತಿದ್ದು, ಕೆಲವು ಅರ್ಜಿಗಳ ಪರಿಶೀಲನೆ ನಡೆಸಿ, 47 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಉಳಿದವು ಸೋಮವಾರದಿಂದ ಪರಿಶೀಲನೆಯಾಗಿ ಪರಿಹಾರ ವಿತರಣೆಯಾಗಲಿದೆೆ.

ಹೊಸ “ಪರಿಹಾರ’
ಇಲ್ಲಿಯವರೆಗೆ ಪರಿಹಾರ ಹಣವು ಜಿಲ್ಲಾಡಳಿತದ ಮೂಲಕ ತಾಲೂಕುಗಳಿಗೆ ವಿತರಣೆಯಾಗುತ್ತಿತ್ತು. ಆದರೆ ಈ ಬಾರಿ “ಪರಿಹಾರ’ ತಂತ್ರಾಂಶದ ಮೂಲಕ ಫಲಾನುಭವಿಗಳ ಖಾತೆಗೆ ನೇರ ವರ್ಗಾಯಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಆಯಾ ತಾಲೂಕು ವ್ಯಾಪ್ತಿಯಲ್ಲಿ ಸಲ್ಲಿಕೆಯಾದ ಅರ್ಜಿಗಳ ಬಗ್ಗೆ ತಾ. ಪಂ. ಅಧಿಕಾರಿಗಳು ಪರಾಮರ್ಶೆ ಆರಂಭಿಸಿದ್ದಾರೆ. ಅರ್ಜಿದಾರರ ಆಧಾರ್‌, ಬ್ಯಾಂಕ್‌ ಖಾತೆ ಇತ್ಯಾದಿ ಮಾಹಿತಿಯನ್ನು “ಪರಿಹಾರ’ ತಂತ್ರಾಂಶಕ್ಕೆ ಅಪ್‌ಲೋಡ್‌ ಕೆಲಸ ಪ್ರಗತಿಯಲ್ಲಿದೆ.

ಗರಿಷ್ಠ ಪರಿಹಾರ 
2007, 2013ರ ಅನಂತರ ಈ ವರ್ಷ ದೊಡ್ಡ ಪ್ರಮಾಣದಲ್ಲಿ ಕೊಳೆರೋಗ ಬಾಧಿಸಿತ್ತು. 2007 ರಲ್ಲಿ 20,000 ಹೆ. ಪ್ರದೇಶದಲ್ಲಿ ಕೊಳೆರೋಗ ಕಾಣಿಸಿಕೊಂಡಿದ್ದು, 4.59 ಕೋ.ರೂ. ಪರಿಹಾರ ವಿತರಿಸಲಾಗಿತ್ತು. 2013ರಲ್ಲಿ ರೋಗ ಬಾಧಿತ 25,000 ಹೆಕ್ಟೇರ್‌ಗೆ 30 ಕೋ.ರೂ. ಪ್ಯಾಕೇಜ್‌ ಘೋಷಿಸಲಾಗಿತ್ತು. ಇದಕ್ಕೆ ಹೋಲಿಸಿದಾಗ ಈ ಬಾರಿ ದ.ಕ. ಜಿಲ್ಲೆಗೆ 60 ಕೋ.ರೂ. ಗರಿಷ್ಠ ಪರಿಹಾರ ಪ್ಯಾಕೇಜ್‌ ಬಿಡುಗಡೆ ಮಾಡಲಾಗಿದೆ. 

ಸಾಲದು ಈ ಪರಿಹಾರ! 
ದ.ಕ. ಜಿಲ್ಲೆಯಲ್ಲಿ 2018-19ರಲ್ಲಿ 33,595 ಹೆಕ್ಟೇರ್‌ನಲ್ಲಿ ಕೊಳೆರೋಗದಿಂದ 252 ಕೋ.ರೂ. ನಷ್ಟ ಸಂಭವಿಸಿದೆ ಎಂದು ರಾಜ್ಯ ಸರಕಾರ ಅಂದಾಜಿಸಿದೆ. ಪ್ರಸ್ತುತ ಎನ್‌ಡಿಆರ್‌ಎಫ್‌ ನಿಯಮಾನುಸಾರ ಕೇಂದ್ರದಿಂದ 60 ಕೋ.ರೂ. ಬಂದಿದೆ. ಆದರೆ ಈ ಮೊತ್ತ ಏನೇನೂ ಸಾಲದು. ಒಂದೆಕರೆಯಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಅಡಿಕೆ ಬೆಳೆಯುವ ಬೆಳೆಗಾರರಿಗೆ ಈಗ ಕೇವಲ 6,800 ರೂ. ಮಾತ್ರ ಪರಿಹಾರ ಸಿಗಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಇನ್ನಷ್ಟು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎನ್ನುವುದು ಬೆಳೆಗಾರರೊಬ್ಬರ ಅಭಿಪ್ರಾಯ.  

ಪರಿಹಾರ ವಿತರಣೆ
ದ.ಕ. ಜಿಲ್ಲೆಯಿಂದ ಸಲ್ಲಿಕೆಯಾಗಿ ರುವ ಪ್ರಸ್ತಾವನೆಯ ಪ್ರಕಾರ 60 ಕೋ.ರೂ. ಪರಿಹಾರ ಬಂದಿದೆ. “ಪರಿಹಾರ’ ತಂತ್ರಾಂಶದ ಮೂಲಕ ಹಂಚಿಕೆ ಆರಂಭಿಸಲಾಗಿದೆ. ಅರ್ಜಿ ನೀಡಿದ ಬೆಳೆಗಾರರ ಬ್ಯಾಂಕ್‌ ಖಾತೆಗೆ ಪರಿಹಾರ ಮೊತ್ತ ಕೆಲವೇ ದಿನಗಳಲ್ಲಿ ಜಮೆ ಆಗಲಿದೆ. 
 ಶಶಿಕಾಂತ್‌ ಸೆಂಥಿಲ್‌ಜಿಲ್ಲಾಧಿಕಾರಿ, ದ.ಕ. 

ಸಾಲಮನ್ನಾ ಆಗಲಿ
ದ.ಕ. ಜಿಲ್ಲೆಯ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರವು ಎನ್‌ಡಿಆರ್‌ಎಫ್‌ನಿಂದ 60 ಕೋ.ರೂ. ಬಿಡುಗಡೆ ಮಾಡಿದೆ. ರಾಜ್ಯ ಸರಕಾರ ಇನ್ನಾದರೂ ವಿಶೇಷ ಪ್ಯಾಕೇಜ್‌ ಪ್ರಕಟಿಸಬೇಕು. ಕೊಳೆರೋಗ ಪೀಡಿತ ಅಡಿಕೆ ಬೆಳೆ ಗಾರನ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಮುಂದಾಗ ಬೇಕು. ಕನಿಷ್ಠ ಬೆಂಬಲ ಬೆಲೆ ಹಾಗೂ ಕೊಳೆರೋಗಕ್ಕೆ ಮೂಲ ಕಾರಣ ಪತ್ತೆಹಚ್ಚಲು ಪೂರ್ಣ ಸಂಶೋಧನೆ ರಾಜ್ಯ ಸರಕಾರದ ಮೂಲಕ ನಡೆಯಬೇಕಾಗಿದೆ. 
 ಹರೀಶ್‌ ಪೂಂಜ, ಶಾಸಕರು 

ಪ್ರಸ್ತಾವನೆಗೆ ಒಪ್ಪಿಗೆ
ಕೊಳೆರೋಗಕ್ಕೆ ಸಂಬಂಧಿಸಿ ಉಡುಪಿಯಲ್ಲಿ 9.07 ಕೋ.ರೂ.ಗಳ ಪ್ರಸ್ತಾವನೆಗೆ ಸರಕಾರ ಒಪ್ಪಿಗೆ ನೀಡಿದ್ದು, “ಪರಿಹಾರ’ದ ಮೂಲಕ ಹಂಚಿಕೆಗೆ ಅನುಮತಿ ನೀಡಲಾಗಿದೆ. ಫಲಾನು ಭವಿಗಳ ಡೇಟಾ ಎಂಟ್ರಿ ನಡೆಸಿ, ಆಧಾರ್‌ ಇನ್ನಿತರ ವಿವರ ದಾಖಲಿಸಿ ಪರಿಹಾರ ವಿತರಿಸಲಾಗುವುದು. 
ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಜಿಲ್ಲಾಧಿಕಾರಿ, ಉಡುಪಿ

 ದಿನೇಶ್‌ ಇರಾ

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.