ಬೋರ್ಡಿಂಗ್‌ ಪಾಸ್‌ ಸೆಂಟರ್‌ ಸ್ಥಾಪನೆಗೆ ನಿರಾಸಕ್ತಿ

ಲಕ್ಷದ್ವೀಪಕ್ಕೆ ತೆರಳಲು ಪ್ರವೇಶ ಪತ್ರ

Team Udayavani, Dec 16, 2019, 5:11 AM IST

1312MLR9

ಮಹಾನಗರ: ಲಕ್ಷದ್ವೀಪಕ್ಕೆ ತೆರಳಲು ಪ್ರವೇಶ ಪತ್ರ ನೀಡುವ ಬೋರ್ಡಿಂಗ್‌ ಪಾಸ್‌ ಸೆಂಟರ್‌ (ಪ್ರವೇಶ ಪತ್ರ ಕೇಂದ್ರ) ಮಂಗಳೂರಿನಲ್ಲಿ ಸ್ಥಾಪಿಸಬೇಕೆಂಬ ಹಲವಾರು ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. ಪರಿಣಾಮ, ಮಂಗಳೂರು ಸಹಿತ ಕರ್ನಾಟಕದ ಜನತೆ ಲಕ್ಷದ್ವೀಪಕ್ಕೆ ಪ್ರಯಾಣಿಸಬೇಕಾದರೆ ಕೇರಳದ ಕೊಚ್ಚಿಯನ್ನೇ ಈಗಲೂ ಅವಲಂಬಿಸಬೇಕಾಗಿದೆ.

ಲಕ್ಷದ್ವೀಪ ನಿರ್ಬಂಧಿತ ಪ್ರದೇಶವಾಗಿರುವುದರಿಂದ ಹೊರಗಿನ ಪ್ರದೇಶದವರಿಗೆ ಅಲ್ಲಿಗೆ ಹೋಗಲು ಪ್ರವೇಶ ಅನುಮತಿ ಪತ್ರ ಕಡ್ಡಾಯ. ಕೊಚ್ಚಿಯಲ್ಲಿ ಲಕ್ಷದ್ವೀಪ ಸೆಕ್ರಟರಿಯೇಟ್‌ನ ಪ್ರವೇಶ ಪರವಾನಿಗೆ ನೀಡುವ ಕೇಂದ್ರವಿದೆ. ಕರ್ನಾಟಕದ ಜನತೆ ಪ್ರಸ್ತುತ ಈ ಪರವಾನಿಗೆ ಪಡೆಯಲು ಕೊಚ್ಚಿಯ ಕಚೇರಿಯನ್ನು ಸಂಪರ್ಕಿಸಬೇಕಾಗುತ್ತದೆ. ಆದರೆ ಲಕ್ಷದ್ವೀಪದೊಂದಿಗೆ ಶತಮಾನಗಳಿಂದ ವಾಣಿಜ್ಯವೂ ಸಹಿತ ನಿಕಟ ಸಂಬಂಧವನ್ನು ಹೊಂದಿರುವ ಮಂಗಳೂರಿನಲ್ಲಿ ಪರವಾನಿಗೆ ನೀಡುವ ವ್ಯವಸ್ಥೆ ಇನ್ನೂ ಅನುಷ್ಠಾನಗೊಳ್ಳದಿರುವುದು ವಿಪರ್ಯಾಸ.

ಹಳೆ ಬಂದರಿನಿಂದ ಪ್ರಯಾಣಿಕರ ನೌಕೆ
ನಗರದ ಹಳೆ ವಾಣಿಜ್ಯ ಬಂದರಿಗೆ ಲಕ್ಷದ್ವೀಪದಿಂದ ತಿಂಗಳಿಗೆ ಕನಿಷ್ಠ 4 ಪ್ರಯಾಣಿಕರ ನೌಕೆಗಳು ಆಗಮಿಸುತ್ತಿವೆ. ಇದಲ್ಲದೆ ಲಕ್ಷದ್ವೀಪಕ್ಕೆ ಕಟ್ಟಡ ಸಾಮಗ್ರಿಗಳು, ಸಂಬಾರು ಪದಾರ್ಥ ತುಂಬಿಸಿಕೊಂಡು ಹೋಗುವ ಸರಕು ನೌಕೆಗಳು ಸಂಚರಿಸುತ್ತಿವೆ. ಈ ನೌಕೆಗಳಲ್ಲಿ ಮಂಗಳೂರಿನಿಂದ ಪ್ರಯಾಣಿಕರು ತೆರಳಬೇಕಾದರೆ ಪ್ರವೇಶ ಪತ್ರ ಹೊಂದುವುದು ಕಡ್ಡಾಯ.

ಆಸಕ್ತಿ ತೋರದ ಲಕ್ಷದ್ವೀಪ ಆಡಳಿತ
ಲಕ್ಷದೀಪ ಆಡಳಿತದ ಒಂದು ಅಂಗಸಂಸ್ಥೆಯಾದ ಸೊಸೈಟಿ ಫಾರ್‌ ಪ್ರಮೋಶನ್‌ ಆಫ್‌ ನೇಚರ್‌ ಟೂರಿಸ್ಟ್‌ ಆ್ಯಂಡ್‌ ನ್ಪೋರ್ಟ್ಸ್ನ ಆಡಳಿತಾಧಿಕಾರಿ ಯಾಗಿ ( ನ್ಪೋರ್ಟ್ಸ್ ) ಕರ್ನಾಟಕದವರೇ ಆದ ಐಎಎಸ್‌ ಅಧಿಕಾರಿ ರಾಜೇಂದ್ರ ಪ್ರಸಾದ್‌ ಅವರು ಇದ್ದ ಸಂದರ್ಭ ಮಂಗಳೂರಿನಲ್ಲಿ ಬೋರ್ಡಿಂಗ್‌ ಪಾಸ್‌ ಸೆಂಟರ್‌ ಸ್ಥಾಪನೆ ಬಗ್ಗೆ ಒಂದಷ್ಟು ಪ್ರಯತ್ನಗಳು ನಡೆದಿದ್ದರೂ ಅವರು ವರ್ಗಾವಣೆಯಾದ ಬಳಿಕ ಯಾವುದೇ ಪ್ರಗತಿಯಾಗಿಲ್ಲ. ಮಂಗಳೂರು ಹಳೆ ವಾಣಿಜ್ಯ ಬಂದರಿನಲ್ಲಿ ಲಕ್ಷದ್ವೀಪಕ್ಕೆ ಪ್ರವೇಶಪತ್ರ ನೀಡುವ ಕೇಂದ್ರವನ್ನು ಸ್ಥಾಪಿಸಲು ಜಾಗ ನೀಡಲು ಬಂದರು ಸಿದ್ಧವಿರುವುದಾಗಿ ಲಕ್ಷದ್ವೀಪ ಆಡಳಿತಕ್ಕೆ ಈಗಾಗಲೇ ತಿಳಿಸಲಾಗಿದೆ. ಅಲ್ಲಿಯ ಆಡಳಿ ತದ ಜತೆ ಈ ಬಗ್ಗೆ ಒಂದೆರಡು ಬಾರಿ ಮಾತುಕತೆಯೂ ನಡೆಸಲಾಗಿದೆ. ಆದರೆ ಹೆಚ್ಚಿನ ಪೂರಕ ಸ್ಪಂದನೆ ವ್ಯಕ್ತವಾಗಿಲ್ಲ. ಕೇಂದ್ರ ಸ್ಥಾಪನೆಗೆ ಬೇಕಾದ ಜಾಗವನ್ನು ಒದಗಿಸುವುದು ಬಿಟ್ಟರೆ ಉಳಿದಂತೆ ಬಂದರು ಇಲಾಖೆ ಪಾತ್ರ ಇದರಲ್ಲಿ ಏನೂ ಇಲ್ಲ ಎಂದು ಎಂದು ಮಂಗಳೂರಿನ ಹಳೆ ವಾಣಿಜ್ಯ ಬಂದರು ಅಧಿಕಾರಿಗಳು ಹೇಳುತ್ತಾರೆ.

ಪ್ರಕೃತಿ ಸೊಬಗನ್ನು ಸವಿಯುವ ಅಪೂರ್ವ ತಾಣ
ಕರಾವಳಿ ಕರ್ನಾಟಕ, ಸುತ್ತಮುತ್ತಲ ಜಿಲ್ಲೆಗಳ ಜನರಿಗೆ ಕಡಿಮೆ ಖರ್ಚಿನಲ್ಲಿ ಸಾಗರ ಪಯಣನೊಂದಿಗೆ ಪ್ರಕೃತಿ ಸೊಬಗನ್ನು ಸವಿಯುವ ಅಪೂರ್ವ ತಾಣ ಲಕ್ಷದ್ವೀಪ. ಮಂಗಳೂರಿನಿಂದ ಸುಮಾರು 365 ಕಿ.ಮೀ. (277 ಮೈಲು ) ದೂರದಲ್ಲಿ ಪ್ರಾರಂಭವಾಗುತ್ತವೆ ಲಕ್ಷ ದ್ವೀಪ ಸಮೂಹ. ಕವರೆಟ್ಟಿ, ಅಗಾಟ್ಟಿ , ಕಲ್ಪೆನಿ, ಮಿನಿಕ್ವಾಯ್‌, ಅಮಿನಿ, ಚತ್ತಲತ್‌, ಕಿಲ್ತಾನ್‌ ಹಾಗೂ ಬಿತ್ತಾ, ಅಂದ್ರೋತ್‌, ಕಡಮಟ್ಟ್ ಪ್ರಮುಖ ದ್ವೀಪಗಳು. ಕ್ರೂಜ್‌ನಲ್ಲಿ ಸುಮಾರು 16ರಿಂದ 18 ತಾಸುಗಳ ಪ್ರಯಾಣ. ಕಡಿಮೆ ಅವಧಿಯ ಪ್ರಯಾಣ ಪ್ರವಾಸಿಗರಿಗೆ ತಮ್ಮ ರಜಾ ಅವಧಿಯನ್ನು ಹೆಚ್ಚು ಬಳಕೆ ಮಾಡಲು ಅವಕಾಶ ಲಭಿಸುತ್ತದೆ.

ಮೂಲ ಸೌಕರ್ಯಗಳ ಅಭಿವೃದ್ಧಿ ಅಗತ್ಯ
ಲಕ್ಷದ್ವೀಪ-ಮಂಗಳೂರು ಮಧ್ಯೆ ಪ್ರಯಾಣಿಕರ ನೌಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಸುಸಜ್ಜಿತ ಪ್ರಯಾಣಿಕರ ಲಾಂಜ್‌, ಸುವ್ಯವಸ್ಥಿತ ಜೆಟ್ಟಿ ಸಹಿತ ಒಂದಷ್ಟು ಮೂಲಸಕರ್ಯಗಳ ಅಭಿವೃದ್ಧಿ ಅಗತ್ಯವಿದೆ. 65 ಕೋ.ರೂ. ವೆಚ್ಚದಲ್ಲಿ ಹಳೆ ಬಂದರಿನ ಉತ್ತರ ವಾರ್ಫ್‌ನ ಸುಸಜ್ಜಿತ ಜೆಟ್ಟಿ ನಿರ್ಮಾಣ ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ .

ಮಂಗಳೂರಿನಲ್ಲಿ ಅವಶ್ಯವಿದೆ
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತಿಂಗಳಿಗೆ ಕನಿಷ್ಠ 4 ನೌಕೆಗಳು ತೆರಳುತ್ತಿವೆ. ಲಕ್ಷದ್ವೀಪಕ್ಕೆ ಪ್ರಯಾಣಿಕರು ತೆರಳಲು ಅಲ್ಲಿನ ಸೆಕ್ರೆಟರಿಯೇಟ್‌ನಿಂದ ಪ್ರವೇಶ ಪತ್ರ ಅಗತ್ಯವಿದ್ದು ಮಂಗಳೂರಿನಲ್ಲಿ ಇದನ್ನು ನೀಡುವ ವ್ಯವಸ್ಥೆ ಇಲ್ಲ. ಪ್ರಸ್ತುತ ಕೊಚ್ಚಿಯಿಂದ ಆನ್‌ಲೈನ್‌ ಮೂಲಕ ಪಡೆಯಬೇಕಾಗುತ್ತದೆ. ಮಂಗಳೂರಿನಲ್ಲಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಪ್ರಯತ್ನಗಳು ನಡೆದಿದ್ದರೂ ಇದಕ್ಕೆ ಪೂರಕ ದೊರಕಿಲ್ಲ ಎಂದು ಮಂಗಳೂರು ಹಳೆ ವಾಣಿಜ್ಯ ಬಂದರು ಸಹಾಯಕ ಅಧಿಕಾರಿ ತಿಳಿಸಿದ್ದಾರೆ.

– ಮಂಗಳೂರಿನಿಂದ 365 ಕಿ.ಮೀ. ದೂರದಲ್ಲಿದೆ ಲಕ್ಷ ದ್ವೀಪ ಸಮೂಹ.
– ಮಂಗಳೂರಿನಿಂದ ಕ್ರೂಜ್‌ನಲ್ಲಿ ಸುಮಾರು 16ರಿಂದ 18 ತಾಸುಗಳ ಪ್ರಯಾಣ.
– ಹಳೆ ವಾಣಿಜ್ಯ ಬಂದರಿನಲ್ಲಿ ಪ್ರವೇಶಪತ್ರ ಕೇಂದ್ರ ಸ್ಥಾಪಿಸಲು ಜಾಗ ನೀಡಲು ಅಧಿಕಾರಿಗಲು ಸಿದ್ಧ.
-ಸುಸಜ್ಜಿತ ಪ್ರಯಾಣಿಕರ ಲಾಂಜ್‌ ಅಗತ್ಯವಿದೆ.
– ಹಳೆ ಬಂದರಿನ ಉತ್ತರ ವಾರ್ಫ್‌ನ ಸುಸಜ್ಜಿತ ಜೆಟ್ಟಿ ನಿರ್ಮಾಣ ಯೋಜನೆ ಅನುಷ್ಠಾನವಾಗಿಲ್ಲ.

ಸಚಿವರ ಜತೆ ಚರ್ಚೆ
ಮಂಗಳೂರು ಹಳೆ ವಾಣಿಜ್ಯ ಬಂದರು ಮೂಲಕ ಲಕ್ಷದ್ವೀಪಕ್ಕೆ ತೆರಳುವ ಮಂದಿಗೆ ಮಂಗಳೂರಿನಲ್ಲೇ ಬೋರ್ಡಿಂಗ್‌ ಪಾಸ್‌ ದೊರೆಯವ ನಿಟ್ಟಿನಲ್ಲಿ ಬೋರ್ಡಿಂಗ್‌ ಪಾಸ್‌ ಕೇಂದ್ರ ಅಗತ್ಯವಿದೆ. ಪ್ರವಾಸೋದ್ಯಮ ಅಭಿವೃದ್ದಿಗೂ ಇದು ಪೂರಕವಾಗಿದೆ. ಇದನ್ನು ಕೇಂದ್ರ ಸಚಿವರ ಗಮನಕ್ಕೆ ತಂದು ಮಂಗಳೂರಿನಲ್ಲಿ ಕೇಂದ್ರ ಸ್ಥಾಪನೆಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲಾಗುವುದು.
 - ನಳಿನ್‌ ಕುಮಾರ್‌ ಕಟೀಲು, ದ.ಕ. ಸಂಸದ

-ಕೇಶವ ಕುಂದರ್‌

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.