ಸಂತ್ರಸ್ತ ಕುಟುಂಬಗಳಿಗೆ ಸ್ಥಳಾಂತರದ ಸಂಕಟ


Team Udayavani, Aug 29, 2018, 10:24 AM IST

29-agust-3.jpg

ಸುಳ್ಯ: ಭೂ ಕುಸಿತದ ಸ್ಥಳದಿಂದ ಪಾರಾಗಿ ಪರಿಹಾರ ಕೇಂದ್ರಕ್ಕೆ ಬಂದಿರುವ ಕುಟುಂಬಗಳಿಗೆ ಈಗ ಅತ್ತ ದರಿ, ಇತ್ತ ಪುಲಿ ಎಂಬ ಸ್ಥಿತಿ! ಪರಿಹಾರ ಕೇಂದ್ರಗಳಲ್ಲಿ ಬದುಕು ಕಟ್ಟಿ ಕೊಂಡಿರುವ ಸಂತ್ರಸ್ತ ಕುಟುಂಬಗಳು ಪದೇ-ಪದೇ ಕೇಂದ್ರ ಬದಲಾಯಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಈಗಿರುವ ಕೇಂದ್ರ ಶಾಶ್ವತ ಅಲ್ಲ. ತಾತ್ಕಾಲಿಕ ವ್ಯವಸ್ಥೆ. ಶಾಲೆ, ಸಭಾಭವನದೊಳನ ವಸತಿ ವ್ಯವಸ್ಥೆಯನ್ನು ದೀರ್ಘ‌ ಕಾಲಕ್ಕೆ ವಿಸ್ತರಿಸು ವುದು ಅಸಾಧ್ಯ. ಹಾಗಾಗಿ ದಿನ ಕಳೆದಂತೆ ಸಂತ್ರಸ್ತರಿಗೆ ಆವಾಸ ಸ್ಥಾನದ ಬಗೆಗಿನ ಅಭದ್ರತೆಯ ಆತಂಕ ಹೆಚ್ಚಾಗುತ್ತಿದೆ.

ಮೂರು ಕೇಂದ್ರಗಳು
ಆ. 17ರಂದು ಜೋಡುಪಾಲ ಪರಿಸರದಲ್ಲಿ ಸಂಭವಿಸಿದ ಭೀಕರ ಪ್ರಾಕೃತಿಕ ವಿಕೋಪ ದಿಂದ ದಿಕ್ಕೆಟ್ಟ 300ಕ್ಕೂ ಅಧಿಕ ಕುಟುಂಬಗಳಿಗೆ ತತ್‌ಕ್ಷಣಕ್ಕೆ ಆಸರೆ ಒದಗಿಸಿದ್ದು ದ.ಕ. ಗಡಿ ಭಾಗದ ಮೂರು ಪರಿಹಾರ ಕೇಂದ್ರಗಳು. ಅರಂತೋಡು ತೆಕ್ಕಿಲ ಸಭಾಭವನ, ಕೊಡಗು ಸಂಪಾಜೆ ಶಾಲೆ ಕಟ್ಟಡ, ಕಲ್ಲುಗುಂಡಿ ಶಾಲೆ ಕಟ್ಟಡದಲ್ಲಿ ವಸತಿ, ದಾನಿಗಳ ನೆರವಿನಿಂದ ಊಟ ಉಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಂತ್ರಸ್ತರಿಗೆ ಸ್ಪಂದನೆ ರೂಪದಲ್ಲಿ ನೆರವಿನ ಮಹಾಪೂರವೇ ಹರಿದು ಬಂದಿತ್ತು.

ಸ್ಥಳಾಂತರ ಸಂಕಟ
ಜೋಡುಪಾಲ, ಮೊಣ್ಣಂಗೇರಿ, ಮದೆನಾಡು ಸಂತ್ರಸ್ತರು ಆರಂಭದಲ್ಲಿ ಕೊಯನಾಡು, ಮದೆನಾಡು ಶಾಲಾ ಕೇಂದ್ರಕ್ಕೆ ಸೇರಿದ್ದರು. ಅಲ್ಲಿ ಪರಿಸ್ಥಿತಿ ಕಠಿನವೆನಿಸಿ ಅರಂತೋಡು ಖಾಸಗಿ ಸಭಾ ಭವನ, ಕಲ್ಲುಗುಂಡಿ ಶಾಲೆ, ಸಂಪಾಜೆ ಶಾಲೆಗೆ ಸ್ಥಳಾಂತರಿಸಲಾಯಿತು. ಈಗ 12 ದಿನ ಕಳೆದಿದೆ. ಅರಂತೋಡು, ಕೊಡಗು ಸಂಪಾಜೆ ಕೇಂದ್ರದ ಕುಟುಂಬಗಳನ್ನು ಹೊಸ ಇನ್ನೊಂದು ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಪರಿಹಾರ ಕೇಂದ್ರದಲ್ಲಿ ಉಳಿದಿರುವ ಸಂತ್ರಸ್ತರು ಆಗಲೇ 3ರಿಂದ 4 ಕೇಂದ್ರಗಳಿಗೆ ಸ್ಥಳಾಂತರಗೊಂಡಿದ್ದಾರೆ. 

ಮನೆಗೆ ಮರಳಿಲ್ಲ 
ಮೂರು ಕೇಂದ್ರಗಳಲ್ಲಿ 200ಕ್ಕೂ ಅಧಿಕ ಕುಟುಂಬಗಳು ಉಳಿದುಕೊಂಡರೆ, ಅಷ್ಟೇ ಸಂಖ್ಯೆಯ ಕುಟುಂಬಗಳು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿವೆ. ಪ್ರಾಕೃತಿಕ ವಿಕೋಪ ತಹಬದಿಗೆ ಬಂದು ದೇವರಕೊಲ್ಲಿ, ಅರೆಕ್ಕಳ, ಸಂಪಾಜೆ ಪರಿಸರದ ನಿವಾಸಿಗಳು ಮನೆಗೆ ಮರಳಿದ್ದಾರೆ. ಮದೆನಾಡು, ಜೋಡುಪಾಲ, ಮೊಣ್ಣಂಗೇರಿ ಪರಿಸರದಲ್ಲಿ ವಾತಾವರಣ ದಿನೇ-ದಿನೇ ಬಿಗಡಾಯಿಸುತ್ತಿರುವ ಕಾರಣ ಪರಿಹಾರ ಕೇಂದ್ರ ತೊರೆದಿಲ್ಲ.

ಇನ್ನೆಷ್ಟು ದಿನ ಇರಬೇಕೋ?
ಮದೆನಾಡು ಕೇಂದ್ರದಲ್ಲಿದ್ದೆ. ಅಲ್ಲಿಂದ ಸಂಪಾಜೆ ಕೇಂದ್ರಕ್ಕೆ ಸೇರಿದ್ದೆ. ಈಗ ಮತ್ತೆ ಸಂಪಾಜೆ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರವಾಗಿದೆ. ಮದೆನಾಡಿನಲ್ಲಿ ಪರಿಸ್ಥಿತಿ ಸುಧಾರಣೆ ಕಂಡಿಲ್ಲ. ಹಾಗಾಗಿ ಪರಿಹಾರ ಕೇಂದ್ರದಲ್ಲಿ ಇನ್ನೆಷ್ಟೂ ದಿನ ಇರಬೇಕು ಏನು. 
– ರತ್ನಾಕರ ಮದನಾಡು, ಸಂತ್ರಸ್ತ

 ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.