ವಿಲೇವಾರಿ, ಸಂಸ್ಕರಣೆ: ಕೇಂದ್ರದಿಂದ ಯೋಜನ ವರದಿ


Team Udayavani, Mar 8, 2018, 11:12 AM IST

8-March-5.jpg

ಮಹಾನಗರ: ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದೇ ಈಗ ಬಹು ದೊಡ್ಡ ಸವಾಲು. ಈ ನಿಟ್ಟಿನಲ್ಲಿ,’ ಸ್ವಚ್ಛ ಭಾರತ್‌ ಮಿಷನ್‌’ ಯೋಜನೆಯಡಿಯಲ್ಲಿ ನಗರದಲ್ಲಿ ವೈಜ್ಞಾನಿಕವಾಗಿ ಘನತ್ಯಾಜ್ಯವನ್ನು ವಿಲೇವಾರಿ ಹಾಗೂ ಸಂಸ್ಕರಣೆ ಮಾಡುವ ಕುರಿತಂತೆ ಸಮಗ್ರ ಅಧ್ಯಯನ ಕೈಗೊಳ್ಳಲು ಹಾಗೂ ಅನುಷ್ಠಾನಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ.

ಇದರಂತೆ, ಕೇಂದ್ರ ಸರಕಾರದಿಂದ ಗುರುತಿಸಲಾದ ಸಲಹೆಗಾರರನ್ನು ಅಧ್ಯಯನ ಕೈಗೊಳ್ಳಲು ಮಂಗಳೂರಿಗೆ ಈಗಾಗಲೇ ನೇಮಿಸಿ, ಪರಿಶೀಲನೆ ನಡೆಸಿ, ಈಗ ವರದಿಯನ್ನು ಪಾಲಿಕೆಗೆ ಸಲ್ಲಿಸಲಾಗಿದೆ. ಆದರೆ, ವರದಿಯಲ್ಲಿ ಕೆಲವು ಅಭಿಪ್ರಾಯ ಗೊಂದಲ ಇರುವ ಕಾರಣದಿಂದ ಇನ್ನಷ್ಟು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಪಾಲಿಕೆ ನಿರ್ಧರಿಸಿದೆ.

ವೆಚ್ಚದ ಲೆಕ್ಕಾಚಾರ
ಒಟ್ಟು 12.19 ಕೋ.ರೂ. ವೆಚ್ಚದಲ್ಲಿ ಮಂಗಳೂರಿನಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಹಾಗೂ ಸಂಸ್ಕರಣೆ ನಡೆಸುವ ಕುರಿತಂತೆ ವರದಿಯಲ್ಲಿ ಲೆಕ್ಕಾಚಾರ ನೀಡಲಾಗಿದೆ. ಈ ಪೈಕಿ, 43 ಲಕ್ಷ ರೂ. ವೆಚ್ಚದಲ್ಲಿ ಪಚ್ಚನಾಡಿಯಲ್ಲಿ ವೇಸ್ಟ್‌ ರಿಸೀವಿಂಗ್‌ ಫ್ಲ್ಯಾಟ್‌ಫಾರ್ಮ್ ಶೆಡ್‌ ನಿರ್ಮಾಣ, 1.18 ಕೋ.ರೂ. ವೆಚ್ಚದಲ್ಲಿ ರೂಫಿಂಗ್ ರಿಪ್ಲೇಸ್‌ಮೆಂಟ್‌, 68 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ, 13 ಲಕ್ಷ ರೂ. ವೆಚ್ಚದಲ್ಲಿ ಕಾರ್ಮಿಕರಿಗೆ ವಿಶ್ರಾಂತಿ ಗೃಹ, 77 ಲಕ್ಷ ರೂ.ವೆಚ್ಚದಲ್ಲಿ ನಂದಿಗುಡ್ಡ, ಅತ್ತಾವರ, ಅಳಕೆ, ಉರ್ವ ಮಾರುಕಟ್ಟೆ, ಕಾವೂರು, ಕೂಳೂರು ಹಾಗೂ ಸುರತ್ಕಲ್‌ ನಲ್ಲಿ ಒಣಕಸ ಸಂಗ್ರಹ ಕೇಂದ್ರ ಸೇರಿದಂತೆ ಹಲವು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ನಮೂದಿಸಲಾಗಿದೆ. ‘ಸ್ವಚ್ಛ ಭಾರತ್‌ ಮಿಷನ್‌’ ಯೋಜನೆಯಡಿಯಲ್ಲಿ ಕೇಂದ್ರ ಸರಕಾರದ ವತಿಯಿಂದ ಶೇ.35 ಹಾಗೂ ರಾಜ್ಯ ಸರಕಾರದಿಂದ ಶೇ.23.30ರಷ್ಟು ಅನುದಾನವನ್ನು ಮಂಗಳೂರು ಪಾಲಿಕೆಗೆ ನೀಡಲಿದ್ದಾರೆ. ಉಳಿದ ಮೊತ್ತವನ್ನು ಪಾಲಿಕೆ ಭರಿಸಬೇಕಾಗಿದೆ.

ಸ್ವಚ್ಛ ಭಾರತ್‌ ಮಿಷನ್‌ ಯೋಜನೆ ಯಡಿಯಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಹಾಗೂ ಸಂಸ್ಕರಣೆಯನ್ನು ಮಾಡುವ ಕುರಿತು ವಿಸ್ತೃತ ಯೋಜನೆಯನ್ನು ತಯಾರಿಸಿಕೊಂಡು ರಾಜ್ಯ ಮಟ್ಟದ ತಾಂತ್ರಿಕ ಪರಿಶೀಲನ ಸಭೆಗೆ ಮಂಡಿಸಿ, ರಾಜ್ಯ ಸರಕಾರದ ಅನುಮೋದನೆ ಪಡೆದುಕೊಂಡು ಕಾರ್ಯಾನುಷ್ಠಾನಗೊಳಿಸಲು ಪೌರಾಡಳಿತ ನಿರ್ದೇಶನಾಲಯ 2016 ಜೂ. 29ರಂದು ಆದೇಶಿಸಿತ್ತು. ಸರಕಾರದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಹಾಗೂ ಸಂಸ್ಕರಣೆಯನ್ನು ಮಾಡಲು ವಿಸ್ತೃತ ಯೋಜನ ವರದಿ ತಯಾರಿಸಲು ಟೆಂಡರ್‌ ಮುಖಾಂತರ ಭಾರತ ಸರಕಾರದಿಂದ ಗುರುತಿಸಲಾದ ಮುಂಬಯಿಯ ಮೆ| ಟಾಟಾ ಕನ್ಸೆಲ್ಟಿಂಗ್‌ ಎಂಜಿನಿಯರ್ಸ್‌ ಲಿ. ಅವರನ್ನು ನೇಮಕ ಮಾಡಲಾಗಿತ್ತು.

ಈ ಕುರಿತಂತೆ ಸಂಬಂಧಪಟ್ಟ ಸಂಸ್ಥೆಯ ಪ್ರತಿನಿಧಿಗಳು ಪರಿಶೀಲನೆ ನಡೆಸಿ ಮನಪಾ ಅಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಲಾಗಿತ್ತು. ಇದೀಗ ಸಂಸ್ಥೆಯು ವರದಿಯನ್ನು ತಯಾರಿಸಿ ಮಹಾನಗರ ಪಾಲಿಕೆಗೆ ವಿಸ್ತೃತ ಯೋಜನ ವರದಿಯನ್ನು ಸಲ್ಲಿಸಲಾಗಿದೆ.

ಯೋಜನ ವರದಿಯಲ್ಲೇನಿದೆ?
ಈಗ ಸಂಸ್ಕರಣೆಗಾಗಿ ಮಂಗಳೂರಿನ ಪಚ್ಚನಾಡಿಯಲ್ಲಿ ಏರೋಬಿಕ್‌ ವಿಂಡ್‌ರೋ ಮಾದರಿಯ ಗೊಬ್ಬರ ತಯಾರಿಕ ಘಟಕವನ್ನು ನಿರ್ಮಿಸಲಾಗಿದ್ದು, ಇದು ಕೇವಲ 175 ಟನ್‌ಗಳನ್ನು ಸಂಸ್ಕರಣೆ ಮಾಡಲು ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಘಟಕವನ್ನು ನಿರ್ಮಿಸಿ ಈಗಾಗಲೇ 12-13 ವರ್ಷ ಕಳೆದಿರುವುದರಿಂದ ಈಗ ಇರುವ ಸ್ಥಾವರ ಮೇಲ್ದರ್ಜೆಗೇರಿಸಲು ಯೋಜನ ವರದಿಯಲ್ಲಿ ವಿವರಿಸಲಾಗಿದೆ. ಏರೋಬಿಕ್‌ ವಿಂಡ್‌ರೊ ಘಟಕದಲ್ಲಿ ಇರುವ ಯಂತ್ರಗಳ ಸಾಮರ್ಥ್ಯವನ್ನು ಹೆಚ್ಚಿಸಲು ಹೆಚ್ಚುವರಿ ಯಂತ್ರೋಪಕರಣ ಹಾಗೂ ಉಪಕರಣವನ್ನು ಖರೀದಿಸಲು ಯೋಜನ ವರದಿಯಲ್ಲಿ ಪ್ರಸ್ತಾವಿಸಲಾಗಿದೆ. ಈಗ ಸಂಗ್ರಹವಾಗಿರುವ ತ್ಯಾಜ್ಯವನ್ನು ಪಿ.ಪಿ.ಪಿ. ಮಾದರಿಯಲ್ಲಿ ಬಯೋಮೈನಿಂಗ್‌ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ ವರದಿಯಲ್ಲಿ ಪ್ರಸ್ತಾವಿಸಲಾಗಿದೆ. 

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.