ವಿಲೇವಾರಿಯಾಗದ ಕಸ: ಸಾರ್ವಜನಿಕರ ಆಕ್ರೋಶ


Team Udayavani, May 20, 2018, 12:46 PM IST

20-may-12.jpg

ಪುತ್ತೂರು : ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಆದರೆ ನಗರಸಭೆ ಆಡಳಿತ ಮಾತ್ರ ಸಮಸ್ಯೆ ಬಗೆಹರಿಸಲು ಪ್ರಯತ್ನಿಸದೆ ತಪ್ಪಿಸಿಕೊಳ್ಳುತ್ತಿದೆ. ಉದಯವಾಣಿ ‘ಸುದಿನ’ ದಲ್ಲಿ ಕಸದ ಸಮಸ್ಯೆಯ ಕುರಿತು ಸಚಿತ್ರ ವರದಿ ಪ್ರಕಟಗೊಂಡ ಬಳಿಕ ಸಾರ್ವಜನಿಕರೂ ಪತ್ರಿಕೆಯನ್ನು ಸಂಪರ್ಕಿಸಿ ಸಮಸ್ಯೆ ತೋಡಿಕೊಂಡಿದ್ದಾರೆ.

ನಗರಸಭೆ ಆಡಳಿತವು ಡೋರ್‌ ಕಲೆಕ್ಷನ್‌ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹೊಸ ವ್ಯವಸ್ಥೆಯನ್ನು ಮಾಡಿಕೊಂಡ ಬಳಿಕ ಸಮಸ್ಯೆ ತೀವ್ರತೆಯನ್ನು ಪಡೆದುಕೊಂಡಿದೆ. ಹೊಸ ವ್ಯವಸ್ಥೆಯ ಸಾಧಕ – ಬಾಧಕಗಳ ಕುರಿತು ನಗರಸಭೆ ಅಧಿಕಾರಿಗಳು ಸ್ಥಳ ಭೇಟಿ ನಡೆಸಿ ಪರಿಶೀಲನೆ ನಡೆಸದೆ ಎಲ್ಲ ವ್ಯವಸ್ಥೆಗಳು ಸರಿಯಾಗಿವೆ ಎಂದು ಸಮಜಾಯಿಸಿ ಉತ್ತರಗಳನ್ನಷ್ಟೇ ನೀಡುತ್ತಿದ್ದಾರೆ. ಈ ಭಾಗದಲ್ಲಿ ಕಸ ವಿಲೇವಾರಿಯಾಗಿಲ್ಲ ಎಂದು ಚಿತ್ರಗಳ ಸಹಿತ ನಗರಸಭೆಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಗರವಾಸಿಗರು ಅಲವತ್ತುಕೊಂಡಿದ್ದಾರೆ.

ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹೊಸದಾಗಿ ಗುತ್ತಿಗೆ ಪಡೆದುಕೊಂಡವರು ತಮ್ಮ ಕಾರ್ಯ ಚಟುವಟಿಕೆಯಲ್ಲಿ ಗಂಭೀರತೆ ತೋರುತ್ತಿಲ್ಲ. ನಗರಸಭೆ ಆಡಳಿತಕ್ಕೆ ಅಂಕಿ ಸಂಖ್ಯೆಗಳನ್ನಷ್ಟೇ ನೀಡುತ್ತಿದ್ದಾರೆ. ನಗರಸಭೆಯ ಪೌರಾಯುಕ್ತರ ಸಹಿತ ಅಧಿಕಾರಿಗಳು ಕುಳಿತಲ್ಲಿಂದಲೇ ಇದನ್ನು ಒಪ್ಪಿಕೊಳ್ಳುತ್ತಿದ್ದಾರೆ ಮತ್ತು ಸಾರ್ವಜನಿಕರಿಗೆ ಇದೇ ಮಾಹಿತಿಯನ್ನು ಮರು ಒಪ್ಪಿಸುತ್ತಿದ್ದಾರೆ. 

ಈ ಕಾರಣದಿಂದ ನಗರದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಮನೆಗಳಲ್ಲಿ ಕಸ, ತ್ಯಾಜ್ಯವನ್ನು ಸಂಗ್ರಹಿಸಿಟ್ಟ ರಾಶಿಗಳು ಕಂಡುಬಂದಿವೆ. ಸಾರ್ವಜನಿಕ ತೊಟ್ಟಿಗಳನ್ನು ಅಳವಡಿಸಿದಲ್ಲಿಯೂ ಕಸ, ತ್ಯಾಜ್ಯಗಳು ತುಂಬಿ ಪರಿಸರದಲ್ಲಿ ಹರಡುತ್ತಿದೆ. ಒಟ್ಟು ಪುತ್ತೂರಿನ ಸ್ವಚ್ಛತೆಗೆ ನಗರಸಭೆ ಆಡಳಿತವೇ ಮುಳ್ಳಾಗುತ್ತಿದೆ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ತ್ವರಿತ ಕ್ರಮ ಕೈಗೊಳ್ಳಬೇಕು
ಮೊದಲಿನ ವ್ಯವಸ್ಥೆಯಲ್ಲಿ ಕಸದ ಡೋರ್‌ ಕಲೆಕ್ಷನ್‌ ಚೆನ್ನಾಗಿತ್ತು. ಈಗ ಸುಮಾರು 20 ದಿನಗಳಿಂದ ಕಸ ವಿಲೇವಾರಿಯಾಗದೆ ತುಂಬಿ ಹೋಗಿದೆ. ತ್ವರಿತ ಕ್ರಮದ ಕಡೆಗೆ ನಗರಸಭೆಯ ಅಧಿಕಾರಿಗಳು ಗಮನಹರಿಸಿದರೆ ಉತ್ತಮ.
ಯಶ್ವಿ‌ನಿ, ಬೊಳುವಾರು

ಎಸಿಗೆ ದೂರು ನೀಡುತ್ತೇವೆ
ಕಸ ವಿಲೇವಾರಿಗೆ ಸಂಬಂಧಿಸಿದಂತೆ ನಗರಸಭೆ ಆಡಳಿತ ಈ ಮೊದಲು ಇದ್ದ ವ್ಯವಸ್ಥೆಯನ್ನು ತೆಗೆದು ಮತ್ತಷ್ಟು ಅಸಮರ್ಪಕಗೊಳಿಸಿದೆ. ಈ ಕುರಿತು ದೂರು ನೀಡಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ವ್ಯವಸ್ಥೆ ಸರಿಪಡಿಸದಿದ್ದಲ್ಲಿ ನಗರಸಭೆಯ ಎದುರು ಕಸ ತೆಗೆದುಕೊಂಡು ಹೋಗಿ ಸುರಿಯುವುದು ಅನಿವಾರ್ಯವಾದೀತು. ಈ ಅವ್ಯವಸ್ಥೆಯ ವಿರುದ್ಧ ಪುತ್ತೂರು ಸಹಾಯಕ ಕಮಿಷನರ್‌ಗೂ ದೂರು ನೀಡುತ್ತೇವೆ.
– ನಾಗರಾಜ್‌, ಕಲ್ಲಾರೆ 

ಪರಿಶೀಲನೆಗೆ ಸೂಚಿಸಿದ್ದೇನೆ
ಕೆಲವರು ನಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಿದ ಸಂದರ್ಭದಲ್ಲಿ ತತ್‌ಕ್ಷಣ ಸ್ಪಂದಿಸಿ ಅಲ್ಲಿನ ಕ್ರಮ ಕೈಗೊಳ್ಳಲಾಗಿದೆ. ಹೊಸ ವ್ಯವಸ್ಥೆಯವರಿಗೆ ಎಲ್ಲೆಲ್ಲ ಬಾಕಿಯಾಗಿದೆ ಎಂಬುದು ತಿಳಿಯುತ್ತಿಲ್ಲ. ನಗರಸಭಾ ಆರೋಗ್ಯ ನಿರೀಕ್ಷಕರಿಗೂ ಈ ಕುರಿತು ಪರಿಶೀಲನೆಗೆ ತಿಳಿಸಲಾಗಿದೆ. 
– ರೂಪಾ ಟಿ. ಶೆಟ್ಟಿ ಪೌರಾಯುಕ್ತರು, ನಗರಸಭೆ ಪುತ್ತೂರು

15 ದಿನಗಳಲ್ಲಿ ಸರಿಯಾಗುತ್ತದೆ
ಹೊಸ ವ್ಯವಸ್ಥೆಯವರಾಗಿರುವುದರಿಂದ ಕೆಲವು ಕಡೆ ಕಸ ಸಂಗ್ರಹಕ್ಕೆ ಬಿಟ್ಟುಹೋಗಿದೆ. ನಾವೆಲ್ಲ ಸೇರಿ ಟ್ರಾಫಿಕ್‌ ಹಿಡಿಯಲು ಪ್ರಯತ್ನ ನಡೆಸುತ್ತಿದ್ದೇವೆ ಮತ್ತು ಅವರ ಜತೆ ತೆರಳುತ್ತಿದ್ದೇವೆ. ಮೊದಲು ಕಸ ಸಂಗ್ರಹಕ್ಕೆ ಹೋಗುತ್ತಿದ್ದ ಇಬ್ಬರನ್ನು ಕರೆಸಿಕೊಂಡು ಅವರಿಂದ ಮಾಹಿತಿ ಪಡೆಯುತ್ತಿದ್ದೇವೆ. ಇನ್ನು 15 ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ.
– ಶ್ವೇತಾ ಕಿರಣ್‌, ಹಿರಿಯ ಆರೋಗ್ಯ ನಿರೀಕ್ಷಕರು, ನಗರಸಭೆ ಪುತ್ತೂರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.