ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಆರು ತಿಂಗಳ ಶಿಕ್ಷೆ
Team Udayavani, Dec 26, 2019, 10:27 PM IST
ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಟೆಂಪೋವನ್ನು ಪೊಲೀಸರು ವಶಪಡಿಸಿಕೊಂಡು ಠಾಣೆಗೆ ಕೊಂಡೊಯ್ಯುತ್ತಿದ್ದಾಗ 34 ಮಂದಿಯ ತಂಡವೊಂದು ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ 21 ಮಂದಿಗೆ ನ್ಯಾಯಾಲಯವು 6 ತಿಂಗಳು ಜೈಲು ಶಿಕ್ಷೆ ಹಾಗೂ 8,500 ರೂ. ದಂಡ ವಿಧಿಸಿದೆ.
ಉಳಾಯಿಬೆಟ್ಟು ಹಾಗೂ ಕಾಂತರಬೆಟ್ಟು ಪರಿಸರದ ನಿವಾಸಿಗಳಾದ ಖಾದ್ರಿ ಯಾನೆ ಅಬ್ದುಲ್ ಖಾದರ್ (53), ಪುತ್ತು ಯಾನೆ ಅಜ್ಮಲ್ (32), ಅಜರ್ (32), ಅಜರುದ್ದೀನ್ (31), ಅಬು ಕೆತ್ತಿಕಲ್ (31), ತಂಝಿಲ್ (27), ನಾಸಿರ್ ಯಾನೆ ಅಬ್ದುಲ್ ನಾಸಿರ್ (32), ಫೈಝಲ್ (29), ಹನೀಫ್ (37), ಅಲ್ತಾಫ್ (33), ಮುಸ್ತಫಾ (32), ಆಸಿಫ್ (30), ಅಝೀಜ್ (35), ಇಕ್ಬಾಲ್ (33), ಲತೀಫ್ (33), ಮುಸ್ತಫಾ (32), ನವಾಝ್ (37), ನವಾಝ್ (38), ಮಂಜೂರ್ (38), ನೌಶೀರ್ ಯಾನೆ ನಾಸಿರ್ ( 33), ರಶೀದ್ (38) ಶಿಕ್ಷೆಗೊಳಗಾದ ಅಪರಾಧಿಗಳು.
ಉಳಾಯಿಬೆಟ್ಟು ಗ್ರಾಮದ ಕಾಂತರಬೆಟ್ಟಿನಲ್ಲಿ 2012ರ ನ. 26ರಂದು ಸಂಜೆ ಅಂದಿನ ಇನ್ಸ್ಪೆಕ್ಟರ್ ಸುಧಾಕರ್ ಅವರು ಸಿಬಂದಿ ಜತೆಗೆ ಅಕ್ರಮ ಜಾನುವಾರು ಸಾಗಾಟದ ಟೆಂಪೋವನ್ನು ಪತ್ತೆ ಹಚ್ಚಿ ಠಾಣೆಗೆ ಕೊಂಡೊಯ್ಯುತ್ತಿದ್ದರು. ಆಗ ಟೆಂಪೋವನ್ನು ಪೊಲೀಸರ ಕೈಯಿಂದ ಬಿಡಿಸಿಕೊಂಡು ಹೋಗುವ ಉದ್ದೇಶದಿಂದ ಪೊಲೀಸ್ ವಾಹನ ಹಾಗೂ ಟೆಂಪೋವನ್ನು ತಡೆದು ನಿಲ್ಲಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಲಾ ಗಿತ್ತು. ಈ ಸಂಬಂಧ 34 ಆರೋಪಿಗಳನ್ನು ಬಂಧಿಸಲಾಗಿತ್ತು. ಆ ಬಳಿಕ ಜಾಮೀನು ಪಡೆದು ಕೆಲವರು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದಾರೆ.
ಮೂರನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅಶ್ವಿನಿ ಕೋರೆ ಅವರು 11 ಸಾಕ್ಷಿದಾರರ ಪೈಕಿ 9 ಮಂದಿಯನ್ನು ವಿಚಾರಣೆಗೊಳಪಡಿಸಿದ್ದರು. ಗ್ರಾಮಾಂತರ ಠಾಣೆಯ ಅಂದಿನ ಇನ್ಸ್ಪೆಕ್ಟರ್ ರವೀಶ್ ನಾಯಕ್ ಪ್ರಕರಣದ ತನಿಖೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಬಿ. ಮೋಹನ ಕುಮಾರ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್