ನಾಳೆ ಚೆನ್ನಾವರದಲ್ಲಿ ಜಿಲ್ಲಾ ಮಟ್ಟದ ಜಾನಪದ ಕ್ರೀಡಾಕೂಟ


Team Udayavani, Aug 11, 2018, 12:30 PM IST

Original Shankara Peeta-min.jpg

ಸವಣೂರು: ನೆಹರು ಯುವ ಕೇಂದ್ರ ಮಂಗಳೂರು, ತಾ| ಯುವಜನ ಒಕ್ಕೂಟ ಪುತ್ತೂರು ಇದರ ಸಹಯೋಗದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲದ ಆಶ್ರಯದಲ್ಲಿ 2ನೇ ವರ್ಷದ ಆಟಿದ ಕೂಟದ ಅಂಗವಾಗಿ ಜಿಲ್ಲಾ ಮಟ್ಟದ ಜಾನಪದ ಕ್ರೀಡಾಕೂಟವು ಪಾಲ್ತಾಡಿ ಗ್ರಾಮದ ಚೆನ್ನಾವರ ಕೆಸರು ಗದ್ದೆಯಲ್ಲಿ ಆ. 12ರಂದು ನಡೆಯಲಿದೆ.

ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮವನ್ನು ಬೊಳ್ಳಿಬೊಲ್ಪು ತುಳುಕೂಟದ ಅಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರು ಗುತ್ತು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್‌ ರೈ ಸೂಡಿಮುಳ್ಳು ವಹಿಸುವರು. ತುಳು ಸಾಹಿತಿ, ಬಾಳಿಲ ಪಿಡಿಒ ಚಂದ್ರಾವತಿ ರೈ ಪಾಲ್ತಾಡಿ ಆಟಿ ತಿಂಗಳ ವಿಶೇಷತೆ ಕುರಿತು ಉಪನ್ಯಾಸ ನೀಡುವರು.

ಅತಿಥಿಗಳಾಗಿ ಕಡಬ ನವಜ್ಯೋತಿ ಸ್ಪೋರ್ಟ್ಸ್  ಕ್ಲಬ್‌ನ ಅಧ್ಯಕ್ಷ ಕಿಶನ್‌ ಕುಮಾರ್‌ ರೈ, ಬೆಳ್ಳಾರೆ ಟೌನ್‌ ರೋಟರಿಕ್ಲಬ್‌ನ ನಿರ್ದೇಶಕ ವೆಂಕಪ್ಪ ಗೌಡ ನಾರ್ಕೋಡು, ಯುವ ಮುಂದಾಳು ಸಹಜ್‌ ರೈ ಬಳಜ್ಜ, ಚೆನ್ನಾವರ ಮುಹಿಯ್ಯುದ್ದಿನ್‌ ಜುಮ್ಮಾ ಮಸೀದಿಯ ಅಧ್ಯಕ್ಷ ಸಿ.ಎ.ಕರೀಂ, ಭಾಗವಹಿಸಲಿದ್ದಾರೆ.

ಪ್ರತಿಭಾ ಪುರಸ್ಕಾರ
ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಕೆಸರುಗದ್ದೆ ಜನಪದ ಕ್ರೀಡಾಕೂಟದಲ್ಲಿ ಪುರುಷರಿಗೆ ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್‌, ಕೆಸರುಗದ್ದೆ ಓಟ, ತುಳು ಜಾನಪದ ಸ್ಪರ್ದೆ, ತುಳು ಪಾಡ್ದನ ಸ್ಪರ್ಧೆ ಮತ್ತು ಶಾಲಾ ಮಕ್ಕಳಿಗೆ ಎರಡು ವಿಭಾಗಗಳಲ್ಲಿ ತುಳು ರಸಪ್ರಶ್ನೆ, ತುಳು ಭಾಷಣ, ಜಾನಪದ ಸ್ಪರ್ಧೆ, ನಿಧಿಶೋಧ ಸ್ಪರ್ಧೆಗಳು ನಡೆಯಲಿದೆ.

ವಿಶೇಷ ಖಾದ್ಯಗಳು
ಆಟಿತಿಂಗಳ ವಿಶೇಷ ಖಾದ್ಯಗಳನ್ನೊಳಗೊಂಡು ಮಧ್ಯಾಹ್ನ ‘ಆಟಿದ ತೆನಸ್‌, ವನಸ್‌’ ಸಹಭೋಜನ ನಡೆಯಲಿದೆ.

ಸಮಾರೋಪ
ಸಂಜೆ ನಡೆಯುವ ಸಮಾರೋಪದ ಅಧ್ಯಕ್ಷತೆಯನ್ನು ಪಾಲ್ತಾಡಿ ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್‌ ಶೆಟ್ಟಿ ಕುಂಜಾಡಿ ವಹಿಸಲಿದ್ದು, ರೋಟರಿ ಕ್ಲಬ್‌ ಬೆಳ್ಳಾರೆ ಟೌನ್‌ ಇದರ ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಕೆರೆಮೂಲೆ ಬಹುಮಾನ ವಿತರಿಸಲಿದ್ದಾರೆ. ಅತಿಥಿಗಳಾಗಿ ಸವಣೂರು ಗ್ರಾ.ಪಂ.ಸದಸ್ಯ ಸತೀಶ್‌ ಅಂಗಡಿಮೂಲೆ, ಪ್ರಗತಿಪರ ಕೃಷಿಕ ಕೃಷ್ಣಪ್ಪ ಪೂಜಾರಿ ಚೆನ್ನಾವರ, ಸವಣೂರು ಪ.ಪೂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದಯಾನಂದ ಮಾಲೆತ್ತಾರು ಮೊದಲಾದವರು ಉಪಸ್ಥಿತರಿರರಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.