ಐಕ್ಯಯಾನ ಭಾವಗಾನ; ಶತಮಾನದ ಕವಿಗೆ ಗಾಯನ ನಮನ


Team Udayavani, Mar 7, 2018, 12:17 PM IST

7-March-10.jpg

ಸುಬ್ರಹ್ಮಣ್ಯ (ಕೊಳಂಬೆ ಪುಟ್ಟಣ್ಣ ಗೌಡ ವೇದಿಕೆ): ನಾಲ್ಕು ದಿಕ್ಕುಗಳಿಂದ ಹಸಿರು ಹೊದಿಕೆ ಹಾಸಿರುವ, ನಾಗರಾಧನೆಯ ಪ್ರಮುಖ ನೆಲೆಬೀಡು ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಎರಡನೆ ದಿನ ಬಹುಸಂಸ್ಕೃತಿಯ ಏಕತೆ ಸಾರುವ ಭಾವಗಾನ, ಶತಮಾನದ ಕವಿಗಳಿಗೆ ಗಾಯನ, ಅಕ್ಷರದ ನುಡಿ ನಮನ, ನೆಲದ ಬಗೆಗಿನ ಗೋಷ್ಠಿ, ಕವಿಗೋಷ್ಠಿಗಳು ಬಿತ್ತರಗೊಂಡವು.

ಕೊಳಂಬೆ ಪುಟ್ಟಣ್ಣ ಗೌಡ ವೇದಿಕೆಯಲ್ಲಿ ಹಿರಿಯ-ಕಿರಿಯ ಬರೆಹಗಾರರು ಅಕ್ಷರ ಜಾತ್ರೆಯಲ್ಲಿ ಗಾಯನ, ಮಾತು, ಅಭಿನಯದ ಮೂಲಕ ಸಾಹಿತ್ಯದ ಬಹುಬಗೆಯ ಆಯಾಮಗಳನ್ನು ತೆರೆದಿಟ್ಟರು. ಕುಲ್ಕುಂದ ಶಿವರಾವ್‌ (ನಿರಂಜನ) ವೇದಿಕೆಯಲ್ಲಿ ನೆರೆದಿದ್ದ ಸಾಹಿತ್ಯಾಸಕ್ತರು ಇವುಗಳಿಗೆ ಸಾಕ್ಷಿಯಾದರು. ಎರಡನೆ ದಿನ 3,000ಕ್ಕೂ ಮಿಕ್ಕಿ ಅಕ್ಷರ ಪ್ರೇಮಿಗಳು ಸಮ್ಮೇಳನಕ್ಕೆ ಆಗಮಿಸಿದ್ದರು.

ಆರು ವಿಚಾರಗೋಷ್ಠಿಗಳು
ಮಂಗಳವಾರ ವಿವಿಧ ಶೀರ್ಷಿಕೆಗಳಲ್ಲಿ ಆರು ವಿಚಾರ ಗೋಷ್ಠಿಗಳು ನಡೆದವು. ಸಾಹಿತ್ಯ-ಸಂಸ್ಕೃತಿ ವಿಕಾಸ, ತೌಳವ ಚಿಂತನೆ, ಕನ್ನಡ ಶಾಲೆಗಳ ಅಭಿವೃದ್ಧಿ ಪರಿಕಲ್ಪನೆ, ನಿರಂಜನ ಬದುಕು-ಬರಹ, ಸಂವಾದ-ಸಾಹಿತ್ಯದ ಪ್ರೇರಣೆಗಳು, ಸುಬ್ರಹ್ಮಣ್ಯದ ಇತಿಹಾಸ-ಸಾಂಸ್ಕೃತಿಕ ಸಂಪದ, ಕನ್ನಡ ಅನುಷ್ಠಾನ ವಿಚಾರದಲ್ಲಿ ವಿಷಯ ತಜ್ಞರು ಅಭಿಪ್ರಾಯ ಮಂಡಿಸಿದರು. ಭಾವಗಾನ, ಶತಮಾನದ ಕವಿ ಗೋಪಾಲಕೃಷ್ಣ ಅಡಿಗರಿಗೆ ಕವಿ ನಮನ, ಶತಮಾನದ ಕವಿ ಮಂದಾರ ಕೇಶವ ಭಟ್‌ ಅವರಿಗೆ ಕವಿ ನಮನ, ಯುವ ಕವಿಗೋಷ್ಠಿ ಹಾಗೂ ಸಾಧಕರಿಗೆ ಸಮ್ಮಾನ, ಸಾಂಸ್ಕೃತಿಕ ರಂಗದಲ್ಲಿ ಯಕ್ಷಗಾನ ತಾಳಮದ್ದಳೆ ಪ್ರದರ್ಶನಗೊಂಡಿತ್ತು.

ಬಿಡುವಿಲ್ಲದ ಕಾರ್ಯಕ್ರಮ
ಉದಯರಾಗದಿಂದ ತೊಡಗಿ ಸಂಜೆಯ ಸಾಂಸ್ಕತಿಕ ಕಾರ್ಯಕ್ರಮದ ತನಕ 125ಕ್ಕೂ ಅಧಿಕ ಕಲಾವಿದರು, ಸಾಹಿತಿಗಳು ನಾನಾ ರೂಪದಲ್ಲಿ ವೇದಿಕೆಯೇರಿ ಸಾಹಿತ್ಯದ ಕಂಪು ಪಸರಿಸಿದರು. ಮೂರು ದಿನವೂ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಒಂದೆಡೆ ವಿಚಾರ ಮಂಡನೆ ನಡೆದರೆ, ಇನ್ನೊಂದೆಡೆ ಬಗೆ-ಬಗೆಯ ಗೀತೆಗಳು ಮನ ತಣಿಸಿತ್ತು.

ಅತಿಥಿ ದೇವೋಭವ
ಮಂಗಳವಾರ ಅಕ್ಷರ ಪ್ರೇಮಿಗಳ ಉದರ ತಣಿಸಲು ನಾನಾ ಬಗೆಯ ಮೆನುಗಳನ್ನು ಸಿದ್ಧಪಡಿಸಲಾಗಿತ್ತು. ಬೆಳಗ್ಗೆ 350 ಮಂದಿಗೆ ಇಡ್ಲಿ, ವಡೆ, ಕಾಫಿ, ಚಹಾ, ಬೆಳಗ್ಗೆ 10ಕ್ಕೆ ಚಹಾ, ಬಿಸ್ಕತ್‌, ಮಧ್ಯಾಹ್ನ 1,500ಕ್ಕೂ ಮಿಕ್ಕಿ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಅನ್ನ, ಸಾಂಬಾರು, ತೋವೆ, ಸಾರು, ಗುಜ್ಜೆ ಪಲ್ಯ, ಕಡ್ಲೆಬೇಳೆ ಪಾಯಸ, ಪೈನಾಪಲ್‌ ಶಿರಾ, ಮಜ್ಜಿಗೆ, ಸಂಜೆ 400 ಮಂದಿಗೆ ಚಹಾ, ಕಾಫಿ, ತಿಂಡಿ, ರಾತ್ರಿ ಸಾವಿರಕ್ಕೂ ಅಧಿಕ ಮಂದಿಗೆ ಅನ್ನ, ಸಾರು, ಸಾಂಬಾರು, ಪಾಯಸ, ಪಲ್ಯ, ಚಟ್ನಿ, ಮಜ್ಜಿಗೆ ಸವಿಯನ್ನು ಉಣಬಡಿಸಲಾಯಿತು.

ವಿದ್ಯಾರ್ಥಿಗಳೇ ಅಧಿಕ
ಸಮ್ಮೇಳನದಲ್ಲಿ ಎರಡನೇ ದಿನವೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿತ್ತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಆಗಮಿಸಿದ್ದರು. ಸಭಾಂಗಣದಲ್ಲಿ ಶೇ. 75ಕ್ಕಿಂತ ಅಧಿಕ ಭಾಗ ವಿದ್ಯಾರ್ಥಿಗಳಿಂದಲೇ ತುಂಬಿತ್ತು. ಅಕ್ಷರ ಜಾತ್ರೆಯಲ್ಲಿ ಕಾಣಿಸಿಕೊಳ್ಳುವ ಮಧ್ಯ ವಯಸ್ಕರು, ಹಿರಿಯರ ಸಂಖ್ಯೆ ಕಡಿಮೆ ಇತ್ತು. ವಸ್ತು ಪ್ರದರ್ಶನದ ಮಳಿಗೆಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವೀಕ್ಷಿಸಿದರು. ಆರ್ಟ್‌ ಗ್ಯಾಲರಿ, ಪುರಾತನ ಪರಿಕರ ಹಾಗೂ ಕತ್ತಿ, ಗುರಾಣಿ ತಯಾರಿ ಕೇಂದ್ರದಲ್ಲಿ ಅಕ್ಷರ ಪ್ರೇಮಿಗಳು ಕುತೂಹಲದಿಂದ ನೆರೆದು, ವಿಚಾರಿಸುತ್ತಿದ್ದರು.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.