4 ವರ್ಷಗಳಲ್ಲಿ 17 ಲಕ್ಷ  ರೂ. ದಂಡ ವಸೂಲಿ


Team Udayavani, May 21, 2018, 9:57 AM IST

21-may-1.jpg

ಮಹಾನಗರ: ಬಸ್‌ಗಳಲ್ಲಿ ಟಿಕೆಟ್‌ ರಹಿತ ವಾಗಿ ಪ್ರಯಾಣಿಸುವುದು ಕಾನೂನು ಉಲ್ಲಂಸಿದಂತೆ. ನಾಲ್ಕು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೆಎಸ್‌ಆರ್‌ಟಿಸಿ ವಿಭಾಗ ಟಿಕೆಟ್‌ರಹಿತ ಪ್ರಯಾಣಿಸುವುದವರಿಂದ 17 ಲಕ್ಷ ರೂ.ಗೂ ಹೆಚ್ಚಿನ ದಂಡ ವಸೂಲಿ ಮಾಡಿದೆ.

ಪ್ರಯಾಣಿಕರಿಗೆ ಅರಿವು ಮೂಡಿಸಿದರೂ ದಿನೇ ದಿನೇ ಟಿಕೆಟ್‌ ರಹಿತ ಪ್ರಯಾಣ ಮಾಡುವವರು ಸಂಖ್ಯೆ ಹೆಚ್ಚಾಗುತ್ತಿರುವುದು ಖೇದಕರ. ವರ್ಷದಿಂದ ವರ್ಷಕ್ಕೆ ದಂಡ ಪ್ರಮಾಣ ಹೆಚ್ಚಾಗುತ್ತಿದ್ದು, ಆದರೂ ಆದಾಯ ಸೋರಿಕೆ ತಪ್ಪಿಸಲು ನಿಗಮದಿಂದ ಸಾಧ್ಯವಾಗಲಿಲ್ಲ. ಐದು ವರ್ಷಗಳಿಗೆ ಹೋಲಿಕೆ ಮಾಡಿದರೆ ಕಳೆದ ವರ್ಷ ಅತೀ ಹೆಚ್ಚಿನ ದಂಡ ವಸೂಲಾಗಿದೆ.

ಟಿಕೆಟ್‌ ಪಡೆದೇ ಪ್ರಯಾಣ ಮಾಡಬೇಕು ಎಂದು ಕೆಎಸ್‌ಆರ್‌ಟಿಸಿ ನಿಗಮದ ವತಿಯಿಂದ ಪ್ರಯಾಣಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಬಸ್‌ ಟಿಕೆಟ್‌ನಲ್ಲಿಯೇ ಟಿಕೆಟ್‌ ಪಡೆದು ಪ್ರಯಾಣಿಸಿ ಎಂದು ನಮೂದಾಗಿದ್ದು, ಪ್ರತಿಯೊಬ್ಬರೂ ಟಿಕೆಟ್‌ ಪಡೆದು ಪ್ರಯಾಣಿಸಬೇಕೆಂದು ಬಸ್‌ ಒಳಗಡೆ ಬರೆಯಲಾಗಿದೆ. ಇಷ್ಟೇ ಅಲ್ಲದೆ, ಬಸ್‌ ನಿಲ್ದಾಣಗಳಲ್ಲಿ ಇರುವಂತಹ ಎಲ್‌ಸಿಡಿಗಳಲ್ಲಿ ಸೇರಿದಂತೆ ಧ್ವನಿವರ್ಧಕ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಟಿಕೆಟ್‌ ಪಡೆದುಕೊಳ್ಳದೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚುತ್ತಿರುವುದು ವಿಪರ್ಯಾಸ.

ಟಿಕೆಟ್‌ ಪಡೆಯುವುದು ಪ್ರಯಾಣಿಕರ ಹೊಣೆ
ನಿರ್ವಾಹಕರು ಟಿಕೆಟ್‌ ಕೊಡಲಿಲ್ಲ ಎಂದು ಪ್ರಯಾಣಿಕರು ತಪ್ಪಿಸಿಕೊಳ್ಳುವ ಹಾಗಿಲ್ಲ. ಏಕೆಂದರೆ, ನಿರ್ವಾಹಕರು ಬಸ್‌ ಟಿಕೆಟ್‌ ಕೊಡದಿದ್ದರೂ ಟಿಕೆಟ್‌ ಕೇಳಿ ಪಡೆದುಕೊಳ್ಳುವುದು ಪ್ರಯಾಣಿಕರ ಜವಾಬ್ದಾರಿ ಎಂದು ಕಾನೂನು ಹೇಳುತ್ತದೆ. ಆದ್ದರಿಂದ ನಿರ್ವಾಹಕನ ಜತೆಗೆ ಪ್ರಯಾಣಿಕ ಕೂಡ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. 

ಹತ್ತು ಪಟ್ಟು ದಂಡ
ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ವೇಳೆಯಲ್ಲಿ ಪ್ರಯಾಣಿಕರು ಟಿಕೆಟ್‌ ರಹಿತವಾಗಿ ಸಿಕ್ಕಿಬಿದ್ದರೆ ಟಿಕೆಟ್‌ ದರಕ್ಕಿಂತ ಹತ್ತು ಪಟ್ಟು ದಂಡ ವಿಧಿಸಲಾಗುತ್ತದೆ. ಒಂದು ವೇಳೆ ಪ್ರಯಾಣಿಕ ದಂಡ ನೀಡಲು ಒಪ್ಪದಿದ್ದರೆ ಅವರನ್ನು ಹೆಚ್ಚಿನ ವಿಚಾರಣೆಗೆ ಹತ್ತಿರದ ಪೊಲೀಸರಿಗೆ ಒಪ್ಪಿಸಲಾಗುತ್ತದೆ.

ಪ್ರಯಾಣಿಕರ ಜವಾಬ್ದಾರಿ
ಪ್ರತಿಯೊಬ್ಬರೂ ಟಿಕೆಟ್‌ ಪಡೆದುಕೊಂಡೇ ಪ್ರಯಾಣಿಸಬೇಕು. ಟಿಕೆಟ್‌ ರಹಿತ ಪ್ರಯಾಣಕ್ಕೆ ಟಿಕೆಟ್‌ ದರದ ಹತ್ತು ಪಟ್ಟು ದಂಡ ವಿಧಿಸಲಾಗುತ್ತದೆ. ಒಪ್ಪದಿದ್ದರೆ ಹೆಚ್ಚಿನ ವಿಚಾರಣೆಗೆ ಪೊಲೀಸರಿಗೆ ಒಪ್ಪಿಸಬಹುದು. ಕಾನೂನಿನ ಪ್ರಕಾರ ನಿರ್ವಾಹಕರು ಬಸ್‌ ಟಿಕೆಟ್‌ ನೀಡದಿದ್ದರೂ ಟಿಕೆಟ್‌ ಕೇಳಿ ಪಡೆದುಕೊಳ್ಳುವುದು ಪ್ರಯಾಣಿಕರ ಜವಾಬ್ದಾರಿ.
 - ದೀಪಕ್‌ ಕುಮಾರ್‌, ಕೆಎಸ್‌ಆರ್‌ಟಿಸಿ
     ಮಂಗಳೂರು ವಿಭಾಗಾಧಿಕಾರಿ

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.