ದ.ಕ.: ಕಾಂಗ್ರೆಸ್‌ ಅಭ್ಯರ್ಥಿ ಇಂದು ಘೋಷಣೆ?


Team Udayavani, Mar 23, 2019, 12:30 AM IST

congress-700.jpg

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯ ಆಯ್ಕೆ ಸಂಬಂಧ ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣ ಸಮಿತಿಯ ಮಹತ್ವದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಂಡಿದ್ದು, ಅಭ್ಯರ್ಥಿಯ ಹೆಸರು ಶನಿವಾರ ಘೋಷಣೆಯಾಗುವ ಸಾಧ್ಯತೆಯಿದೆ.
 
ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳು ಹೊಸದಿಲ್ಲಿಯಲ್ಲಿ ಎರಡು ದಿನಗಳಿಂದ ಬೀಡು ಬಿಟ್ಟಿದ್ದು, ಅಧಿಕೃತ ಘೋಷಣೆಗಾಗಿ ಕಾಯುತ್ತಿದ್ದಾರೆ. ಪಕ್ಷದ ವರಿಷ್ಠರು ಆಕಾಂಕ್ಷಿಗಳ ಜತೆ ಚರ್ಚೆ ನಡೆಸಿ ಅವರ ಅಭಿಪ್ರಾಯಗಳನ್ನು ಗುರುವಾರ ಆಲಿಸಿದ್ದರು. ಶುಕ್ರವಾರ ಕರ್ನಾಟಕ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಕುರಿತು ಸಂಜೆ 3.30ರಿಂದ ಕೇಂದ್ರ ಚುನಾವಣ ಸಮಿತಿಯ ಸಭೆ ನಡೆದಿದ್ದು, ಸುಮಾರು ಒಂದೂವರೆ ತಾಸು ಚರ್ಚೆ ನಡೆದಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಲಿ, ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಹಾಗೂ ಪಕ್ಷದ ಮೈಸೂರು ವಿಭಾಗದ ಉಸ್ತುವಾರಿ ಹಾಗೂ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್‌ ಉಪಸ್ಥಿತರಿದ್ದರು.

ಸಭೆಯಲ್ಲಿ ಜಾತಿ ಸಮೀಕರಣ, ಯುವ ಪ್ರಾತಿನಿಧ್ಯ ಸೇರಿದಂತೆ ಹಲವು ವಿಚಾರಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಅಂತಿಮವಾಗಿ ಬಿ.ಕೆ. ಹರಿಪ್ರಸಾದ್‌, ವಿನಯ ಕುಮಾರ್‌ ಸೊರಕೆ, ರಮಾನಾಥ ರೈ, ಮಿಥುನ್‌ ರೈ ಅವರ ಹೆಸರು ಮುನ್ನಲೆಗೆ ಬಂದಿತ್ತು. ಇದರ ಜತೆಗೆ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೆಸರು ಸಭೆಯಲ್ಲಿ ಚರ್ಚೆಗೆ ಬಂದಿದೆ ಎನ್ನುತ್ತವೆ ಮೂಲಗಳು.

ಕೇಂದ್ರ ಚುನಾವಣ ಸಮಿತಿ ಸಭೆಯ ಬಳಿಕವೂ ಅಭ್ಯರ್ಥಿ ಆಯ್ಕೆ ಕುರಿತ ಗಂಭೀರ ಚರ್ಚೆ ಮುಂದುವರಿದಿತ್ತು. ಕಾಂಗ್ರೆಸ್‌ನ ಮೂಲಗಳ ಪ್ರಕಾರ, ಸದ್ಯಕ್ಕೆ ಬಿ.ಕೆ. ಹರಿಪ್ರಸಾದ್‌ ಅವರ ಹೆಸರು ಮುಂಚೂಣಿಯಲ್ಲಿದೆ. ಅಂತಿಮವಾಗಿ ಯಾರು ಟಿಕೆಟ್‌ ಗಿಟ್ಟಿಸಿಕೊಳ್ಳುತ್ತಾರೆ ಎನ್ನುವ ಕುತೂಹಲ ಇನ್ನೂ ತಣಿದಿಲ್ಲ. 

ಸೋಮವಾರ ನಳಿನ್‌ ನಾಮಪತ್ರ ಸಲ್ಲಿಕೆ 
ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಆ ದಿನ ಬೆಳಗ್ಗೆ 9.30 ಗಂಟೆಗೆ ಬಂಟ್ಸ್‌ ಹಾಸ್ಟೆಲ್‌ನ ಬಿಜೆಪಿ ಚುನಾವಣ ಪ್ರಚಾರ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಮೂಲಕ ಸಾಗಿ 11 ಗಂಟೆಗೆ ನಾಮಪತ್ರ ಸಲ್ಲಿಸುವರು. 

ಕಾಂಗ್ರೆಸ್‌ ಅಭ್ಯರ್ಥಿಯ ಘೋಷಣೆ ಶನಿವಾರ ಆಗುವ ಸಾಧ್ಯತೆಗಳಿದ್ದು, ಸೋಮವಾರ ನಾಮಪತ್ರ ಸಲ್ಲಿಕೆ ನಡೆಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಪಕ್ಷದ ವತಿಯಿಂದ ಯಾವ ರೀತಿ ಕಾರ್ಯಕ್ರಮ ಸಂಘಟಿತವಾಗಲಿದೆ ಎಂಬುದು ಇನ್ನೂ ಬಹಿರಂಗಗೊಳ್ಳಬೇಕಿದೆ. 

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.